Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
ವಿಶ್ವದ ಅತಿದೊಡ್ಡ ಹಗರಣ ಎಂಬ ರಾಹುಲ್ ಹೇಳಿಕೆಗೆ ಗರಂ
Team Udayavani, Apr 20, 2024, 6:45 AM IST
ಹೊಸದಿಲ್ಲಿ: “ಚುನಾವಣ ಬಾಂಡ್ ಎಂಬುದು ವಿಶ್ವದಲ್ಲೇ ಅತಿದೊಡ್ಡ ಹಗರಣ’ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಕಾಂಗ್ರೆಸ್ ಪಡೆದಿರುವ ಚುನಾವಣೆ ಬಾಂಡ್ ಕೂಡ ಸುಲಿಗೆ ಅಲ್ಲವೇ’ ಎಂದು ಪ್ರಶ್ನಿಸಿದ್ದಾರೆ.
ಮಂಡ್ಯದಲ್ಲಿ ಎ. 17ರಂದು ನಡೆದ ಕಾಂಗ್ರೆಸ್ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ್ದ ಪಕ್ಷದ ನಾಯಕ ರಾಹುಲ್ ಗಾಂಧಿ, “ಚುನಾವಣ ಬಾಂಡ್ ವ್ಯವಸ್ಥೆಯು ವಿಶ್ವದ ಅತೀ ದೊಡ್ಡ ಸುಲಿಗೆ ಯೋಜನೆಯಾಗಿದೆ. ಪ್ರಧಾನಿ ಮೋದಿ ಅವರು ಭ್ರಷ್ಟಾಚಾರದ ಚಾಂಪಿಯನ್ ಆಗಿದ್ದಾರೆ’ ಎಂದು ಕಿಡಿಕಾರಿದ್ದರು.
ಶುಕ್ರವಾರ ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ ಅವರು ರಾಹುಲ್ ಹೇಳಿಕೆಗೆ ಪ್ರತಿ ಕ್ರಿಯಿಸಿ, “ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಪಕ್ಷಗಳು ಚುನಾವಣ ಬಾಂಡ್ಗಳ ವಿಷಯವನ್ನು ಮುನ್ನೆಲೆಗೆ ತಂದಿವೆ. ಕಾಂಗ್ರೆಸ್ ಸಹಿತ ವಿಪಕ್ಷಗಳು ಕೂಡ ಚುನಾವಣ ಬಾಂಡ್ಗಳ ಮೂಲಕ ದೇಣಿಗೆ ಸಂಗ್ರಹಿಸಿವೆ. ಹೀಗಾಗಿ ನಾವು ಕೂಡ ಸುಲಿಗೆ ಮಾಡಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಬೇಕು’ ಎಂದು ತಿರುಗೇಟು ನೀಡಿ ದ್ದಾರೆ. ಕಾಂಗ್ರೆಸ್ ಸಂಸದರ ಸಂಖ್ಯೆಗೆ ಹೋಲಿಸಿ ದರೆ ಅದಕ್ಕಿಂತ ಹೆಚ್ಚು ದೇಣಿಗೆಯನ್ನು ಆ ಪಕ್ಷ ಪಡೆದಿದೆ ಎಂದೂ ದೂರಿದ್ದಾರೆ.
“ನಮ್ಮ ಸಂಸದರ ಸಂಖ್ಯೆಗೆ ಹೋಲಿಸಿದರೆ ನಾವು ಪಡೆದಿರುವ ದೇಣಿಗೆ ಕಡಿಮೆ. ಈ ಲೆಕ್ಕದಲ್ಲಿ ಬಿಜೆಪಿಗಿಂತ ಹೆಚ್ಚು ದೇಣಿಗೆಯನ್ನು ಕಾಂಗ್ರೆಸ್ ಪಡೆದಿದೆ. ಇದರಲ್ಲಿ ಅವರಿಗೆ ಯಾವುದೇ ಆಕ್ಷೇಪ ಇಲ್ಲ. ಕೇಂದ್ರ ಸರಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರ, ಹಗರಣಗಳ ಕಳಂಕವಿಲ್ಲ. ಹೀಗಾಗಿ ಜನರಲ್ಲಿ ಗೊಂದಲ ಮೂಡಿಸಿಲು ವಿಪಕ್ಷಗಳು ಈ ರೀತಿ ಸುಳ್ಳು ಆರೋಪಗಳನ್ನು ಮಾಡುತ್ತಿವೆ. ಆದರೆ ಅವರು ಇದರಲ್ಲಿ ಯಶಸ್ವಿಯಾಗುವುದಿಲ್ಲ’ ಎಂದು ಅಮಿತ್ ಶಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.