ಹಠಾತ್ ಅನಾರೋಗ್ಯ : ಮತ್ತೆ ಆಸ್ಪತ್ರೆಗೆ ದಾಖಲಾದ ಇಂದ್ರಾಣಿ ಮುಖರ್ಜಿ
Team Udayavani, Jun 2, 2018, 12:30 PM IST
ಮುಂಬಯಿ : ಪುತ್ರಿ ಶೀನಾ ಬೋರಾ ಮರ್ಡರ್ ಕೇಸಿನ ಪ್ರಧಾನ ಆರೋಪಿಯಾಗಿ ಜೈಲು ಪಾಲಾಗಿರುವ ಮಾಜಿ ಮಾಧ್ಯಮ ಕಾರ್ಯನಿರ್ವಾಹಕಿ ಇಂದ್ರಾಣಿ ಮುಖರ್ಜಿ ಅವರಿಗೆ ನಿನ್ನೆ ರಾತ್ರಿ ಮತ್ತೆ ಹಠಾತ್ ಎದೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಜೈಲಿನಿಂದ ಒಯ್ದು ಇಲ್ಲಿನ ಜೆಜೆ ಆಸ್ಪತ್ರೆಗೆ ಸೇರಿಸಲಾಗಿದೆ.
ಇಲ್ಲಿನ ಬೈಕುಲಾ ಮಹಿಳಾ ಜೈಲಿನಲ್ಲಿ ಇರಿಸಲಾಗಿರುವ 46ರ ಹರೆಯ ಮಾಜಿ ಐಎನ್ಎಕ್ಸ್ ಮೀಡಿಯಾ ಸಹ ಸ್ಥಾಪಕಿ “ಇಂದ್ರಾಣಿ ಮುಖರ್ಜಿ ಅವರಿಗೆ ನಿನ್ನೆ ರಾತ್ರಿ 11.30ರ ಹೊತ್ತಿಗೆ ಹಠಾತ್ ಎದೆ ನೋವು ಕಾಣಿಸಿಕೊಂಡಿತು; ಒಡನೆಯೇ ಅವರನ್ನು ಸರಕಾರದ ಜೆಜೆ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಕೊಡಿಸಲಾಯಿತು. ಈಗ ಅವರ ದೇಹಾರೋಗ್ಯ ಸ್ಥಿರವಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ.
ಇಂದ್ರಾಣಿ ಅವರು ಕಳೆದ ಎರಡು ತಿಂಗಳ ಅವಧಿಯಲ್ಲಿ ಎದೆ ನೋವೆಂದು ಆಸ್ಪತ್ರೆಗೆ ದಾಖಲಾಗಿರುವುದು ಇದು ಎರಡನೇ ಬಾರಿಯಾಗಿದೆ. ಕಳೆದ ಎಪ್ರಿಲ್ ನಲ್ಲಿ ಆಕೆಯನ್ನು ಅರೆ ಪ್ರಜ್ಞಾವಸ್ಥೆಯಲ್ಲಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.