ಗಣತಂತ್ರಕ್ಕೆ ಭಾರತ ತಾಯಿ: ಬಿಹಾರದಲ್ಲಿ ಪ್ರಧಾನಿ ಪ್ರತಿಪಾದನೆ; ವೈಶಾಲಿ ಸಾಮ್ರಾಜ್ಯ ಉದಾಹರಣೆ


Team Udayavani, Jul 13, 2022, 1:05 AM IST

ಗಣತಂತ್ರಕ್ಕೆ ಭಾರತ ತಾಯಿ: ಬಿಹಾರದಲ್ಲಿ ಪ್ರಧಾನಿ ಪ್ರತಿಪಾದನೆ; ವೈಶಾಲಿ ಸಾಮ್ರಾಜ್ಯ ಉದಾಹರಣೆ

ಹೊಸದಿಲ್ಲಿ: ವಿಶ್ವದಲ್ಲಿನ ಎಲ್ಲ ಪ್ರಜಾಪ್ರಭುತ್ವಗಳಿಗೆ ಭಾರತವೇ ಜನ್ಮದಾತೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.

ಬಿಹಾರದ ವಿಧಾನ ಸಭೆಯು ನಿರ್ಮಾಣವಾಗಿ ನೂರು ವರ್ಷಗಳು ಸಂದ ನೆನಪಿಗಾಗಿ ವಿಧಾನಸಭೆಯ ಆವರಣದಲ್ಲಿ ನೂತನ ವಾಗಿ ನಿರ್ಮಿಸಲಾಗಿರುವ ಸ್ತಂಭವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

“ಅನೇಕರು ಭಾರತಕ್ಕೆ ಪ್ರಜಾಪ್ರಭುತ್ವವು ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಬಂತು ಎಂದು ಹೇಳುತ್ತಾರೆ. ಆದರೆ ಭಾರತದಲ್ಲಿ ನಾಗರಿಕ ಪದ್ಧತಿಗಳು ಬಹುಹಿಂದಿ ನಿಂದಲೂ ಚಾಲ್ತಿಯಲ್ಲಿದ್ದವು. ಬಿಹಾರದಲ್ಲಿ ಶತಮಾನ ಗಳ ಹಿಂದಿದ್ದ ವೈಶಾಲಿ ಸಾಮ್ರಾಜ್ಯದಲ್ಲಿ ಪ್ರಜಾಪ್ರಭುತ್ವ ಚಾಲ್ತಿಯಲ್ಲಿತ್ತು. ಶತಮಾನಗಳ ಹಿಂದೆಯೇ ಇಂಥದ್ದೊಂದು ಪ್ರಬುದ್ಧ ವಾದ ಪ್ರಜಾಪ್ರಭುತ್ವ ನಮ್ಮಲ್ಲಿ ಚಾಲ್ತಿಯಲ್ಲಿತ್ತು’ ಎಂದು ಹೇಳಿದರು.

“ಭಾರತದ ಪ್ರಜಾಪ್ರಭುತ್ವವು ಸಮಾನತೆಯ ತತ್ತ್ವದಡಿಯೇ ನಿಂತಿದೆ. ನಾವು ಆಗಾಗ್ಗೆ, ಭಾರತವು ವಿಶ್ವದ ಅತೀ ದೊಡ್ಡ ಪ್ರಜಾತಂತ್ರ ವ್ಯವಸ್ಥೆಯೆಂದು ಹೇಳುತ್ತಿರುತ್ತೇವೆ. ಆದರೆ ಕೇವಲ ಅತೀ ದೊಡ್ಡ ಪ್ರಜಾತಂತ್ರ ವ್ಯವಸ್ಥೆಯಲ್ಲ, ವಿಶ್ವದೆಲ್ಲೆಡೆ ಇರುವ ಪ್ರಜಾಪ್ರಭುತ್ವಗಳಿಗೆ ಭಾರತವೇ ಜನನಿ ಎಂದು ನಾನು ಹೇಳಬಯಸುತ್ತೇನೆ’ ಎಂದು ವಿವರಿಸಿದರು.

“ಶಾರ್ಟ್‌ಕಟ್‌’ನಿಂದ “ಶಾರ್ಟ್ ಸರ್ಕ್ಯೂಟ್’!: ಬಿಹಾರ ಭೇಟಿಗೂ ಮುನ್ನ ಮಂಗಳವಾರ ಬೆಳಗ್ಗೆ ಝಾರ್ಖಂಡ್‌ಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ಅಲ್ಲಿ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಜತೆಗೆ, ಅನೇಕ ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದರು. ಈ ಯೋಜನೆಗಳ ಒಟ್ಟಾರೆ ಮೊತ್ತ 16,800 ಕೋಟಿ ರೂ.ಗಳಾಗಿವೆ.

