ಗಾಂಧಿ ನಾಡಲ್ಲಿ ಭಾರತ- ಜಪಾನ್‌ ರೋಡ್‌ಶೋ


Team Udayavani, Sep 14, 2017, 8:35 AM IST

modi.jpg

ಅಹಮದಾಬಾದ್‌: ಭಾರತದ ಬುಲೆಟ್‌ ಟ್ರೇನ್‌ ಕನಸಿಗೆ ನೀರೆರೆದಿರುವ ಜಪಾನ್‌ ಪ್ರಧಾನಿ ಶಿಂಜೋ ಅಬೆ, ಪ್ರಧಾನಿ ನರೇಂದ್ರ ಮೋದಿ ಅವರ ತವರು ಗುಜರಾತ್‌ನ ಅಹಮದಾಬಾದ್‌ಗೆ ಬಂದಿಳಿದಿದ್ದಾರೆ. 

ಎರಡು ದಿನಗಳ ಭೇಟಿಗಾಗಿ ಆಗಮಿಸಿರುವ ಅಬೆ ಅವರು, ಗುರುವಾರ ಅಹಮಬಾದ್‌-ಮುಂಬೈ ಬುಲೆಟ್‌ ಟ್ರೇನ್‌ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಮಧ್ಯೆಯೇ, ಬುಧವಾರ ಮಧ್ಯಾಹ್ನ ಬಂದ ಶಿನೋ ಅಬೆ ಅವರಿಗೆ ವಿಮಾನ ನಿಲ್ದಾಣದಲ್ಲೇ ಆಲಿಂಗನದ ಸ್ವಾಗತ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಹತ್ಮಾ ಗಾಂಧೀಜಿ ಅವರ ಸಾಬರ್ಮತಿ ಆಶ್ರಮದ ವರೆಗೆ ತೆರೆದ ಜೀಪಿನಲ್ಲಿ ಅಬೆ ದಂಪತಿಯನ್ನು ಮೆರವಣಿಗೆಯಲ್ಲಿ ಕರೆತಂದಿದ್ದಾರೆ. ಸುಮಾರು 8 ಕಿ.ಮೀ. ಇದ್ದ ಈ ಮಾರ್ಗದಲ್ಲಿ ನಿಂತಿದ್ದ ಅಹಮದಾಬಾದ್‌ನ ಜನತೆ, ಜಪಾನ್‌ ಪ್ರಧಾನಿಗೆ ಆತ್ಮೀಯ ಸ್ವಾಗತ ಕೋರಿದ್ದಾರೆ. ಅಲ್ಲದೆ ಹಲವಾರು ರಾಜ್ಯಗಳಿಂದ ಬಂದಿದ್ದ ಕಲಾವಿದರು, ರಸ್ತೆ ಬದಿಯಲ್ಲೇ 28ಕ್ಕೂ ಅಧಿಕ ಪ್ರದರ್ಶನ ನೀಡಿ ಭಾರತದ ಸಂಸ್ಕೃತಿ ಪರಿಚಯ ಮಾಡಿಕೊಟ್ಟಿದ್ದಾರೆ. 

ಸೀದಾ ಸಾಬರ್ಮತಿ ಆಶ್ರಮಕ್ಕೆ ಬಂದ ಅಬೆ ಅವರು, ಗಾಂಧೀಜಿ ಹೆಜ್ಜೆ ಗುರುತುಗಳ ಪರಿಚಯ ಮಾಡಿಕೊಂಡಿದ್ದಾರೆ. ಸ್ವತಃ ಪ್ರಧಾನಿ ಮೋದಿ ಅವರೇ, ಆಶ್ರಮದ ಸಂಪೂರ್ಣ ಪರಿಚಯ ಮಾಡಿಕೊಟ್ಟಿದ್ದಾರೆ. ಬಳಿಕ 16ನೇ ಶತಮಾನದ “ಸಿದಿ ಸೈಯ್ಯದ್‌ ನಿ ಜಾಲಿ’ ಮಸೀದಿಗೆ ಕರೆದೊಯ್ದ ಮೋದಿ ಅವರು, ಅದರ ಪರಿಚಯವನ್ನೂ ಮಾಡಿ ಕೊಟ್ಟಿದ್ದಾರೆ. ವಿಶೇಷವೆಂದರೆ, ಪ್ರಧಾನಿ ಯಾದ ಮೇಲೆ ಇದೇ ಮೊದಲ ಬಾರಿಗೆ ಮೋದಿ ಅವರು, ಮಸೀದಿಯೊಂದಕ್ಕೆ ಭೇಟಿ ನೀಡುತ್ತಿರುವುದು. 

