![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 8, 2022, 5:46 PM IST
ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಿದ್ದು, 182 ಕ್ಷೇತ್ರಗಳಲ್ಲಿ ಕೇವಲ 16 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಇದರೊಂದಿಗೆ ಕಾಂಗ್ರೆಸ್ ವಿಪಕ್ಷ ನಾಯಕನ ಸ್ಥಾನವನ್ನೂ ಕಳೆದುಕೊಳ್ಳುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ʼಖಾಕಿʼ ವೆಬ್ ಸಿರೀಸ್: ಮೂಲ ಕಥೆ ಬಳಸಿಕೊಳ್ಳಲು ಲಕ್ಷಾಂತರ ರೂ. ಡೀಲ್ ಆರೋಪ: ಐಪಿಎಸ್ ಅಧಿಕಾರಿ ವಿರುದ್ಧ ದೂರು ದಾಖಲು
182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ಪಡೆಯಲು ಕಾಂಗ್ರೆಸ್ ಗೆ ಕನಿಷ್ಠ ಶೇ.10ರಷ್ಟು ಪ್ರತಿಶತ ಶಾಸಕರು (ಕನಿಷ್ಠ 18) ಗೆಲ್ಲಬೇಕಾದ ಅಗತ್ಯವಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು, ಪ್ರತಿಪಕ್ಷ ನಾಯಕನ ಸ್ಥಾನ ಪಡೆಯಲು ಬೇಕಾದ ಶಾಸಕರ ಬಲವನ್ನೂ ಕಳೆದುಕೊಂಡಿದೆ.
2017ರಲ್ಲಿ ಭಾರತೀಯ ಜನತಾ ಪಕ್ಷ 99 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಿತ್ತು. ಕಾಂಗ್ರೆಸ್ ಪಕ್ಷ 77 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಪ್ರಬಲ ಪ್ರತಿಪಕ್ಷವಾಗಿ ಹೊರಹೊಮ್ಮಿತ್ತು. ವಿಪರ್ಯಾಸವೆಂದರೆ 2022ರ ಚುನಾವಣೆಯಲ್ಲಿ ಕಳೆದ ಬಾರಿ ಗೆಲುವು ಸಾಧಿಸಿದ 77 ಸ್ಥಾನಗಳ ಪೈಕಿ 62 ಕ್ಷೇತ್ರಗಳಲ್ಲಿ ಪರಾಜಯಗೊಂಡು, ಕೇವಲ 16 ಸ್ಥಾನಗಳಲ್ಲಷ್ಟೇ ಜಯ ಸಾಧಿಸಿ ಮುಖಭಂಗಕ್ಕೀಡಾಗಿದೆ.
2014, 2019ರ ಚುನಾವಣಾ ಫಲಿತಾಂಶದ ನಂತರ ಲೋಕಸಭೆಯಲ್ಲೂ ಕೂಡಾ ಕಾಂಗ್ರೆಸ್ ವಿಪಕ್ಷ ನಾಯಕನ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ 2014ರಲ್ಲಿ ಕೇವಲ 44 ಸ್ಥಾನ ಗಳಿಸಿದ್ದು, 2019ರಲ್ಲಿ 52 ಸ್ಥಾನಗಳಲ್ಲಷ್ಟೇ ಗೆಲುವು ಸಾಧಿಸಿತ್ತು. ಆದರೂ ಕಾಂಗ್ರೆಸ್ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲು ಪ್ರಯತ್ನಿಸಿತ್ತು. ಆಗ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ನಿಯಮಗಳ ಅನ್ವಯ ಲೋಕಸಭೆಯ ವಿಪಕ್ಷ ನಾಯಕರಾಗಲು 55 ಸ್ಥಾನಗಳ ಅಗತ್ಯವಿದೆ ಎಂದು ಹೇಳಿ ಕಾಂಗ್ರೆಸ್ ಪ್ರಯತ್ನಕ್ಕೆ ಅಂಕುಶ ಹಾಕಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.