Fathima Beevi: ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿ ಫಾತಿಮಾ ಬೀವಿ ನಿಧನ


Team Udayavani, Nov 23, 2023, 1:35 PM IST

fathima

ನವದೆಹಲಿ: ಭಾರತದ ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕಗೊಂಡ ಮೊದಲ ಮಹಿಳಾ ನ್ಯಾಯಾಧೀಶರಾದ ಜಸ್ಟಿಸ್ ಎಂ. ಫಾತಿಮಾ ಬೀವಿ ಅವರು ಗುರುವಾರ ನಿಧನಹೊಂದಿದರು. ಅವರಿಗೆ 96 ವರ್ಷ ವಯಸ್ಸಾಗಿತ್ತು.

ಮೂರು ದಿನಗಳ ಹಿಂದೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಕೊಲ್ಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ನ್ಯಾಯಮೂರ್ತಿ ಬೀವಿ ಅವರು ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಮೊದಲ ಮಹಿಳೆ. ದೇಶದ ಉನ್ನತ ನ್ಯಾಯಾಂಗಕ್ಕೆ ನೇಮಕಗೊಂಡ ಮೊದಲ ಮುಸ್ಲಿಂ ಮಹಿಳೆಯೂ ಕೂಡ ಆಗಿದ್ದರು.

ಫಾತಿಮಾ ಬೀವಿ ಅವರು ಏಪ್ರಿಲ್ 30, 1927 ರಂದು ಪಥನಂತಿಟ್ಟದಲ್ಲಿ ಜನಿಸಿದರು. 1950 ರಲ್ಲಿ, ಅವರು ಬಾರ್ ಕೌನ್ಸಿಲ್ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದು ಚಿನ್ನದ ಪದಕವನ್ನು ಪಡೆದ ಮೊದಲ ಮಹಿಳೆಯಾದರು.

ಅವರು ಕೇರಳದಲ್ಲಿ ವಕೀಲರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು 1974 ರಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದರು. 1980 ರಲ್ಲಿ, ಅವರು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯನ್ನು ಸೇರಿದರು ಮತ್ತು 1983 ರಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡರು.

1989ರಲ್ಲಿ ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ, ಅವರು ಉನ್ನತ ನ್ಯಾಯಾಂಗದಲ್ಲಿ ಮೊದಲ ಮುಸ್ಲಿಂ ಮಹಿಳೆ ಮತ್ತು ಏಷ್ಯಾದ ದೇಶದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಮೊದಲ ಮಹಿಳೆಯಾಗಿದ್ದಾರೆ.

1993 ರಲ್ಲಿ ನಿವೃತ್ತರಾದ ನಂತರ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಮತ್ತು ನಂತರ ತಮಿಳುನಾಡಿನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನಂತರ ಅವರು ತಮಿಳುನಾಡು ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಿದರು.

ಇದನ್ನೂ ಓದಿ: Shocking: 142 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ, ಸರಕಾರಿ ಶಾಲೆಯ ಪ್ರಾಂಶುಪಾಲ ಅರೆಸ್ಟ್

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.