![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Sep 28, 2019, 5:12 AM IST
ಹೊಸದಿಲ್ಲಿ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ವೊಂದು ಭೂತಾನ್ನ ಪೂರ್ವಭಾಗದಲ್ಲಿ ಶುಕ್ರವಾರ ಪತನಗೊಂಡಿದ್ದು, ಅದರಲ್ಲಿದ್ದ ಇಬ್ಬರು ಪೈಲಟ್ಗಳೂ ಮೃತಪಟ್ಟಿದ್ದಾರೆ. ಒಂದೇ ಎಂಜಿನ್ ಇರುವ ಹೆಲಿಕಾಪ್ಟರ್ ಶುಕ್ರವಾರ ಮಧ್ಯಾಹ್ನ ಅರುಣಾಚಲಪ್ರದೇಶದ ಖೀರ್ಮು ಎಂಬಲ್ಲಿಂದ ಭೂತಾನ್ನ ಯೋನ್ಫುಲಾಗೆ ಹೊರಟಿತ್ತು. ಸುಮಾರು 1 ಗಂಟೆ ವೇಳೆಗೆ ಕಾಪ್ಟರ್ ಸಂಪರ್ಕ ಕಡಿದುಕೊಂಡು, ಪತನಗೊಂಡಿತು. ಅದರಲ್ಲಿದ್ದ ಇಬ್ಬರು ಪೈಲಟ್ಗಳಾದ ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ರಜನೀಶ್ ಪರ್ಮಾರ್ ಹಾಗೂ ಭೂತಾನ್ನ ಸೇನೆಯ ಪೈಲಟ್ ಸಾವಿಗೀಡಾಗಿದ್ದಾರೆ. ಶುಕ್ರವಾರವೇ ರಜನೀಶ್ ಅವರ ಜನುಮ ದಿನವೂ ಆಗಿತ್ತು ಎಂದು ಹೇಳಲಾಗಿದೆ. ಘಟನೆ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.