By polls ಇಂಡಿಯಾ ಮೈತ್ರಿಕೂಟಕ್ಕೆ ಉತ್ತೇಜನ ; ವಿಪಕ್ಷಗಳಿಗೆ 4, ಬಿಜೆಪಿಗೆ 3

ಆರು ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳ ಫಲಿತಾಂಶ; ಯುಪಿಯಲ್ಲಿ ಬಿಜೆಪಿಗೆ ಶಾಕ್

Team Udayavani, Sep 8, 2023, 9:13 PM IST

bjp-congress

ಹೊಸದಿಲ್ಲಿ: ಆರು ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 5 ರಂದು ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಶುಕ್ರವಾರ ನಡೆಯಿತುದ್ದು, ದೊಡ್ಡ ಉತ್ತೇಜನ ಎಂಬಂತೆ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಮೇಲುಗೈ ಸಾಧಿಸಿದ್ದು, ಬಿಜೆಪಿ 3 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ತ್ರಿಪುರಾದ ಬೊಕ್ಸಾನಗರ ಮತ್ತು ಧನ್‌ಪುರ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದ್ದು, ಅಭ್ಯರ್ಥಿಗಳಾದ ತಫಜ್ಜಲ್ ಹೊಸೈನ್ ಮತ್ತು ಬಿಂದು ದೇಬನಾಥ್ ಅವರು ಕ್ರಮವಾಗಿ 30,237 ಮತ್ತು 18,871 ಮತಗಳ ಅಂತರದಿಂದ ಜಯಗಳಿಸಿದರು. ಉತ್ತರಾಖಂಡದ ಬಾಗೇಶ್ವರ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿದ್ದು, ಅಭ್ಯರ್ಥಿ ಪಾರ್ವತಿ ದಾಸ್ ಕಾಂಗ್ರೆಸ್‌ ಅಭ್ಯರ್ಥಿ ಬಸಂತ್ ಕುಮಾರ್ ಅವರನ್ನು 2,400 ಮತಗಳಿಂದ ಸೋಲಿಸಿದ್ದಾರೆ.

ಕೇರಳದಲ್ಲಿ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ 50 ವರ್ಷಗಳ ಕಾಲ ಪ್ರತಿನಿಧಿಸಿದ್ದ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಉಮ್ಮನ್ ಚಾಂಡಿ ಅವರ ಪುತ್ರ 37ರ ಹರೆಯದ ಚಾಂಡಿ ಉಮ್ಮನ್ ಆಡಳಿತಾರೂಢ ಸಿಪಿಐ(ಎಂ) ಅಭ್ಯರ್ಥಿ ಜೈಕ್ ಸಿ ಥಾಮಸ್ ಅವರನ್ನು 36,000 ಮತಗಳಿಂದ ಸೋಲಿಸಿದ್ದಾರೆ. ಜುಲೈನಲ್ಲಿ ಉಮ್ಮನ್ ಚಾಂಡಿ ನಿಧನ ಹೊಂದಿದ್ದರು. ಇಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಡುವೆಯೇ ಸ್ಪರ್ಧೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಲಿಜಿನ್ ಲಾಲ್ 6558 ಮತಗಳನ್ನು ಪಡೆದಿದ್ದಾರೆ.

ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾದ ಬೇಬಿ ದೇವಿ ಅವರು ಡುಮ್ರಿ ಉಪಚುನಾವಣೆಯಲ್ಲಿ 17,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ, ಹತ್ತಿರದ ಪ್ರತಿಸ್ಪರ್ಧಿ AJSU ನ ಯಶೋದಾ ದೇವಿ ಅವರನ್ನು ಸೋಲಿಸಿದರು.

ಕೇರಳ ದಂತೇ ಇಂಡಿಯಾ ಮೈತ್ರಿಕೂಟಕ್ಕೆ ಸಂದಿಗ್ಧವಾಗಿದ್ದ ಪಶ್ಚಿಮ ಬಂಗಾಳದ ಧುಪ್ಗುರಿ ಕ್ಷೇತ್ರವನ್ನು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಬಿಜೆಪಿಯಿಂದ ವಶಪಡಿಸಿಕೊಂಡಿದೆ. 4,300 ಮತಗಳಿಂದ ಸೋಲಿಸಿದೆ. ಕಾಂಗ್ರೆಸ್ ಸ್ಪರ್ಧಿಸಿರಲಿಲ್ಲ. ಸಿಪಿಐ(ಎಂ) ಅಭ್ಯರ್ಥಿ ಕಣದಲ್ಲಿದ್ದರು.

ಉತ್ತರ ಪ್ರದೇಶದ ಘೋಸಿ ಕ್ಷೇತ್ರದಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಇಂಡಿಯಾ ಮೈತ್ರಿಕೂಟದ ಪಾಲುದಾರರ ಬೆಂಬಲದೊಂದಿಗೆ ಗೆಲುವು ಸಾಧಿಸಿದೆ. ಬಿಜೆಪಿಯನ್ನು 42,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿ ಸಂಭ್ರಮಿಸಿದೆ.

ಈ ವರ್ಷಾಂತ್ಯದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು, 2024ರಲ್ಲಿ ನಡೆಯಲಿರುವ ನಿರ್ಣಾಯಕ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟ (ಇಂಡಿಯಾ) ಬಣಕ್ಕೆ ಉಪಚುನಾವಣೆ ಫಲಿತಾಂಶ ಪರೀಕ್ಷೆಯಾಗಿತ್ತು.

ಟಾಪ್ ನ್ಯೂಸ್

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.