ಮಧ್ಯಪ್ರಾಚ್ಯದಿಂದ ದೇಶಕ್ಕಿಲ್ಲ ಶುಭಸುದ್ದಿ?


Team Udayavani, Dec 28, 2017, 6:05 AM IST

madyaprachya.jpg

ನವದೆಹಲಿ: ಹೊಸ ವರ್ಷದಲ್ಲಿ ಪಶ್ಚಿಮ ಏಷ್ಯಾ ಮತ್ತು ಅರಬ್‌ ಜಗತ್ತಿನಲ್ಲಿ ಉಂಟಾಗಬಹುದಾದ ಬೆಳವಣಿಗಳು ಅಲ್ಲಿರುವ ಭಾರತೀಯರು ಮತ್ತು ಇಂಧನ ಅವಶ್ಯಕತೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಗಳಿವೆ. ವಿಶೇಷವಾಗಿ ಕೇರಳ, ಕರಾವಳಿ ಕರ್ನಾಟಕದಿಂದ ಗಲ್ಫ್ ದೇಶಗಳಿಗೆ ತೆರಳಿ ಉದ್ಯೋಗ ಮೂಲಕ ನೆಲೆ ನೆಲ್ಲಲು ಬಯಸುವವರಿಗೂ ಕರಿ ನೆರಳಾಗುವ ಸಾಧ್ಯತೆಗಳಿವೆ. 

ಇಸ್ರೇಲ್‌ ರಾಜಧಾನಿ ಜೆರುಸಲೇಂ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರ ಘೋಷಣೆ ಸದ್ಯ ವಿಶ್ವಸಂಸ್ಥೆಯಲ್ಲಿ ಬಿದ್ದು ಹೋದರೂ, ಮುಂದಿನ ದಿನಗಳಲ್ಲಿ ಅವರು ಅದನ್ನು ಪ್ರಸ್ತಾಪಿಸದೆ ಇರಲಾರರು. ಜತೆಗೆ ರಿಯಾದ್‌ ಮತ್ತು ಸೌದಿ ಅರೇಬಿಯಾ ನಡುವಿನ ಕಗ್ಗಂಟು ಕೂಡ ಉದ್ಯೋಗ ಮತ್ತು ಇತರ ಅಂಶಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. ಈ ಬಗ್ಗೆ “ದ ಇಕನಾಮಿಕ್‌ ಟೈಮ್ಸ್‌’ ವರದಿ ಮಾಡಿದೆ. ಸೌದಿ ಅರೇಬಿಯಾದಲ್ಲಿ ಕೂಡ ಆಂತರಿಕವಾಗಿ ಉದ್ಯೋಗ ನೀಡಿಕೆ ಮತ್ತಿತರ ಕ್ಷೇತ್ರಗಳಲ್ಲಿ ಹಲವು ಸುಧಾರಣೆಗಳನ್ನು ಘೋಷಣೆ ಮಾಡಿದೆ. ಅದಕ್ಕೆ ಅಲ್ಲಿನ ಸಂಪ್ರದಾಯವಾದಿಗಳು ಆಕ್ಷೇಪವೆತ್ತಿದ್ದಾರೆ.

ದುಬೈ ಟ್ರಿಪ್‌ ಆಗಲಿದೆ ದುಬಾರಿ
ಮತ್ತೂಂದು ಗಮನಾರ್ಹ ಅಂಶವೆಂದರೆ 2018ರಿಂದ ದುಬೈ ಪ್ರವಾಸ ಕೈಗೊಂಡರೆ ಅದು ದುಬಾರಿಯಾಗಲಿದೆ. ಏಕೆಂದರೆ ಜನವರಿ 1ರಿಂದ ಅಲ್ಲಿ ಶೇ.5ರಷ್ಟು ಪ್ರಮಾಣದಲ್ಲಿ ಮೌಲ್ಯವರ್ಧಿತ ತೆರಿಗೆ (ವ್ಯಾಟ್‌) ಜಾರಿಯಾಗಲಿದೆ. ಹೀಗಾಗಿ ಅಲ್ಲಿನ ದೊರೆಯುವ ಎಲ್ಲ ವಸ್ತುಗಳು ಮತ್ತು ಸೇವೆಗಳು ದುಬಾರಿಯಾಗಲಿವೆ. ದುಬೈನ ಪ್ರವಾಸೋದ್ಯಮ ಇಲಾಖೆ ಪ್ರಕಾರ ಭಾರತದಿಂದಲೇ ಸುಮಾರು 1.8 ಕೋಟಿ ಮಂದಿ ಅಲ್ಲಿಗೆ ಭೇಟಿ ನೀಡಿ, ಖರೀದಿ, ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡುತ್ತಾರೆ.

ಹೋಟೆಲ್‌, ಪ್ರೇಕ್ಷಣೀಯ ಸ್ಥಳಗಳ ಪ್ರವೇಶ ಶುಲ್ಕ, ವಿವಿಧ ವಸ್ತುಗಳ ಬೆಲೆಯ ಮೇಲೆ ತೆರಿಗೆ ವಿಧಿಸಲಾಗುತ್ತಿರುವುದರಿಂದ ಭಾರತೀಯರು ತಮ್ಮ ನಿಗದಿತ ಪ್ರವಾಸದ ವೆಚ್ಚಕ್ಕಿಂತ ಶೇ.6ರಿಂದ ಶೇ.8ರಷ್ಟು ಹೆಚ್ಚಿನ ಮೊತ್ತ ವಿನಿಯೋಗ ಮಾಡಬೇಕಾಗುತ್ತದೆ. ಕಚ್ಚಾ ತೈಲದ ಮೇಲಿನ ಬೆಲೆ ಕಡಿಮೆಯಾಗುತ್ತಿರುವುದರಿಂದ ಸಂಯುಕ್ತ ಅರಬ್‌ ಗಣರಾಜ್ಯ (ಯುಎಇ) ಆದಾಯಕ್ಕಾಗಿ ಇತರ ಮೂಲಗಳನ್ನು ಕಂಡುಕೊಳ್ಳಬೇಕಾದ್ದರಿಂದ ವ್ಯಾಟ್‌ ಅನ್ನು ಜಾರಿಗೆ ತರಬೇಕಾದ ಅನಿವಾರ್ಯತೆಗೆ ಸಿಲುಕಿದೆ.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.