World War 3…?: ಇಸ್ರೇಲ್ ಮೇಲೆ ಇರಾನ್ ದಾಳಿ 3ನೇ ಮಹಾಯುದ್ಧಕ್ಕೆ ಮುನ್ನುಡಿ: ಚರ್ಚೆ
Team Udayavani, Oct 3, 2024, 8:59 AM IST
ಹೊಸದಿಲ್ಲಿ: ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿಗಳ ದಾಳಿ ನಡೆಸುತ್ತಿದ್ದಂತೆ ಮಧ್ಯ ಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ದಟ್ಟೈಸಿವೆ. ಹಲವು ರಕ್ಷಣ ತಜ್ಞರು ಇದು 3ನೇ ಮಹಾಯುದ್ಧಕ್ಕೆ ಮುನ್ನುಡಿಯಾಗಬ ಹುದೇ ಎಂದು ಚರ್ಚಿಸುತ್ತಿದ್ದಾರೆ. ಅಮೆರಿಕದಲ್ಲಂತೂ ಈ ವಿಷಯ ಚುನಾವಣ ಚರ್ಚೆಯ ಕೇಂದ್ರ ಬಿಂದುವಾಗಿದೆ. ರಿಪಬ್ಲಿಕನ್ ಪಕ್ಷ ನಾಯಕ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ “ಜಗತ್ತು 3ನೇ ಮಹಾಯುದ್ಧಕ್ಕೆ ಬಂದು ನಿಂತಿದೆ’ ಎನ್ನುತ್ತಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಅಣು ಯುದ್ಧಕ್ಕೆ ಅಮೆರಿಕವನ್ನು ತಳ್ಳಲಿದ್ದಾರೆಂದು ರಿಪಬ್ಲಿಕನ್ನರು ಆರೋಪಿಸುತ್ತಿದ್ದಾರೆ. ಮಧ್ಯ ಪ್ರಾಚ್ಯದಲ್ಲಿ ಕಳೆದ ವರ್ಷ ಅ.7ರಿಂದ ಸಂಘರ್ಷದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಿಳಿಯಾಗುತ್ತಿಲ್ಲ. ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹಾಗಾಗಿ, ಬಹುತೇಕರು 3ನೇ ಮಹಾಯುದ್ಧ ಸನ್ನಿಹಿತವಾಗುತ್ತಿದೆ ಎಂದು ಭಾವಿಸುತ್ತಿದ್ದಾರೆ.
ವಿಶ್ವಸಂಸ್ಥೆ ಮುಖ್ಯಸ್ಥರಿಗೇ ಇಸ್ರೇಲ್ ಬಹಿಷ್ಕಾರ!
ಇರಾನ್ ದಾಳಿ ಬೆನ್ನಲ್ಲೇ ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ವಿರುದ್ಧ ಇಸ್ರೇಲ್ ಕೆಂಡಕಾರಿದೆ. ವಿಶ್ವಸಂಸ್ಥೆಯು ನಮ್ಮ ದೇಶದ ವಿಚಾರದಲ್ಲಿ ಪಕ್ಷಪಾತೀಯ ಧೋರಣೆ ಹೊಂದಿದ್ದು, ಮುಖ್ಯಸ್ಥ ಆಂಟೊನಿಯೋ ಗುಟೆರಸ್ಗೆ ನಮ್ಮ ದೇಶದೊಳಗೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ ಎಂದು ಇಸ್ರೇಲ್ ಘೋಷಿಸಿದೆ. ಇರಾನ್ ನಡೆಸಿದ ದಾಳಿಯನ್ನು ವಿಶ್ವಸಂಸ್ಥೆ ಖಂಡಿಸಿಲ್ಲ. ಜಗತ್ತಿನ ಬಹುತೇಕ ದೇಶಗಳು ಈ ಹೀನ ಕೃತ್ಯವನ್ನು ಖಂಡಿಸಿ ದ್ದರೂ, ವಿಶ್ವಸಂಸ್ಥೆ ಒಂದೇ ಒಂದು ಮಾತೂ ಆಡಿಲ್ಲ. ಅಂಥವರು ಇಸ್ರೇಲ್ ನೆಲಕ್ಕೆ ಕಾಲಿಡುವ ಅರ್ಹತೆ ಹೊಂದಿಲ್ಲ ಎಂದು ಇಸ್ರೇಲ್ ಹೇಳಿದೆ.
