Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ
Team Udayavani, May 14, 2024, 6:05 PM IST
ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾಗಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಮಂಗಳವಾರ ತಿರುಗೇಟು ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ‘ಮೋದಿ ಅವರು ಜ್ಯೋತಿಷಿಯೇ’ ಎಂದು ಪ್ರಶ್ನಿಸಿದ್ದಾರೆ.
ಖಾಸಗಿ ವಾಹಿನಿ ಜೊತೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ನಾನು ಜ್ಯೋತಿಷಿಯಲ್ಲ. ಅವರು (ಪ್ರಧಾನಿ ಮೋದಿ) ಆಗಿದ್ದರೆ, ನನಗೆ ಹೇಳಿ ಎಂದರು.
“ನಾವು ಮುಂಬರುವ ಚುನಾವಣೆಯಲ್ಲಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಮುನ್ನಡೆಯುತ್ತಿದ್ದೇವೆ. ಕಾಂಗ್ರೆಸ್ ಗೆ ಗುರುತು ಮೂಡಿಸಲು ಸಹ ಸಾಧ್ಯವಾಗುವುದಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದ್ದರು.
“ಉತ್ತರ ಪ್ರದೇಶದ ಜನರು ಪರಿವಾರವಾದವನ್ನು ಒಪ್ಪುವುದಿಲ್ಲ. ಅವರು ತಮ್ಮ ಜೀವನವನ್ನು ಬದಲಿಸಿದ ಪರ್ಯಾಯ ಮಾದರಿಯನ್ನು ನೋಡಿದ್ದಾರೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕಿ ವಾದ್ರಾ, ಯಾವ ಪಕ್ಷ ಏನು ಮಾಡಿದೆ ಎಂಬುದನ್ನು ಜಾಗೃತರಾಗಿ ಅರ್ಥಮಾಡಿಕೊಳ್ಳಲು ಸಾರ್ವಜನಿಕರನ್ನು ಒತ್ತಾಯಿಸಿದರು.
“ಮೊದಲು, ನಿಮ್ಮ ಸರ್ಕಾರ ಆಳುವ ರಾಜ್ಯಗಳಲ್ಲಿ ನೀವು [ಬಿಜೆಪಿ] ಏನು ಮಾಡಿದ್ದೀರಿ ಎಂಬುದನ್ನು ನೋಡಿ. ಹಾಗಾದರೆ ನಮ್ಮ ಸರ್ಕಾರ [ಕಾಂಗ್ರೆಸ್] ಏನು ಮಾಡುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಿ. ತದನಂತರ, ಇದೆಲ್ಲವನ್ನೂ ಪರಿಗಣಿಸಿ, ನಿಮ್ಮ ವಿವೇಚನೆಯಿಂದ ಮತ ಚಲಾಯಿಸಿ” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.
ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತನಾಡುವವರಿಂದ ಪ್ರಜಾಪ್ರಭುತ್ವವನ್ನು ಉಳಿಸುವ ಅವಶ್ಯಕತೆಯಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.