ಬಂಗಾಳ ಚುನಾವಣಾ ಹಿಂಸಾಚಾರ: ಸ್ವತಂತ್ರ ಅಭ್ಯರ್ಥಿಯ ಮಗಳ ಹಣೆಗೆ ಗುಂಡು ಹಾರಿಸಿದ ದುಷ್ಕರ್ಮಿಗಳು
Team Udayavani, Jul 8, 2023, 2:48 PM IST
ಹೂಗ್ಲಿ: ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಪಂಚಾಯತಿ ಚುನಾವಣೆಗೆ ಮತದಾನ ನಡೆಯುತ್ತಿದ್ದಾಗ ಸ್ವತಂತ್ರ ಅಭ್ಯರ್ಥಿಯೊಬ್ಬರ ಮಗಳ ಹಣೆಗೆ ಗುಂಡು ಹಾರಿಸಿದ ಘಟನೆ ತಾರಕೇಶ್ವರದಲ್ಲಿ ಈ ಘಟನೆ ನಡೆದಿದ್ದು, ಪ್ರದೇಶದಲ್ಲಿ ಆತಂಕ ಮೂಡಿಸಿದೆ.
ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಆಡಳಿತಾರೂಢ ತೃಣಮೂಲ ಈ ಆರೋಪಗಳನ್ನು ತಳ್ಳಿ ಹಾಕಿದೆ.
20 ವರ್ಷದ ಚಂದನಾ ಸಿಂಗ್ ಅವರನ್ನು ಕೋಲ್ಕತ್ತಾ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ. ಅಪರಾಧಿಗಳ ಗುಂಪೊಂದು ಅವರ ಮನೆಗೆ ನುಗ್ಗಿ ಅವರ ಕುಟುಂಬ ಸದಸ್ಯರನ್ನು ಬಂದೂಕಿನಿಂದ ಥಳಿಸಿದ್ದಾರೆ ಎಂದು ಆಕೆಯ ತಂದೆ ಪಿಂಟು ಸಿಂಗ್ ಆರೋಪಿಸಿದ್ದಾರೆ.
ಘಟನಾ ಸ್ಥಳದಿಂದ ಗುಂಡುಗಳು ಮತ್ತು ಬಾಂಬ್ ಗಳ ಶೆಲ್ ಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಪೊಲೀಸರಿಗೆ ಮಾಹಿತಿ ನೀಡಿದರೂ, ಪೊಲೀಸರು ಸ್ಥಳದಿಂದ ಬುಲೆಟ್ ಗಳು ಮತ್ತು ಬಾಂಬ್ ಗಳನ್ನು ವಶಪಡಿಸಿಕೊಳ್ಳಲು ಯಾವುದೇ ತ್ವರಿತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.
ಇದನ್ನೂ ಓದಿ:Ashes: ಹೇಡಿಂಗ್ಲೆ ಮೈದಾನದೊಳಗೆ ಕೋಚ್ ಬ್ರೆಂಡನ್ ಮೆಕಲಮ್ ಗೆ ಪ್ರವೇಶ ನಿರಾಕರಣೆ
ಆಡಳಿತಾರೂಢ ಟಿಎಂಸಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಪಿಂಟು ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಮೂರು ಹಂತದ ಪಂಚಾಯತ್ ಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿದ್ದು, ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣೆ ಸಂಬಂಧಿತ ಹಿಂಸಾಚಾರದಲ್ಲಿ ಐವರು ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು, ಒಬ್ಬ ಬಿಜೆಪಿ ಪೋಲಿಂಗ್ ಏಜೆಂಟ್ ಮತ್ತು ಒಬ್ಬ ಸಿಪಿಐಎಂ ಕಾರ್ಯಕರ್ತ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.