ಅ.7ರ ಮಾದರಿ ದಾಳಿಗೆ ಹೆಜ್ಬುಲ್ಲಾ ಸಂಚು: ಇಸ್ರೇಲ್
ಟೆಲ್ ಅವೀವ್: 2023ರ ಅ. 7ರಂದು ಹಮಾಸ್ ಉಗ್ರರು ಇಸ್ರೇಲ್ ಮೇಲೆ ನಡೆಸಿದ ದಾಳಿ ಮಾದರಿಯಲ್ಲೇ ಇಸ್ರೇಲ್ನಲ್ಲಿ ದಾಳಿಗೆ ಹೆಜ್ಬುಲ್ಲಾ ಸಂಚು ರೂಪಿಸಿತ್ತು. ಇದಕ್ಕಾಗಿ ಲೆಬನಾನ್ ಗಡಿಯಲ್ಲಿ 1,000ಕ್ಕೂ ಅಧಿಕ ಉಗ್ರರನ್ನು ನಿಯೋಜಿಸಲಾಗಿತ್ತು ಎಂದು ಇಸ್ರೇಲ್ ಮಾಹಿತಿ ನೀಡಿದೆ. ಹೀಗಾಗಿಯೇ ಉಗ್ರರನ್ನು ಗುರಿಯಾಗಿಸಿ ಲೆಬನಾನ್ ಮೇಲೆ ದಾಳಿ ನಡೆಸಿ, ಅವರ ಅಡಗುದಾಣಗಳನ್ನು ಧ್ವಂಸ ಮಾಡಿದ್ದಾಗಿ ಇಸ್ರೇಲ್ ಸಮರ್ಥನೆ ನೀಡಿದೆ.
ಇದನ್ನೂ ಓದಿ: Stock Markets Slump: ಇರಾನ್-ಇಸ್ರೇಲ್ ಯುದ್ಧಕ್ಕೆ ಷೇರುಪೇಟೆ ತಲ್ಲಣ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…
Contract Carriage: ಬೈಕ್ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ
Sai Baba Idol: ವಾರಾಣಸಿಯ ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹ ತೆರವು
Arvind Kejriwal: ಇನ್ನು 2 ದಿನಗಳಲ್ಲಿ ದಿಲ್ಲಿ ಸಿಎಂ ಅಧಿಕೃತ ನಿವಾಸ ತೊರೆಯಲಿರುವ ಕೇಜ್ರಿ
Missile attack: ಇಸ್ರೇಲ್ ಮೇಲೆ ಇರಾನ್ ಶಬ್ದಾತೀತ ಬಾಂಬ್ ದಾಳಿ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sirawara ಬಂದ್ ಗೆ ಕರೆ: ಪಟ್ಟಣ ಸ್ತಬ್ಧ
ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್ ಕೇಸ್: ಮೂವರು ಸಿಸಿಬಿ ವಶಕ್ಕೆ
Bengaluru: ಬರ್ತ್ಡೇ ಪಾರ್ಟಿ ವೇಳೆ ಗಾಳಿಯಲ್ಲಿ 6 ಸುತ್ತು ಗುಂಡು; ಉದ್ಯಮಿ ಬಂಧನ
MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ
Bengaluru: ಮ್ಯಾನೇಜರ್ಗೆ ಇರಿಯಲು ಬಂದು ಕಂಡಕ್ಟರ್ಗೆ ಇರಿದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.