ಬುಧವಾರ ರಾತ್ರಿ ಅಬೆ ದಂಪತಿಗೆ ಮೋದಿ ಅವರು ಔತಣ ಕೂಟ ಆಯೋಜಿಸಿದ್ದರು. ಅಗಾಶಿಯೇ ಟೆರೆಸ್‌ ರೆಸ್ಟೋರೆಂಟ್‌ನಲ್ಲಿ ನಡೆದ ಈ ಔತಣಕೂಟದಲ್ಲಿ ಮೋದಿ ಅವರ ನೆಚ್ಚಿನ “ಹಂದೊÌà’ ಹಾಗೂ ಸಂಪೂರ್ಣವಾಗಿ ಸಸ್ಯಹಾರಿ ಊಟದ ವ್ಯವಸ್ಥೆ ಮಾಡಲಾಗಿತ್ತು. 

ವಿಶೇಷವೆಂದರೆ ಮೋದಿ ಅವರು ಪ್ರಧಾನಿಯಾದ ಮೇಲೆ ಅಬೆ ಅವರನ್ನು ನಾಲ್ಕನೇ ಬಾರಿಗೆ ಭೇಟಿ ಮಾಡುತ್ತಿದ್ದಾರೆ. ಭಾರತ ಮತ್ತು ಜಪಾನ್‌ ನಡುವೆ ವರ್ಷಕ್ಕೊಮ್ಮೆ ಪರಿಶೀಲನಾ ಮಾದರಿಯ ಸಭೆ ನಡೆಯುತ್ತಿವೆ. ಜಪಾನ್‌ ಬಿಟ್ಟರೆ ಭಾರತ, ರಷ್ಯಾ ಜತೆ ಮಾತ್ರ ಹೀಗೆ ವಾರ್ಷಿಕವಾಗಿ ಪರಿಶೀಲನಾ ಮಾದರಿ ಸಭೆ ನಡೆಸುತ್ತಿದೆ. 

ಇಂದು ಬುಲೆಟ್‌ ಟ್ರೇನ್‌ಗೆ ಚಾಲನೆ
ಗುರುವಾರ ಮೋದಿ ಮತ್ತು ಅಬೆ ಅವರು ಅಹಮದಾಬಾದ್‌-ಮುಂಬೈ ನಡುವಿನ 508 ಕಿ.ಮೀ. ಉದ್ದದ ಬುಲೆಟ್‌ ಟ್ರೇನ್‌ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು ಹತ್ತು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಈಗ ಆರಂಭವಾಗಲಿರುವ ಈ ಕಾಮಗಾರಿ 2022ಕ್ಕೆ ಅಂತ್ಯವಾಗಲಿದೆ. ಇದನ್ನು 1,10,000 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಜಪಾನ್‌ ಶೇ.90 ರಷ್ಟು ಹಣವನ್ನು ಸಾಲದ ರೂಪದಲ್ಲಿ ನೀಡಲಿದೆ. ಅಲ್ಲದೆ ಇದಕ್ಕೆ ಶೇ.0.01 ಬಡ್ಡಿ ವಿಧಿಸಲಾಗುತ್ತದೆ.  ಈ ಮಾರ್ಗ ಪೂರ್ಣವಾದ ಮೇಲೆ ಅಹ್ಮದಾಬಾದ್‌-ಮುಂಬೈ ನಡುವಿನ ಸಂಚಾರದ ಅವಧಿ ಕೇವಲ 3 ಗಂಟೆಗೆ ಇಳಿಯಲಿದೆ. 

ಟಾಪ್ ನ್ಯೂಸ್

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.