ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

 ಪುತಿನ್‌-ಮೋದಿ ಮಾತುಕತೆ ವೇಳೆ ನಿರ್ಧಾರ

Team Udayavani, Dec 7, 2021, 6:50 AM IST

ಎಸ್‌-400 ಬೂಸ್ಟರ್‌ ;  ಭಾರತಕ್ಕೆ ಕ್ಷಿಪಣಿ ನಿಗ್ರಹ ವ್ಯವಸ್ಥೆ ಪೂರೈಕೆ ಸರಾಗ

ಹೊಸದಿಲ್ಲಿ: “ಭಾರತಕ್ಕೆ ಬೂಸ್ಟರ್‌ ಡೋಸ್‌’ ಎಂದೇ ಪರಿಗಣಿಸಲಾಗಿರುವ ಬಹು ನಿರೀಕ್ಷಿತ ಎಸ್‌-400 ಕ್ಷಿಪಣಿ ನಿಗ್ರಹ ವ್ಯವಸ್ಥೆಯ ಪೂರೈಕೆಯನ್ನು ರಷ್ಯಾ ಈಗಾಗಲೇ ಆರಂಭಿಸಿದ್ದು, ಭಾರತ ಮತ್ತು ರಷ್ಯಾ ನಡುವಿನ ಮಿತ್ರತ್ವವು ಮತ್ತಷ್ಟು ಗಟ್ಟಿಯಾಗಿದೆ.

ಸೋಮವಾರ ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ, ರಕ್ಷಣೆ, ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರ ಗಳಲ್ಲಿ ಸಹಭಾಗಿತ್ವ, ಅಫ್ಘಾನಿಸ್ಥಾನದ ಬೆಳ ವಣಿಗೆಗಳು, ಸಾಗರೋತ್ತರ ಭಯೋತ್ಪಾದನೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಿದ್ದಾರೆ.

ಪುತಿನ್‌-ಮೋದಿ ಮಾತುಕತೆಯ ಬಳಿಕ ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್‌ ಶ್ರಿಂಗ್ಲಾ, “ಭಾರತಕ್ಕೆ ಪುತಿನ್‌ ಭೇಟಿ ಫ‌ಲಪ್ರದವಾಗಿದ್ದು, ಎರಡೂ ದೇಶಗಳ ನಡುವೆ 28 ಒಪ್ಪಂದಗಳು ನಡೆದಿವೆ. ಎಸ್‌-400 ಪೂರೈಕೆ ಪ್ರಕ್ರಿಯೆ ಆರಂಭವಾಗಿದ್ದು, ಇನ್ನೂ ಮುಂದುವರಿಯಲಿದೆ. ಇಂಧನ ದಂತಹ ವ್ಯೂಹಾತ್ಮಕ ಕ್ಷೇತ್ರದಲ್ಲೂ ಸಹಕಾರ ಸಾಧಿಸುವ ನಿಟ್ಟಿನಲ್ಲಿ ವಿಸ್ತೃತ ಚರ್ಚೆ ನಡೆದಿದೆ. ನಾವು ಕೂಡ ತೈಲ ಮತ್ತು ಅನಿಲ ಕ್ಷೇತ್ರ, ಪೆಟ್ರೋಕೆಮಿಕಲ್ಸ್‌ ಕ್ಷೇತ್ರದಲ್ಲಿ ಹೂಡಿಕೆ ಮಾಡುವ ಆಸಕ್ತಿಯನ್ನು ವ್ಯಕ್ತಪಡಿಸಿದ್ದೇವೆ’ ಎಂದಿದ್ದಾರೆ.

ಉಗ್ರ ನಿಗ್ರಹದ ವಿಚಾರವು ಎರಡೂ ದೇಶಗಳ ಸಮಾನ ಹಿತಾಸಕ್ತಿಗೆ ಸಂಬಂಧಿ ಸಿದ್ದು. ಹೀಗಾಗಿ ಮಾತುಕತೆಯಲ್ಲಿ ಈ ವಿಷಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗಿದೆ. ಅಫ್ಘಾನಿಸ್ಥಾನದಲ್ಲಿ ಉಗ್ರವಾದ, ಮಾದಕವಸ್ತುಗಳ ಸಾಗಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಬೆಳವಣಿಗೆಗಳ ಬಗ್ಗೆ ಉಭಯ ನಾಯಕರು ಕಳವಳ ವ್ಯಕ್ತಪಡಿಸಿದ್ದಾರೆ. ಆ ದೇಶದ ವಿಚಾರದಲ್ಲಿ ಭಾರತ ಮತ್ತು ರಷ್ಯಾ ಸಮನ್ವಯ ಮುಂದು ವರಿಸಲೂ ನಿರ್ಧರಿಸಿದ್ದಾರೆ. ಆಫ‌^ನ್‌ ನೆಲವನ್ನು ಯಾವುದೇ ಕಾರಣಕ್ಕೂ ಭಯೋತ್ಪಾದಕರಿಗೆ ಆಶ್ರಯ, ತರಬೇತಿ ನೀಡಲು, ಉಗ್ರ ಚಟುವ ಟಿಕೆಗಳಿಗೆ ಸಂಚು ರೂಪಿಸಲು ಬಳಕೆಯಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ಧರಿಸಿದ್ದಾರೆ.

