
ಗಡಿಯಲ್ಲಿ ಪಾಕ್ ಸೇನಾ ನೆಲೆ ಧ್ವಂಸ, ವಿಡಿಯೋ ರಿಲೀಸ್; Indian Army
Team Udayavani, May 23, 2017, 4:14 PM IST

ನವದೆಹಲಿ:ಭಾರತದ ಗಡಿಭಾಗದಲ್ಲಿ ನುಸುಳುಕೋರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನ ಮಿಲಿಟರಿಗೆ ತಕ್ಕ ಪ್ರತ್ಯುತ್ತರ ಎಂಬಂತೆ
ಭಾರತೀಯ ಸೇನಾ ಪಡೆ ಗಡಿಭಾಗದಲ್ಲಿರುವ ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸ ಮಾಡಿರುವುದನ್ನು ಮಂಗಳವಾರ ಬಹಿರಂಗಗೊಳಿಸಿದೆ. ಘಟನೆಯಲ್ಲಿ 20ರಿಂದ 25 ಸೈನಿಕರು ಸಾವನ್ನಪ್ಪಿರುವ ಸಾಧ್ಯತೆ ಇದ್ದಿರುವುದಾಗಿ ತಿಳಿಸಿದೆ.
ಜಮ್ಮು ಕಾಶ್ಮೀರದ ಗಡಿಭಾಗದ ನೌಶೇರಾ ಸೆಕ್ಟರ್ ನಲ್ಲಿ ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸ ಮಾಡಿರುವುದಾಗಿ ಮೇಜರ್ ಜನರಲ್ ಅಶೋಕ್ ನರುಲಾ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಗಡಿಭಾಗ ನುಸುಳಿ ಬರುತ್ತಿರುವ ನುಸುಳುಕೋರರು ಜಮ್ಮು ಕಾಶ್ಮೀರ ಪ್ರದೇಶದ ಯುವಕರ ಮೇಲೆ ಪ್ರಭಾವ ಬೀರುತ್ತಿದ್ದು ಆ ಚಟುವಟಿಕೆ ಹತ್ತಿಕ್ಕುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವುದಾಗಿ ವಿವರಿಸಿದರು.
ಗಡಿಭಾಗದಲ್ಲಿ ಶಸ್ತ್ರ ಸಜ್ಜಿತ ನುಸುಳುಕೋರರಿಗೆ ಪಾಕಿಸ್ತಾನ ಸೇನೆ ಬೆಂಬಲ ನೀಡುತ್ತಿದೆ. ಗಡಿ ನುಸುಳಿ ಬಂದವರು ಜಮ್ಮು ಕಾಶ್ಮೀರ ಯುವಕರ ಮೇಲೆ ಪ್ರಭಾವ ಬೀರುವ ಕೆಲಸ ಮಾಡುತ್ತಿರುವುದಾಗಿ ಹೇಳಿದರು. ಅಷ್ಟೇ ಅಲ್ಲ ಗಡಿಭಾಗದ ಗ್ರಾಮಗಳನ್ನೂ ಗುರಿಯಾಗಿರಿಸಿ ದಾಳಿ ನಡೆಸಲು ಹೇಸುವುದಿಲ್ಲ ಎಂದು ತಿಳಿಸಿದರು.
ಆ ನಿಟ್ಟಿನಲ್ಲಿ ಗಡಿ ನುಸುಳುಕೋರರಿಗೆ ಪಾಠ ಕಲಿಸಲು ಗಡಿಭಾಗದ ಪಾಕ್ ಸೇನಾ ನೆಲೆಗಳನ್ನು ಗ್ರೆನೇಡ್ ಲಾಂಚರ್ ಮೂಲಕ
ಧ್ವಂಸಗೊಳಿಸಿರುವುದಾಗಿ ತಿಳಿಸಿದ ನರುಲಾ ಅವರು ಕೇವಲ 24 ಸೆಕೆಂಡ್ ಗಳಲ್ಲಿ ಧ್ವಂಸಗೊಳಿಸಿರುವುದಾಗಿ ವಿವರಿಸಿದರು.
@meena7099 @Raima95293000 @mridul63 @vprakash68 @anuradhagoldie8 @NaMo_Satya @Suparna228 @DrPankajKGulati @Sahadev214 @SV99999 @adorablejiji @agrwal_akhil @SavitaSatish2 @PplOfIndia @SDesai08589571 @macharajarao @MeenaDasNarayan @premasridevi @PoliticalBhabhi @ShivaaniKTalwar @DrGPradhan In a major operation Indian Army bombs the hell out of Pakistani check posts across LOC in Naushera Sector of J&K !
— Ⓜ✒Ⓜ (@Mukt_Mann) May 23, 2017
Trust @narendramodi ! pic.twitter.com/rsYwzhPvUw
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!

UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.