![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 28, 2021, 2:34 PM IST
ನವದೆಹಲಿ: ಉತ್ತರ ಈಶಾನ್ಯ ಮತ್ತು ಹಿಮಾಲಯನ್ ಪ್ರದೇಶಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು
ಭಾರತೀಯ ಹವಾಮಾನ ಇಲಾಖೆ ಹೊಸದಾಗಿ ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:2000 ಕಿ.ಮೀ.ವರೆಗೂ ದಾಳಿ ನಡೆಸಬಲ್ಲ ಅತ್ಯಾಧುನಿಕ ಅಗ್ನಿ ಪ್ರೈಮ್ ಕ್ಷಿಪಣಿ ಯಶಸ್ವಿ ಉಡಾವಣೆ
ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ ಪ್ರಕಾರ, ಪಶ್ಚಿಮಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ
ಮತ್ತು ಉತ್ತರ ಈಶಾನ್ಯ ರಾಜ್ಯಗಳಲ್ಲಿ ಜುಲೈ 1ರವರೆಗೆ ಭಾರೀ ಗಾಳಿ, ಮಳೆಯಾಗಲಿದೆ ಎಂದು ಹೇಳಿದೆ.
ಮುಂದಿನ ಐದು ದಿನಗಳ ಕಾಲ ಪಶ್ಚಿಮಬಂಗಾಳ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆಯಾಗಲಿದ್ದು, ಜೂನ್ 27,
28ರಂದು ಅರುಣಾಚಲ ಪ್ರದೇಶದಲ್ಲಿ, ಜೂನ್ 30ರಿಂದ ನಾಗಾಲ್ಯಾಂಡ್, ಮಣಿಪುರ್, ಮಿಜೋರಾಂ ಮತ್ತು ತ್ರಿಪುರಾದಲ್ಲಿ
ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಅಲ್ಲದೇ ಮುಂಬಯಿ, ಥಾಣೆ, ನವಿ ಮುಂಬಯಿ ಹಾಗೂ ಸುತ್ತಮುತ್ತ ಪ್ರದೇಶದಲ್ಲಿ 24ಗಂಟೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು
ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಕೂಡಾ ಮುಂಬಯಿ, ಥಾಣೆ, ನವಿ ಮುಂಬಯಿಯಲ್ಲಿ ಕಳೆದ 24ಗಂಟೆಯಲ್ಲಿ
ಮಳೆಯಾಗಿರುವುದಾಗಿ ವಿವರಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.