ನಾನೊಬ್ಬ ಸಾಮಾನ್ಯ; ಶಿಷ್ಟಾಚಾರ ಗೊತ್ತಿಲ್ಲ: ಮೋದಿ hugplomacy
Team Udayavani, Jan 20, 2018, 10:48 AM IST
ಹೊಸದಿಲ್ಲಿ : ನಾನೊಬ್ಬ ಸಾಮಾನ್ಯ ಮನುಷ್ಯ; ನನಗೆ ಶಿಷ್ಟಾಚಾರ ಗೊತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಉತ್ತಮ ಬಾಂಧವ್ಯ ಹೊಂದಿರುವ ನಾಯಕರಿಗೆ ಅಪ್ಪುಗೆಯ ಸ್ವಾಗತ ನೀಡುವ ಮೂಲಕ “ಅಪ್ಪುಗೆ-ಮುತ್ಸದ್ದಿತನ’ವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಮಾಡಿರುವ ಲೇವಡಿಗೆ ಉತ್ತರವಾಗಿ ಮೋದಿ ಈ ಮಾತುಗಳನ್ನು ಹೇಳಿದರು.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಪ್ರಧಾನಿ ಮೋದಿ ಆತ್ಮೀಯ ಅಪ್ಪುಗೆಯ ಸ್ವಾಗತ ನೀಡಿದ್ದರು. ಹಿಂದೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕಾಣುವಾಗಲೂ ಮೋದಿ ಅಪ್ಪುಗೆಯ ಆತ್ಮೀಯತೆಯನ್ನು ತೋರಿದ್ದರು. ಕಾಂಗ್ರೆಸ್ ಪಕ್ಷ ಮೋದಿ ಅವರ ಈ ಪ್ರಚಾರ ತಂತ್ರವನ್ನು “ಅಪ್ಪುಗೆ ಮುತ್ಸದ್ದಿತನ’ದ ಪ್ರದರ್ಶನವೆಂದು ಲೇವಡಿ ಮಾಡಿತ್ತು.
ಒಂದು ವೇಳೆ ನನಗೂ ಇತರರಂತೆ “ತರಬೇತಿ’ ಸಿಕ್ಕಿರುತ್ತಿದ್ದರೆ ನಾನೂ ಶಿಷ್ಟಾಚಾರವನ್ನು ಅನುಸರಿಸುತ್ತಿದ್ದೆ; ಹಸ್ತಲಾಘವ ಮಾಡುತ್ತಿದ್ದೆ; ವಿಶ್ವ ನಾಯಕರೊಂದಿಗೆ ನಿಂತು ಎಡ ಬಲ ನೋಡುತ್ತಿದ್ದೆ’ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ಗೆ ತಿರುಗೇಟು ನೀಡಿದರು.
“ನಾನೊಬ್ಬ ಸಾಮಾನ್ಯ ಮನುಷ್ಯ; ನನ್ನ ದೇಶಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಲು ನಾನು ಯತ್ನಿಸುತ್ತೇನೆ’ ಎಂದು ಪ್ರಧಾನ ಮೋದಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
“ನನ್ನ ಮೂಲ ಗುಣ ಏನೆಂದರೆ ಪ್ರತಿಕೂಲತೆಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸುವುದೇ ಆಗಿದೆ’ ಎಂದು ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.