2014ರಿಂದ ಅಂತಾರಾಷ್ಟ್ರೀಯ ಗಾಂಧಿ ಶಾಂತಿ ಪ್ರಶಸ್ತಿ ಯಾರಿಗೂ ಸಂದಿಲ್ಲ !


Team Udayavani, Oct 2, 2018, 5:44 PM IST

mkgandhi-700.jpg

ಹೊಸದಿಲ್ಲಿ :  2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಅಂದರೆ ಕಳೆದ ನಾಲ್ಕು ವರ್ಷಗಳಿಂದ ಅಂತಾರಾಷ್ಟ್ರೀಯ ಗಾಂಧಿ ಶಾಂತಿ ಪ್ರಶಸ್ತಿಯನ್ನು ಸರಕಾರ ಯಾರಿಗೂ ನೀಡಿಲ್ಲ ಎಂಬ ಕಹಿ ಸತ್ಯ ಇದೀಗ ಬಹಿರಂಗವಾಗಿದೆ.

ಗಾಂಧಿ ಶಾಂತಿ ಪ್ರಶಸ್ತಿಗಾಗಿ ಕಳೆದ ನಾಲ್ಕು ವರ್ಷಗಳಲ್ಲಿ ನೋಡಾಲ್‌ ಏಜನ್ಸಿಯು ನಾಮಾಂಕನ (ಶಿಫಾರಸು) ಗಳನ್ನು ಸ್ವೀಕರಿಸಿ ಸರಕಾರಕ್ಕೆ ಕಳುಹಿಸಿದೆ; ಆದರೆ ಅವುಗಳಿಗೆ ಈಗಿನ್ನೂ ಅನುಮೋದನೆಯನ್ನು ಕಾಯಲಾಗುತ್ತಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಅಧಿಕಾರಿಯೋರ್ವರು ಹೇಳಿದ್ದಾರೆ. 

“ನಾಮಾಂಕನಗಳೇನೋ ಇವೆ; ಆದರೆ ಯಾಕಾಗಿ ಅವುಗಳನ್ನು ವಿಳಂಬಿಸಲಾಗಿದೆ ಎಂಬುದನ್ನು ಹೇಳುವುದು ಕಷ್ಟ’ ಎಂದು ಅಧಿಕೃತ ಮೂಲಗಳು ಉದ್ಗರಿಸಿವೆ.

ಅಂತಾರಾಷ್ಟ್ರೀಯ ಗಾಂಧಿ ಶಾಂತಿ ಪ್ರಶಸ್ತಿಯನ್ನು 1995ರಲ್ಲಿ ರಾಷ್ಟ್ರಪಿತನ 125 ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಸ್ಥಾಪಿಸಲಾಗಿತ್ತು. 2014ರಲ್ಲಿ ಕೊನೆಯ ಬಾರಿಗೆ ಇದನ್ನು ಇಸ್ರೋಗೆ ನೀಡಲಾಗಿತ್ತು. ಆ ಬಳಿಕ ಈ ತನಕ ಯಾರಿಗೂ ಈ ಪ್ರಶಸ್ತಿಯನ್ನು ನೀಡಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಇಡಿಯ ದೇಶ ರಾಷ್ಟ್ರಪತಿ ಮಹಾತ್ಮ ಗಾಂದೀಜಿಯವರ 149ನೇ ಜನ್ಮ ವರ್ಷಾಚರಣೆ ನಡೆಸುತ್ತಿರುವ ನಡುವೆಯೇ ಈ ವಿಷಯ ಬಹಿರಂಗವಾಗಿರುವುದು ಕಾಕತಾಳೀಯವಾಗಿದೆ.

ಗಾಂಧಿ ಶಾಂತಿ ಪ್ರಶಸ್ತಿಯು 1 ಕೋಟಿ ರೂ. ನಗದು ಮತ್ತು ಫ‌ಲಕ ಮತ್ತು ಭಿನ್ನವತ್ತಳೆಯನ್ನು ಒಳಗೊಂಡಿದೆ. ನಗದು ಬಹುಮಾನವನ್ನು ವಿಶ್ವದ ಯಾವುದೇ ಕರೆನ್ಸಿಗೂ ಬದಲಾಯಿಸುವುದಕ್ಕೆ ಅವಕಾಶ ಇರುತ್ತದೆ. 

1995ರಲ್ಲಿ ಮೊದಲ ಅಂತಾರಾಷ್ಟ್ರೀಯ ಗಾಂಧಿ ಶಾಂತಿ ಪ್ರಶಸ್ತಿ ಪಡೆದವರು ತಾಂಜಾನಿಯಾದ ಮಾಜಿ ಅಧ್ಯಕ್ಷ ಜೂಲಿಯಸ್‌ ಕೆ ನೈರೇರೆ. ಮುಂದಿನ ವರ್ಷ ಇದನ್ನು ಸರ್ವೋದಯ ಶ್ರಮದಾನ ಆಂದೋಲನದ ಸ್ಥಾಪಕ ಅಧ್ಯಕ್ಷ ಎ ಟಿ ಅರಿಯರತ್ನೆ ಪಡೆದರು. 1997ರಲ್ಲಿ ಇದನ್ನು ಜರ್ಮನಿಯ ಜೆರಾಡ್‌ರ ಫಿಶರ್‌ಗೆ ನೀಡಲಾಯಿತು. 1998 ಮತ್ತು 1999ರಲ್ಲಿ ಇದನ್ನು ರಾಮಕೃಷ್ಣ ಮಿಶನ್‌ಗೆ ನೀಡಲಾಯಿತು. 

2000 ಇಸವಿಯಲ್ಲಿ ಇದನ್ನು ಜಂಟಿಯಾಗಿ ನೆಲ್ಸನ್‌ ಮಂಡೇಲ ಮತ್ತು ಬಾಂಗ್ಲಾದೇಶದ ಗ್ರಾಮೀಣ ಬ್ಯಾಂಕಿಗೆ ನೀಡಲಾಯಿತು. 2005ರಲ್ಲಿ ಇದನ್ನು ಆರ್ಚ್‌ಬಿಷಪ್‌ ಡೆಸ್ಮಂಡ್‌ ಟುಟು ಅವರಿಗೆ ನೀಡಲಾಯಿತು. ಅಲ್ಲಿಂದ ಎಂಟು ವರ್ಷಗಳ ಬಳಿಕ 2013ರಲ್ಲಿ ಇದನ್ನು ಚಾಂದ್ನಿ ಪ್ರಸಾದ್‌ ಭಟ್‌ (ಚಿಪ್ಕೋ ಆಂದೋಲನದೊಂದಿಗೆ ಗುರುತಿಸಿಕೊಂಡಿದ್ದ ಖ್ಯಾತ ಪರಿಸರವಾದಿ) ಅವರಿಗೆ ನೀಡಲಾಯಿತು. 

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.