ದೇವಗಢದಲ್ಲಿ ಆಯೋಜಿಸಲಾಗಿದ್ದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕಾಗಿ ಶಾರ್ಟ್‌ ಕಟ್‌ ಹಾದಿಗಳನ್ನು ಹಿಡಿದ ಎಲ್ಲ ಪಕ್ಷಗಳು ಶಾರ್ಟ್‌ ಸಕ್ಯೂಟ್‌ಗೆ ತುತ್ತಾಗಬೇಕಾಗುತ್ತದೆ ಎಂಬ ಲಘು ಹಾಸ್ಯದ ಮೂಲಕ ರಾಜಕೀಯ ಪಕ್ಷಗಳಿಗೆ ಕಿವಿಮಾತು ಹೇಳಿದರು.

ದೇಶದಲ್ಲಿರುವ ಪುಣ್ಯಸ್ಥಳಗಳು, ಈ ದೇಶಕ್ಕೊಂದು ಅಸ್ಮಿತೆಯನ್ನು ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿವೆ. ಇಂಥ ಪುಣ್ಯಕ್ಷೇತ್ರಗಳಲ್ಲಿ ಆಧುನಿಕ ಸವಲತ್ತುಗಳನ್ನು ನಿರ್ಮಿಸಲು ನಮ್ಮ ಸರಕಾರ ಕಾರ್ಯೋನ್ಮುಖವಾಗಿದೆ. ಹಾಗಾಗಿ ಅಯೋಧ್ಯೆ, ವಾರಾಣಸಿ, ಕಾಶಿ, ಬೈದ್ಯನಾಥ ಮುಂತಾದೆಡೆ ಉತ್ತಮ ವಿಶ್ವದರ್ಜೆಯ ಸೌಕರ್ಯಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.

ಬೈದ್ಯನಾಥನಿಗೆ ಮೋದಿ ಪೂಜೆ
ಮಂಗಳವಾರ ಬೆಳಗ್ಗೆ ಝಾರ್ಖಂಡ್‌ನ‌ ದೇವಧರ್‌ನಲ್ಲಿರುವ, ದೇಶದ 12 ಜ್ಯೋತಿರ್ಲಿಂಗಗಳಲ್ಲೊಂದಾದ ಬಾಬಾ ಬೈದ್ಯನಾಥ್‌ ದೇಗುಲಕ್ಕೆ ಭೇಟಿ ನೀಡಿದ ಮೋದಿ, ಅಲ್ಲಿನ ಶಿವಲಿಂಗಕ್ಕೆ ಅಭಿಷೇಕ, ಪೂಜೆ ನೆರವೇರಿಸಿದರು. ಬೆಳಗ್ಗೆ ದೇಗುಲದ ವಿಐಪಿ ದ್ವಾರಕ್ಕೆ ಮೋದಿಯವರು ಆಗಮಿಸಿದಾಗ, ವೇದ ಮಂತ್ರಘೋಷ ಹಾಗೂ ಶಂಖನಾದಗಳಿಂದ ಸ್ವಾಗತ ನೀಡಲಾಯಿತು. ದ್ವಾರದ ಬಳಿ ನಿಂತಿದ್ದ 11 ಪುರೋಹಿತರು ಅವರಿಗೆ ಹೂಗುತ್ಛವನ್ನು ನೀಡಿ ಸ್ವಾಗತಿಸಿದರು. ಆನಂತರ ಅವರನ್ನು ದೇಗುಲದ ಸುಮುಖ ದ್ವಾರದ ಕಡೆಗೆ ಗಣೇಶನ ಪೂಜೆಗಾಗಿ ಕರೆದೊಯ್ಯಲಾಯಿತು.

ದೇವಗಢದಲ್ಲಿ ವಿಮಾನ ನಿಲ್ದಾಣ ಲೋಕಾರ್ಪಣೆ
ದೇವಗಢದಲ್ಲಿ ಬುಧವಾರ 401 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಝಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೆನ್‌ ಉಪಸ್ಥಿತರಿದ್ದರು. ಈ ನಿಲ್ದಾಣಕ್ಕೆ 2018, ಮೇ 25ರಂದು ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದರು.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.