![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Aug 6, 2024, 11:26 PM IST
ಹೊಸದಿಲ್ಲಿ: ಮಂಗಳವಾರ ದಿಲ್ಲಿಯಲ್ಲಿ ಬಾಂಗ್ಲಾ ಪರಿಸ್ಥಿತಿ ಕುರಿತು ನಡೆದ ಸರ್ವಪಕ್ಷ ಸಭೆಯ ವೇಳೆ, “ಬಾಂಗ್ಲಾ ದೇಶದಲ್ಲಿನ ಹಿಂಸಾಚಾರದ ಹಿಂದೆ ಪಾಕಿಸ್ಥಾನ ಸೇರಿದಂತೆ ವಿದೇಶಿ ರಾಷ್ಟ್ರಗಳ ಕೈವಾಡ ಇದೆಯೇ’ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಇದಕ್ಕೆ ಉತ್ತರಿಸಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್, “ವಿದೇಶಿ ಕೈವಾಡದ ಕುರಿತ ಸುದ್ದಿಯನ್ನು ತಳ್ಳಿಹಾಕಲಾಗದು. ಈ ಬಗ್ಗೆ ಮಾಹಿತಿಗಳನ್ನು ಪರಿಶೀಲಿಸಲಾಗುತ್ತಿದೆ. ಒಟ್ಟಾರೆ ಬೆಳವಣಿಗೆಗಳ ಮೇಲೆ ನಾವು ನಿಗಾ ವಹಿಸಿದ್ದೇವೆ’ ಎಂದಿದ್ದಾರೆ.
ಇದಲ್ಲದೇ ಬಾಂಗ್ಲಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಭಾರತ ಸರಕಾರ ಕೈಗೊಂ ಡಿರುವ ಕಾರ್ಯತಂತ್ರದ ಬಗ್ಗೆಯೂ ರಾಹುಲ್ ಪ್ರಶ್ನಿಸಿದ್ದಾರೆ. ಜತೆಗೆ, ಬಾಂಗ್ಲಾದಲ್ಲಿನ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾಕರ ಸುರಕ್ಷತೆ ಬಗ್ಗೆಯೂ ಪ್ರಸ್ತಾವಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್, ವೈಎಸ್ಸಾರ್ ಕಾಂಗ್ರೆಸ್, ಜೆಡಿಯು, ಡಿಎಂಕೆ ಸೇರಿದಂತೆ ವಿಪಕ್ಷಗಳ ಎಲ್ಲ ನಾಯಕರೂ ಬಾಂಗ್ಲಾದೇಶ ವಿಚಾರದಲ್ಲಿ ಕೇಂದ್ರ ಸರಕಾರ ಕೈಗೊಳ್ಳುವ ಕ್ರಮಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.