ಇದನ್ನೂ ಓದಿ:ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಮೋದಿಗೆ ಆಹ್ವಾನ: ಒಂದು ದಿನದ ಭೇಟಿ ಮುಗಿಸಿ ಸೋಮವಾರ ರಾತ್ರಿಯೇ ಪುತಿನ್‌ ರಷ್ಯಾಕ್ಕೆ ವಾಪಸಾಗಿದ್ದಾರೆ. 2022ರಲ್ಲಿ ರಷ್ಯಾಗೆ ಭೇಟಿ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಆಹ್ವಾನವನ್ನೂ ನೀಡಿದ್ದಾರೆ.

ಚೀನ ಅಪ್ರಚೋದಿತ ವರ್ತನೆಗೆ ಕಿಡಿ: ಮೋದಿ-ಪುತಿನ್‌ ಭೇಟಿಗೂ ಮುನ್ನ ಭಾರತ-ರಷ್ಯಾ 2+2 ಮಾತುಕತೆ ನಡೆದಿದ್ದು, ಚೀನದ ದುಸ್ಸಾಹಸ ಯತ್ನಗಳ ಬಗ್ಗೆಯೂ ಚರ್ಚಿಸಲಾಗಿದೆ. ನೆರೆಯ ರಾಷ್ಟ್ರದಿಂದ “ತೀವ್ರ ಮಿಲಿಟರೀಕರಣ’ ಮತ್ತು ಉತ್ತರದ ಗಡಿಯಲ್ಲಿ ಚೀನದ “ಅಪ್ರಚೋದಿತ ಆಕ್ರಮಣಕಾರಿ ನೀತಿ’ಗಳ ಸವಾಲನ್ನು ಭಾರತ ಎದುರಿಸುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಆದರೆ ಬಲಿಷ್ಠ ರಾಜಕೀಯ ಇಚ್ಛಾಶಕ್ತಿ ಮತ್ತು ದೇಶವಾಸಿಗಳ ಸಾಮರ್ಥ್ಯದ ಮೂಲಕ ಇಂಥ ಎಲ್ಲ ಸವಾಲುಗಳನ್ನೂ ನಾವು ಸಮರ್ಥವಾಗಿ ಎದುರಿಸಬಲ್ಲೆವು ಎಂಬ ವಿಶ್ವಾಸವಿದೆ ಎಂದೂ ಅವರು ಹೇಳಿದ್ದಾರೆ.

ಭಾರತಕ್ಕೆ ಎಸ್‌-400 ಬಲ: ರಷ್ಯಾದ ಎಸ್‌-400 ಸುಧಾರಿತ ಕ್ಷಿಪಣಿಗಳು ಸುಮಾರು 400 ಕಿ.ಮೀ. ದೂರದಿಂದ ಬರುವ ವೈಮಾನಿಕ ದಾಳಿಯನ್ನೂ ಸಮರ್ಥವಾಗಿ ಎದುರಿಸುವ ಛಾತಿ ಹೊಂದಿವೆ. ಈಗಾಗಲೇ ಈ ಕ್ಷಿಪಣಿ ನಿಗ್ರಹ ವ್ಯವಸ್ಥೆಯ ಬಳಕೆಗೆ ಸಂಬಂಧಿಸಿ ಭಾರತೀಯ ಸಿಬ್ಬಂದಿಗೆ ರಷ್ಯಾ ತರಬೇತಿ ನೀಡಿದೆ. ಚೀನಾ ಮತ್ತು ಪಾಕಿಸ್ಥಾನ ಎರಡೂ ದೇಶಗಳಿಂದ ಆಗುವ ಅಪಾಯವನ್ನು ಎದುರಿಸುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಮೊದಲಿಗೆ ದೇಶದ ಪಶ್ಚಿಮ ಗಡಿಯಲ್ಲಿ ನಿಯೋಜಿಸುವ ಸಾಧ್ಯತೆಯಿದೆ. 2018ರಲ್ಲೇ ಭಾರತ ಮತ್ತು ರಷ್ಯಾವು ಎಸ್‌-400 ವ್ಯವಸ್ಥೆಯ ಖರೀದಿ ಒಪ್ಪಂದ ಮಾಡಿಕೊಂಡಿದ್ದವು. ಆದರೆ, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಅಮೆರಿಕ, “ಭಾರತವೇನಾದರೂ ಈ ಒಪ್ಪಂದವನ್ನು ಮುಂದುವರಿಸಿದರೆ ನಿರ್ಬಂಧವನ್ನು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆಯನ್ನೂ ನೀಡಿತ್ತು. ಆದರೂ ಅಮೆರಿಕದ ಬೆದರಿಕೆಗೆ ಮಣಿಯದೇ ಭಾರತವು ಈ ಒಪ್ಪಂದವನ್ನು ಮುಂದುವರಿಸಿಕೊಂಡು ಬಂದಿದೆ.

