![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 8, 2022, 9:12 PM IST
ನವದೆಹಲಿ: ಸುಪ್ರೀಂಕೋರ್ಟ್ನಲ್ಲಿ ಕೂಡ ಈಗ ವಿಶ್ವಾಸ ಉಳಿದಿಲ್ಲ ಮತ್ತು ಕೆಲವೊಂದು ಸೂಕ್ಷ್ಮ ಪ್ರಕರಣಗಳನ್ನು ನಿಗದಿತ ನ್ಯಾಯಮೂರ್ತಿಗಳು ಇರುವ ನ್ಯಾಯಪೀಠಕ್ಕೆ ವಿಚಾರಣೆಗೆ ನೀಡಲಾಗುತ್ತದೆ ಎಂದು ರಾಜ್ಯಸಭೆ ಸದಸ್ಯ ಕಪಿಲ್ ಸಿಬಲ್ ಹೇಳಿದ್ದಾರೆ.
ಶನಿವಾರ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದ್ದ ಅಂಶ ಈಗ ವಿವಾದಕ್ಕೆ ಕಾರಣವಾಗಿದೆ. “ಪ್ರಸಕ್ತ ಸನ್ನಿವೇಶನದಲ್ಲಿ ಸುಪ್ರೀಂ ಕೋರ್ಟ್ ಮೇಲೆ ವಿಶ್ವಾಸ ಹೊರಟುಹೋಗಿದೆ. ಕೆಲವು ಪ್ರಕರಣಗಳನ್ನು ನಿಗದಿತ ನ್ಯಾಯಮೂರ್ತಿಗಳಿರುವ ಪೀಠಗಳಿಗೆ ಮಾತ್ರ ನೀಡಲಾಗುತ್ತಿದೆ. ಸುಪ್ರೀಂ ಕೋರ್ಟ್ನ ನ್ಯಾಯ ವಿಲೇವಾರಿ ವಿಚಾರದಲ್ಲಿ ಹೇಳುವುದಾರೆ, ಆಂತರಿಕ ಚಿತ್ರಣ ಬೇರೆಯದ್ದೇ ಆಗಿದೆ’ ಎಂದು ಹೇಳಿದ್ದರು.
ಆಕ್ಷೇಪ:
ಇದೊಂದು ನ್ಯಾಯಾಂಗ ನಿಂದನೆಯ ಪ್ರಕರಣ ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಹೇಳಿದ್ದರೆ, ಆಲ್ ಇಂಡಿಯಾ ಬಾರ್ ಅಸೋಸಿಯೇಷನ್ ಸುಪ್ರೀಂಕೋರ್ಟ್ನಲ್ಲಿ ಕಾನೂನಾತ್ಮಕ ಅಂಶಗಳ ಆಧರಿಸಿಯೇ ನ್ಯಾಯ ನಿರ್ಣಯ ಪ್ರಕ್ರಿಯೆ ನಡೆಯುತ್ತದೆ. ಇದೊಂದು ಆಕ್ಷೇಪಾರ್ಹ ಹೇಳಿಕೆ ಎಂದು ಟೀಕಿಸಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.