![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 9, 2023, 2:58 PM IST
ಲಕ್ನೋ : ಹವಾಮಾನ ವೈಪರೀತ್ಯದಿಂದ ಉಂಟಾಗುತ್ತಿರುವ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಗೋವು ಆಧಾರಿತ ನೈಸರ್ಗಿಕ ಕೃಷಿಗೆ ಒತ್ತು ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ (ಬಿಎಚ್ಯು) ಸ್ವತಂತ್ರತಾ ಭವನದಲ್ಲಿ ಆಯೋಜಿಸಲಾದ ಮೂರು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ‘ಸುಫ್ಲಾಮ್’ ಎರಡನೇ ದಿನದಂದು ಅವರು ರೈತರನ್ನು ಉದ್ದೇಶಿಸಿ ಮಾತನಾಡಿ, “ಹವಾಮಾನ ಬದಲಾವಣೆಯಿಂದಾಗಿ ಮಣ್ಣು ಮತ್ತು ನೀರಿಗೆ ದೊಡ್ಡ ನಷ್ಟ ಉಂಟಾಗಿದೆ. ಭೂಮಿ ತಾಯಿಯ ಜೊತೆ ಚೆಲ್ಲಾಟವಾಡುವುದು ತಪ್ಪಾಗಿದ್ದು, ಇದನ್ನು ಯಾವುದೇ ಬೆಲೆ ತೆತ್ತಾದರೂ ನಿಲ್ಲಿಸಬೇಕು ಎಂದರು.
‘ರಾಸಾಯನಿಕ ಕೃಷಿಯ ಬದಲು ಹಸು ಆಧಾರಿತ ನೈಸರ್ಗಿಕ ಕೃಷಿ ಮಾಡುವುದು ಅಗತ್ಯ. ಈ ರೀತಿಯಕೃಷಿಗೆ ಉತ್ತೇಜನ ನೀಡಲಾಗುವುದು. ಇದಕ್ಕಾಗಿ ನ್ಯಾಚುರಲ್ ಕೌನ್ಸಿಲ್ ಅನ್ನು ರಚಿಸಲಾಗಿದೆ. ಜನರು ಪರಿಸರವನ್ನು ವಿಷಪೂರಿತಗೊಳಿಸುತ್ತಿದ್ದಾರೆ ಆದ್ದರಿಂದ ನೈಸರ್ಗಿಕ ಅಂಶಗಳನ್ನು ಉಳಿಸಬೇಕು. ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ ಗಂಭೀರವಾಗಿದೆ ಎಂದರು.
ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಭಾರತದ ಸಂಸ್ಕೃತಿಯು ವಸುದೈವ ಕುಟುಂಬಕಂ ತತ್ವಗಳನ್ನು ಆಧರಿಸಿದ್ದು, ಪೂರ್ವಜರ ಈ ಕಲ್ಪನೆಗೆ ಹೆಚ್ಚಿನ ಶಕ್ತಿ ನೀಡಬೇಕಾಗಿದೆ ಎಂದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.