IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Team Udayavani, Apr 20, 2024, 6:45 AM IST
ಪುಣೆ: ದೇಶದ ಬಹುತೇಕ ಭಾಗದಲ್ಲಿ ಒಣಹವೆ ಮುಂದುವರಿದಿರು ವಂತೆಯೇ, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) “ಬರ’ಸಿಡಿಲಿನ ಸುದ್ದಿಯೊಂದನ್ನು ನೀಡಿದೆ. ದೇಶದ ಸುಮಾರು 125 ಜಿಲ್ಲೆಗಳು ಭಾರೀ ಪ್ರಮಾಣದ ಬರ ಪರಿಸ್ಥಿತಿ ಎದುರಿಸುತ್ತಿದೆ ಎಂದು ಇಲಾಖೆಯ ದತ್ತಾಂಶ ತಿಳಿಸಿದೆ.
ಮಾ. 14ರಿಂದ ಎ. 10ರ ವರೆಗಿನ ದತ್ತಾಂಶಗಳ ಆಧಾರದಲ್ಲಿ ಐಎಂಡಿ ಈ ವರದಿ ನೀಡಿದೆ. 2023ರ ಇದೇ ಅವಧಿ ಯಲ್ಲಿ 33 ಜಿಲ್ಲೆಗಳಲ್ಲಿ ಬರಗಾಲ ಇತ್ತು. ಈ ವರ್ಷದ ಮಾರ್ಚ್ ಆರಂಭದ ವೇಳೆಗೆ 98 ಜಿಲ್ಲೆಗಳಲ್ಲಿ ಬರ ಆವರಿಸಿತ್ತು. ಅನಂತರದಲ್ಲಿ ಕರ್ನಾಟಕ ಸೇರಿ ಒಟ್ಟು 23 ರಾಜ್ಯಗಳು, ಕೇಂದ್ರಾ ಡಳಿತ ಪ್ರದೇ ಶ ಗಳ ಒಟ್ಟು 125 ಜಿಲ್ಲೆಗಳಿಗೆ ಬರದ ಬಿಸಿ ತಟ್ಟಿತು ಎಂದು ವರದಿ ಹೇಳಿದೆ.
ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಗುಜರಾತ್, ಹರಿಯಾಣ, ಹಿಮಾ ಚಲ, ಕರ್ನಾಟಕ, ಮಹಾರಾಷ್ಟ್ರ, ಉತ್ತರಾಖಂಡ ಮತ್ತು ತಮಿಳುನಾಡಿನ ಮೇಲೆ ಬರವು ಹೆಚ್ಚಿನ ದುಷ್ಪರಿಣಾಮ ವನ್ನು ಬೀರಿದೆ. ಈ ರಾಜ್ಯಗಳಲ್ಲಿನ ಹಲವು ಜಿಲ್ಲೆಗಳಲ್ಲಿ ಒಣಹವೆಯ ಜತೆಗೆ ಬಿಸಿಲಿನ ಧಗೆಯೂ ಹೆಚ್ಚಿದೆ. ಮಳೆಯ ಕೊರತೆಯ ಪರಿಣಾಮ ವೆಂಬಂತೆ, ನೀರಿಗೂ ತತ್ವಾರ ಉಂಟಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.