![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 20, 2022, 8:14 PM IST
ನವದೆಹಲಿ: ಒಂದೆರಡು ದಿನ ಬಿಡುವು ಕೊಟ್ಟಿದ್ದ ವರುಣ ಮತ್ತೆ ಅಬ್ಬರಿಸತೊಡಗಿದ್ದಾನೆ. ಉತ್ತರಾಂಖಡ, ಜಮ್ಮು ಮತ್ತು ಕಾಶ್ಮೀರ, ದೆಹಲಿ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ.
ಉತ್ತರಾಖಂಡದಲ್ಲಿ ಭಾರೀ ಮಳೆಯಿಂದ ಅನೇಕ ಕಡೆ ಭೂಕುಸಿತ ಉಂಟಾಗಿದ್ದು, ಪ್ರವಾಹ ಪರಿಸ್ಥಿತಿಯೂ ಎದುರಾಗಿದೆ. ಇಲ್ಲಿನ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಬುಧವಾರ ಎಲ್ಲ ಶಾಲೆಗಳಿಗೂ ರಜೆ ಘೋಷಿಸಲಾಗಿತ್ತು.
ದಿಢೀರ್ ಪ್ರವಾಹ:
ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಬುಧವಾರ ಮೇಘ ಸ್ಫೋಟ ಸಂಭವಿಸಿ ದಿಢೀರ್ ಪ್ರವಾಹ ಉಂಟಾಗಿದೆ. ಪರಿಣಾಮ ಶಾಲಾ ಕಟ್ಟಡಗಳು ಸೇರಿದಂತೆ 13 ಕಟ್ಟಡಗಳನ್ನು ಕೊಚ್ಚಿಹೋಗಿದ್ದು, 20ರಷ್ಟು ಸೇತುವೆಗಳು ಹಾನಿಗೀಡಾಗಿವೆ.
ವಿಮಾನ ಸಂಚಾರಕ್ಕೆ ಅಡ್ಡಿ:
ದೆಹಲಿಯಲ್ಲೂ ಬುಧವಾರ ಮಧ್ಯಾಹ್ನದಿಂದೀಚೆಗೆ ಧಾರಾಕಾರ ಮಳೆಯಾಗುತ್ತಿರುವ ಕಾರಣ, ವಿಮಾನಗಳ ಸಂಚಾರಕ್ಕೂ ಅಡ್ಡಿಯಾಗಿದೆ. ದೆಹಲಿ ಏರ್ಪೋರ್ಟ್ನಲ್ಲಿ 7 ವಿಮಾನಗಳ ಪಥ ಬದಲಿಸಿದರೆ, 40 ವಿಮಾನಗಳ ಸಂಚಾರ ವಿಳಂಭವಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.