ಸವಾಲುಗಳ ನಡುವೆಯೂ ಸದೃಢ ಸ್ನೇಹ: ಮೋದಿ
ಹಲವಾರು ಸವಾಲುಗಳ ನಡುವೆಯೂ ಭಾರತ ಮತ್ತು ರಷ್ಯಾ ನಡುವಿನ ಆತ್ಮೀಯ ಸಂಬಂಧ ಹಾಗೂ ಸ್ನೇಹವು ಸ್ಥಿರವಾಗಿದೆ. ಕೊರೊನಾ ಸೋಂಕಿನ ನಡುವೆಯೂ ಪುತಿನ್‌ ಅವರು ಭಾರತಕ್ಕೆ ಭೇಟಿ ನೀಡಿರುವುದು ಉಭಯ ದೇಶಗಳ ಸಂಬಂಧದಲ್ಲಿ ಅವರಿಗಿರುವ ಬದ್ಧತೆಯನ್ನು ತೋರಿಸಿದೆ ಎಂದು ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಭಾರತ ಅತ್ಯಂತ
ಶ್ರೇಷ್ಠ ಶಕ್ತಿ: ಪುತಿನ್‌
ಭಾರತವು ಅತ್ಯಂತ ಶ್ರೇಷ್ಠ ಶಕ್ತಿಯಾಗಿದ್ದು, ನಮ್ಮ ಸದಾಕಾಲದ ಮಿತ್ರ ರಾಷ್ಟ್ರವೂ ಆಗಿದೆ ಎಂದು ರಷ್ಯಾ ಅಧ್ಯಕ್ಷ ಪುತಿನ್‌ ಶ್ಲಾ ಸಿ ದ್ದಾರೆ. ನಮ್ಮ ದೇಶಗಳ ನಡುವಿನ ಸಂಬಂಧವು ಮತ್ತಷ್ಟು ಬೆಳೆಯು ತ್ತಿದ್ದು, ಭವಿಷ್ಯದತ್ತ ನಾವು ಮುಖ ಮಾಡಿದ್ದೇವೆ ಎಂದೂ ಹೇಳಿದ್ದಾರೆ.

ಪ್ರಮುಖ ಒಪ್ಪಂದಗಳು
-ಉತ್ತರಪ್ರದೇಶದ ಅಮೇಠಿಯ ಘಟಕದಲ್ಲಿ 6 ಲಕ್ಷದಷ್ಟು ಎಕೆ-203 ರೈಫ‌ಲ್‌ಗ‌ಳನ್ನು ಜಂಟಿಯಾಗಿ ತಯಾರಿಸುವುದು
-10 ವರ್ಷಗಳ ಕಾಲ ಭಾರತ-ರಷ್ಯಾ ಸೇನಾ ಸಹಭಾಗಿತ್ವವನ್ನು ಮುಂದುವರಿಸುವುದು
-2019ರ ಫೆಬ್ರವರಿಯಲ್ಲಿ ನಡೆದ ಕಲಾಶ್ನಿಕೋವ್‌ ಸರಣಿಗಳ ಉತ್ಪಾದನೆ ಒಪ್ಪಂದದಲ್ಲಿ ತಿದ್ದುಪಡಿ ತರಲು ನಿರ್ಧಾರ

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.