Global ಆಹಾರ ಭದ್ರತೆಗೆ ಪರಿಹಾರ ಒದಗಿಸಲು ಭಾರತ ಕೆಲಸ ಮಾಡುತ್ತಿದೆ: ಪ್ರಧಾನಿ ಮೋದಿ
ಒಂದು ಸಮಯದಲ್ಲಿ, ಭಾರತದ ಆಹಾರ ಭದ್ರತೆಯು ಜಾಗತಿಕ ಕಾಳಜಿಯಾಗಿತ್ತು...
Team Udayavani, Aug 3, 2024, 8:02 PM IST
ಹೊಸದಿಲ್ಲಿ: ಭಾರತವು ಹೆಚ್ಚುವರಿ ಆಹಾರ ಉತ್ಪಾದಕ ದೇಶವಾಗಿದ್ದು, ಜಾಗತಿಕ ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆಗೆ ಪರಿಹಾರಗಳನ್ನು ಒದಗಿಸಲು ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ(ಆಗಸ್ಟ್ 3) ಹೇಳಿದ್ದಾರೆ.
65 ವರ್ಷಗಳ ನಂತರ ಭಾರತದಲ್ಲಿ ಆಯೋಜಿಸಲಾಗುತ್ತಿರುವ ಕೃಷಿ ಅರ್ಥಶಾಸ್ತ್ರಜ್ಞರ 32 ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು (ICAE) ಉದ್ಘಾಟಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ‘ಕೇಂದ್ರ ಬಜೆಟ್ 2024-25 ಸುಸ್ಥಿರ ಕೃಷಿಯ ಮೇಲೆ ಕೇಂದ್ರೀಕರಿಸಿದೆ’ ಎಂದರು.
“65 ವರ್ಷಗಳ ನಂತರ ಭಾರತದಲ್ಲಿ ಇಂತಹ ಸಮ್ಮೇಳನವನ್ನು ಆಯೋಜಿಸುತ್ತಿರುವುದು ನನಗೆ ಸಂತಸ ತಂದಿದೆ. ನೀವೆಲ್ಲರೂ ಪ್ರಪಂಚದ ವಿವಿಧ ದೇಶಗಳಿಂದ ಬಂದಿದ್ದೀರಿ. ಭಾರತದ 120 ಮಿಲಿಯನ್ ರೈತರು, ಭಾರತದ 30 ಮಿಲಿಯನ್ಗಿಂತಲೂ ಹೆಚ್ಚು ರೈತ ಮಹಿಳೆಯರು ಮತ್ತು ದೇಶದ 30 ಮಿಲಿಯನ್ ಮೀನುಗಾರರ ಪರವಾಗಿ ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ನೀವು ಇಂದು 550 ಮಿಲಿಯನ್ ಪ್ರಾಣಿಗಳು ವಾಸಿಸುವ ದೇಶದಲ್ಲಿ ಇದ್ದೀರಿ. ಈ ಕೃಷಿ ಪ್ರಧಾನ ಮತ್ತು ಪ್ರಾಣಿ-ಪ್ರೀತಿಯ ದೇಶಕ್ಕೆ ನಿಮಗೆಲ್ಲರಿಗೂ ಸ್ವಾಗತ” ಎಂದರು.
ಭಾರತವು ಆಹಾರ ಹೆಚ್ಚುವರಿ ದೇಶವಾಗಿದೆ. ನಾವು ಜಾಗತಿಕ ಆಹಾರ ಭದ್ರತೆಗೆ ಪರಿಹಾರಗಳನ್ನು ಹುಡುಕುತ್ತಿದ್ದೇವೆ. ಭಾರತದಲ್ಲಿ ಇಂದಿಗೂ ನಾವು ಆರು ಋತುಗಳನ್ನು ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುತ್ತಿದ್ದೇವೆ. ನಾವು 15 ಕೃಷಿ ಹವಾಮಾನ ವಲಯಗಳನ್ನು ಹೊಂದಿದ್ದು ಎಲ್ಲಾ ವಿಶೇಷತೆಗಳನ್ನು ಹೊಂದಿವೆ. ನೀವು ಇಲ್ಲಿ ಸುಮಾರು 100 ಕಿಲೋಮೀಟರ್ ಪ್ರಯಾಣಿಸಿದರೆ, ಕೃಷಿ ಪದ್ಧತಿ ಬದಲಾಗುತ್ತದೆ. ಈ ವೈವಿಧ್ಯತೆಯು ಭಾರತವನ್ನು ವಿಶ್ವದ ಆಹಾರ ಭದ್ರತೆಯ ಭರವಸೆಯ ಕಿರಣವನ್ನಾಗಿ ಮಾಡುತ್ತದೆ’ ಎಂದರು.
ಭಾರತವು ಹೆಚ್ಚುವರಿ ಆಹಾರ ಉತ್ಪಾದಕ ದೇಶವಾಗಿದ್ದು ಹಾಲು, ಮಸಾಲೆ ಪದಾರ್ಥಗಳ ಅತಿದೊಡ್ಡ ಉತ್ಪಾದಕವಾಗಿದೆ. ಒಂದು ಸಮಯದಲ್ಲಿ, ಭಾರತದ ಆಹಾರ ಭದ್ರತೆಯು ಜಾಗತಿಕ ಕಾಳಜಿಯಾಗಿತ್ತು, ಇಂದು ಭಾರತವು ಜಾಗತಿಕ ಆಹಾರ ಮತ್ತು ಪೌಷ್ಟಿಕಾಂಶ ಭದ್ರತೆಗೆ ಪರಿಹಾರಗಳನ್ನು ಕಂಡುಕೊಳ್ಳುತ್ತಿದೆ.ಭಾರತದ ಕೃಷಿ ಪರಂಪರೆಯಲ್ಲಿ ವಿಜ್ಞಾನ ಮತ್ತು ತರ್ಕಕ್ಕೆ ಆದ್ಯತೆ ನೀಡಲಾಗಿದೆ. ಆಹಾರ ಮತ್ತು ಕೃಷಿಯ ಬಗ್ಗೆ ನಮ್ಮ ಸಂಪ್ರದಾಯಗಳು ಮತ್ತು ಅನುಭವಗಳು ನಮ್ಮ ದೇಶದಷ್ಟೇ ಪ್ರಾಚೀನವಾಗಿವೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.