‘ಉದಯವಾಣಿ’ ಸೇರಿ 30 ಮಾಧ್ಯಮ ಸಂಸ್ಥೆಗಳಿಗೆ ‘ಅಂತಾರಾಷ್ಟ್ರೀಯ ಯೋಗ ದಿವಸ್‌ ಮೀಡಿಯಾ ಸಮ್ಮಾನ್‌’

'ಸುರಾಜ್‌'ಗೆ ಶ್ರಮಿಸುವ ಮಾಧ್ಯಮಗಳ ಬಗ್ಗೆ ಮೆಚ್ಚುಗೆ

Team Udayavani, Jan 8, 2020, 1:53 AM IST

Yog-Samman-730

'ಅಂತಾರಾಷ್ಟ್ರೀಯ ಯೋಗ ದಿವಸ್‌ ಮೀಡಿಯಾ ಸಮ್ಮಾನ್‌' ಪ್ರಶಸ್ತಿ ಸ್ವೀಕರಿಸಿದ 30 ನಾನಾ ಭಾಷೆಗಳ ಮಾಧ್ಯಮಗಳ ಸಂಪಾದಕರ ಜೊತೆಗೆ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌.

ಹೊಸದಿಲ್ಲಿ: ಕನ್ನಡಿಗರ ‘ಜನಮನದ ಜೀವನಾಡಿ’ಯಾಗಿರುವ ಉದಯವಾಣಿ ಸೇರಿ ದಂತೆ ದೇಶದ 30 ಮಾಧ್ಯಮ ಸಂಸ್ಥೆಗಳಿಗೆ ಮೊದಲ ‘ಅಂತಾರಾಷ್ಟ್ರೀಯ ಯೋಗ ದಿವಸ್‌ ಮೀಡಿಯಾ ಸಮ್ಮಾನ್‌’ ಪ್ರಶಸ್ತಿಯನ್ನು ಹೊಸದಿಲ್ಲಿಯ ನ್ಯಾಶ‌ನಲ್‌ ಮೀಡಿಯಾ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳವಾರ ಪ್ರದಾನ ಮಾಡಲಾಗಿದೆ.

ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್‌ ಜಾವಡೇಕರ್‌ ಅವರು, ‘ಸಮಾಜದ ಒಳಿತಿಗಾಗಿ ಯೋಗವನ್ನು ಪ್ರಚುರಪಡಿಸುವಲ್ಲಿ ಕೊಡುಗೆ ನೀಡಿರುವಂಥ ಮಾಧ್ಯಮ ಸಂಸ್ಥೆಗಳನ್ನು ನಾವು ಈ ಪ್ರಶಸ್ತಿಯ ಮೂಲಕ ವಿಶಿಷ್ಟವಾಗಿ ಗೌರವಿಸುತ್ತಿದ್ದೇವೆ. ಸುದ್ದಿ, ಅಭಿಪ್ರಾಯ ಹಾಗೂ ಜಾಹೀರಾತುಗಳಾಚೆಗೆ ಮಾಧ್ಯಮ ಸಂಸ್ಥೆಗಳ ಸಾಧನೆಯನ್ನು ಗುರುತಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಇಂತಹ ಪ್ರಶಸ್ತಿಯನ್ನು ನೀಡಲಾಗುತ್ತಿದೆ’ ಎಂದು ಹೇಳಿದ್ದಾರೆ.

ಸುರಾಜ್‌ಗಾಗಿ ಶ್ರಮ: ಈ ವೇಳೆ, ಲೋಕಮಾನ್ಯ ತಿಲಕ್‌ ಅವರ ‘ಕೇಸರಿ’ ಪತ್ರಿಕೆ ಕುರಿತು ಪ್ರಸ್ತಾಪಿಸಿದ ಸಚಿವ ಜಾವಡೇಕರ್‌, “ತಿಲಕ್‌ ಅವರು “ಸ್ವರಾಜ್ಯ’ದ ಕುರಿತು ಜನರಲ್ಲಿ ಅರಿವು ಮೂಡಿಸಲೆಂದೇ “ಕೇಸರಿ’ ಪತ್ರಿಕೆಯನ್ನು ಆರಂಭಿಸಿದರು. ಈಗ ಮಾಧ್ಯಮ ಸಂಸ್ಥೆಗಳು ‘ಸುರಾಜ್‌’ಗಾಗಿ- ಅಂದರೆ ಉತ್ತಮ ಆರೋಗ್ಯಸೇವೆ, ಶಿಕ್ಷಣ, ನಾಗರಿಕ ಸೌಲಭ್ಯಗಳು ಎಲ್ಲ ರಿಗೂ ಲಭ್ಯವಾಗುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶ್ರಮಿಸುತ್ತಿವೆ. ಇದು ಭಾರತದ ಪ್ರೌಢ ಪ್ರಜಾಸತ್ತೆಯ ಪ್ರತೀಕವಾಗಿದೆ’ ಎಂದೂ ಹೇಳಿದ್ದಾರೆ.

