ಸರಕಾರ ರಚನೆ ಪ್ರಯತ್ನ ಕೈಬಿಟ್ಟ ಐಎನ್ಡಿಐಎ
ವಿಪಕ್ಷದಲ್ಲಿ ಕುಳಿತುಕೊಳ್ಳುವೆವು: ಖರ್ಗೆ ನಮ್ಮ ಜತೆ ಕೈ ಜೋಡಿಸಿ: ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ
Team Udayavani, Jun 6, 2024, 7:10 AM IST
ಹೊಸದಿಲ್ಲಿ: “ಕಿಂಗ್ಮೇಕರ್’ಗಳಾದ ಟಿಡಿಪಿ ಮತ್ತು ಜೆಡಿಯು ವರಿಷ್ಠರು ಎನ್ಡಿಎಗೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರಕಾರ ರಚಿಸುವ ಪ್ರಯತ್ನವನ್ನು ಕಾಂಗ್ರೆಸ್ ನೇತೃತ್ವದ ಐಎನ್ಡಿಐಎ ಒಕ್ಕೂಟವು ಕೈಬಿಟ್ಟಿದ್ದು, ವಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಬುಧವಾರ ನಡೆದ ಐಎನ್ಡಿಐಎ ಒಕ್ಕೂಟದ ನಾಯಕರ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಎರಡು ತಾಸಿನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, “ಬಿಜೆಪಿ ಸರಕಾರ ಆಡಳಿತ ನಡೆಸಬಾರದು ಎಂಬ ಜನರ ಆಶಯವನ್ನು ಈಡೇರಿಸಲು ಐಎನ್ಡಿಐಎ ಒಕ್ಕೂಟವು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುತ್ತದೆ’ ಎಂದು ಹೇಳಿದರು. ಇದೇ ವೇಳೆ ಅವರು ಸಭೆಯಲ್ಲಿ
ಚರ್ಚಿಸಿ ನಿರ್ಧಾರ ಕೈಗೊಳ್ಳಲಾದ ಹೇಳಿಕೆಯನ್ನು ಓದಿ ಹೇಳಿದರು. ಐಎನ್ಡಿಐಎ ಒಕ್ಕೂಟವನ್ನು ಯಾವುದೇ ಪಕ್ಷ ಯಾವುದೇ ಸಮಯದಲ್ಲಿ ಬೇಕಿದ್ದರೂ ಬಂದು ಸೇರಿಕೊಳ್ಳಬಹುದು ಎಂಬ ಮುಕ್ತ ಆಹ್ವಾನವನ್ನೂ ನೀಡಿದರು.
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ದಬ್ಟಾಳಿಕೆ ಆಡಳಿತದ ವಿರುದ್ಧ ವಿಪಕ್ಷ ನಾಯಕರು ತಮ್ಮ ಹೋರಾಟವನ್ನು ಮುಂದುವರಿಸಲಿದ್ದಾರೆ. ನಾವು ಜತೆಯಾಗಿ ಕೆಲಸ ಮಾಡಲು ನಿರ್ಧರಿಸಿದ್ದು, ಚುನಾವಣೆ ಯಲ್ಲಿ ಜನರಿಗೆ ನೀಡಲಾದ ಭರವಸೆ ಗಳನ್ನು ಈಡೇರಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ಬಿಜೆಪಿಯ ದ್ವೇಷ, ಭ್ರಷ್ಟಾಚಾರ ಮತ್ತು ಒಡೆದಾಳುವ ನೀತಿಯ ವಿರುದ್ಧ ಜನರು ಮತಗಳ ಮೂಲಕ ತಕ್ಕ ಉತ್ತರ ನೀಡಿದ್ದಾರೆ. ಹಾಗಾಗಿ ಅವರನ್ನು ಐಎನ್ಡಿಐಎ ಒಕ್ಕೂಟವು ಅಭಿನಂದಿಸುತ್ತದೆ. ಭಾರತದ ಸಂವಿಧಾನ ರಕ್ಷಣೆ, ಬೆಲೆ ಏರಿಕೆ ಹಾಗೂ ನಿರುದ್ಯೋಗದ ವಿರುದ್ಧ, ಪ್ರಜಾಪ್ರಭುತ್ವ ರಕ್ಷಣೆ, ಬಂಡವಾಳ ಶಾಹಿಗಳ ವಿರುದ್ಧ ಜನರು ಫಲಿತಾಂಶ ನೀಡಿದ್ದಾರೆ. ಈ ಫಲಿತಾಂಶವು ನರೇಂದ್ರ ಮೋದಿ ನೇತೃತ್ವದ ಸರಕಾರದ ವಿರುದ್ಧ ಜನರು ನೀಡಿರುವ ತೀರ್ಪು ಎಂದು ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದ್ದಾರೆ.
ಐಎನ್ಡಿಐಎ ಸಭೆಯಲ್ಲಿ ಏನೇನಾಯಿತು?
-ಬಿಜೆಪಿ ಸರಕಾರದ ವಿರುದ್ಧ ಸೂಕ್ತ ಸಮಯ
ದಲ್ಲಿ ಸೂಕ್ತ ನಿರ್ಧಾರ
-ಪ್ರಚಾರ ವೇಳೆ ನೀಡಿದ್ದ ಭರವಸೆ ಈಡೇರಿಸಲು ಐಎನ್ಡಿಐಎ ಬದ್ಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.