ಸುಧಾರಿತ ಪಿನಾಕ ರಾಕೆಟ್ ಲಾಂಚರ್ ಯಶಸ್ವಿ ಪರೀಕ್ಷೆ
ಡಿಆರ್ಡಿಒದಿಂದ ಅಭಿವೃದ್ಧಿಗೊಳಿಸಲ್ಪಟ್ಟಿರುವ ಈ ಸಾಧನದಿಂದ ಭಾರತೀಯ ಸೇನೆಗೆ ಬಲ
Team Udayavani, Dec 11, 2021, 9:30 PM IST
ನವದೆಹಲಿ: ಡಿಆರ್ಡಿಒದಿಂದ ಅಭಿವೃದ್ಧಿಪಡಿಸಲ್ಪಟ್ಟಿರುವ ವಿಸ್ತೃತ ದೂರದ ಪಿನಾಕ ಮಲ್ಟಿ ಬ್ಯಾರೆಲ್ ರಾಕೆಟ್ ಲಾಂಚರ್ ಸಿಸ್ಟಮ್ ಅನ್ನು ಶನಿವಾರ ಯಶಸ್ವಿಯಾಗಿ ಪರೀಕ್ಷಿಸಲಾಯಿತು.
ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಪೋಖ್ರಾನ್ ಪ್ರದೇಶದಲ್ಲಿ ಹಲವು ಭಿನ್ನ ದೂರಗಳನ್ನು ಯಶಸ್ವಿಯಾಗಿ ತಲುಪಬಲ್ಲ ರಾಕೆಟ್ಗಳನ್ನು ಪರೀಕ್ಷಿಸಲಾಯಿತು. ಈ ವೇಳೆ ರಾಕೆಟ್ಗಳಿಗೆ ವಿವಿಧ ಸಾಮರ್ಥ್ಯದ ಸಿಡಿತಲೆಗಳನ್ನು ಅಳವಡಿಸಲಾಗಿತ್ತು. ವಿವಿಧ ದೂರದ ಗುರಿಗಳನ್ನೂ ನಿಗದಿಪಡಿಸಲಾಗಿತ್ತು. ನಿಖರವಾಗಿ ಎಷ್ಟು ಸಾಮರ್ಥ್ಯ, ಎಷ್ಟು ದೂರದ ರಾಕೆಟ್ಗಳಿವು ಎಂಬ ಮಾಹಿತಿ ಲಭ್ಯವಾಗಿಲ್ಲ.
ಪ್ರಸ್ತುತ ಪರೀಕ್ಷೆಗೊಳಪಟ್ಟಿರುವ ವ್ಯವಸ್ಥೆ, ಈ ಹಿಂದೆ ಪಿನಾಕ (ಶಿವನ ಧನುಸ್ಸಿನ ಹೆಸರು) ರಾಕೆಟ್ಸ್ ಎಂದು ಕರೆಸಿಕೊಳ್ಳುತ್ತಿದ್ದ ವ್ಯವಸ್ಥೆಯ ಸುಧಾರಿತ ರೂಪ. ಡಿಆರ್ಡಿಒ ಇದನ್ನು ವಿನ್ಯಾಸ ಮಾಡಿದೆ. ಪುಣೆಯ ಹೈ ಎನರ್ಜಿ ಮೆಟೀರಿಯಲ್ಸ್ ರೀಸರ್ಚ್ ಪ್ರಯೋಗಾಲಯದಲ್ಲಿ ರೂಪಿಸಲಾಗಿದೆ.
ಇದನ್ನೂ ಓದಿ:ಅನಾರೋಗ್ಯದಿಂದ ಬಳಲುತ್ತಿರುವ ಬಾಲಕನ ಚಿಕಿತ್ಸೆಗಾಗಿ ಯಕ್ಷ ವೇಷ ಧರಿಸಿ ಸಂತೆಯಲ್ಲಿ ಧನ ಸಂಗ್ರಹ
ಮೂರು ದಿನಗಳಿಂದ ಪರೀಕ್ಷೆ:
ಸತತ ಮೂರು ದಿನಗಳ ಪೋಖ್ರಾನ್ ರೇಂಜ್ನಲ್ಲಿ ರಾಕೆಟ್ಗಳನ್ನು ಪರೀಕ್ಷೆ ಮಾಡಲಾಗಿದೆ. ಹಾಗೆಯೇ ದೇಶೀಯವಾಗಿ ನಿರ್ಮಿಸಲಾಗಿರುವ ಪ್ರಾಕ್ಸಿಮಿಟಿ ಫ್ಯೂಝ್ಗಳ (ಗುರಿ ಸನಿಹವಾದಾಗ ಸ್ಫೋಟಕಗಳನ್ನು ಸ್ಫೋಟಿಸುವ ಸಾಧನ) ಪರೀಕ್ಷೆಯನ್ನೂ ಯಶಸ್ವಿಯಾಗಿ ಮುಗಿಸಲಾಗಿದೆ. ಈ ಸಾಧನಗಳನ್ನು ಭಾರತೀಯ ಸೇನೆ ಬಳಸುತ್ತದೆ. ಇದೇ ವರ್ಷ ಜೂನ್ನಲ್ಲಿ, ಇದೇ ತಿಂಗಳಲ್ಲಿ ಹಿಂದೊಮ್ಮೆ ಇವುಗಳನ್ನು ಪರೀಕ್ಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.