ಪ್ರಧಾನಿ ಮೋದಿ ಅವರ ದೂರದೃಷ್ಟಿ ಹಾಗೂ ಪರಿಶ್ರಮದಿಂದಾಗಿಯೇ ಯೋಗವು ಜಾಗತಿಕ ಗೌರವಕ್ಕೆ ಪಾತ್ರವಾಗಿದೆ. ಅಂತಾರಾಷ್ಟ್ರೀಯ ಯೋಗ ದಿನ ಆಚರಣೆಗೆ ಸಂಬಂಧಿಸಿ ಭಾರತವಿಟ್ಟ ಪ್ರಸ್ತಾಪಕ್ಕೆ ವಿಶ್ವಸಂಸ್ಥೆಯೂ ಸಂಪೂರ್ಣ ಬೆಂಬಲ ನೀಡಿದೆ ಎಂದೂ ಹೇಳಿದ ಜಾವಡೇಕರ್‌, ಪ್ರಶಸ್ತಿಗೆ ಪಾತ್ರವಾದ ಎಲ್ಲ ಮಾಧ್ಯಮ ಸಂಸ್ಥೆಗಳನ್ನೂ ಅಭಿನಂದಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾರತೀಯ ಪತ್ರಿಕಾ ಮಂಡಳಿಯ ಮುಖ್ಯಸ್ಥರಾದ ನ್ಯಾ| ಸಿ.ಕೆ. ಪ್ರಸಾದ್‌, ಆಯುಷ್‌ ಸಚಿವ ಶ್ರೀಪಾದ್‌ ಯೆಸ್ಲೋ ನಾಯ್ಕ, ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿಕ್ರಂ ಸಹಾಯ್‌ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಕನ್ನಡ ಮುದ್ರಣ ವಿಭಾಗದಲ್ಲಿ ಉದಯವಾಣಿಗೆ ಗರಿ

ಯೋಗದ ಕುರಿತು ಜನರಲ್ಲಿ ಅರಿವು ಮೂಡಿಸಿದ ಮಾಧ್ಯಮಗಳಿಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೀಡುವ ‘ಅಂತಾರಾಷ್ಟ್ರೀಯ ಯೋಗ ದಿವಸ್‌ ಮೀಡಿಯಾ ಸಮ್ಮಾನ್‌’ ಗೌರವವು ಈ ಬಾರಿ ಮುದ್ರಣ ಮಾಧ್ಯಮ (ಕನ್ನಡ) ವಿಭಾಗದಲ್ಲಿ ಉದಯವಾಣಿಗೆ ಲಭಿಸಿದೆ.

ಉದಯವಾಣಿ 2019ರ ಜೂನ್‌ 14ರಿಂದ 22ರ ತನಕ ಈ ಅಭಿಯಾನವನ್ನು ನಡೆಸಿದ್ದು, ಇದರಡಿ ಯೋಗಗುರುಗಳು ಹಾಗೂ ಯೋಗತಜ್ಞರ ಲೇಖನಗಳನ್ನು ಪ್ರಕಟಿಸಿತ್ತು. ವಿಶೇಷ ಪುಟಗಳ ಮೂಲಕ ವಿವಿಧ ಆಸನಗಳ ಪರಿಚಯ ಹಾಗೂ ರಾಜ್ಯದ ಯೋಗ ಪರಂಪರೆಯ ಬಗ್ಗೆಯೂ ನಿರಂತರ ಬೆಳಕು ಚೆಲ್ಲಿತ್ತು.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.