ಇಸ್ರೋ ಮಾನವ ರಹಿತ ಗಗನಯಾನಕ್ಕೆ ಮಹಿಳಾ ರೋಬೋಟ್ ಸಿದ್ಧ ; ಯಾರೀಕೆ ‘ವ್ಯೋಮ ಮಿತ್ರ’

2022ರ ಮಾನವ ಸಹಿತ ಗಗನ ಯಾನಕ್ಕೆ ಪೂರ್ವಭಾವಿಯಾಗಿ ನಡೆಯಲಿದೆ ಈ ಯಾನ

Team Udayavani, Jan 22, 2020, 7:19 PM IST

Vyommithra-ISRO-730

ಬೆಂಗಳೂರು: ಬಾಹ್ಯಾಕಾಶ ಕ್ಷೇತ್ರದಲ್ಲಿ ಹಲವಾರು ಮೈಲುಗಲ್ಲುಗಳನ್ನು ಸ್ಥಾಪಿಸುತ್ತಿರುವ ಭಾರತೀಯರ ಹೆಮ್ಮೆಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಇಸ್ರೋ ಇದೀಗ ಇನ್ನೊಂದು ಇತಿಹಾಸ ನಿರ್ಮಿಸುವ ತವಕದಲ್ಲಿದೆ. ಮಂಗಳನ ಅಂಗಳಕ್ಕೆ ನೌಕೆಯನ್ನು ಯಶಸ್ವಿಯಾಗಿ ಹಾರಿಬಿಟ್ಟಿರುವ ಮತ್ತು ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯೊಂದನ್ನು ಇಳಿಸುವ ಪ್ರಯತ್ನದಲ್ಲಿ ಭಾಗಶಃ ಯಶಸ್ವಿಯಾಗಿರುವ ಇಸ್ರೋ ಸಂಸ್ಥೆಯ ಮುಂದಿನ ಗುರಿ ಮಾನವ ರಹಿತ ಗಗನಯಾನ.

2022ರಲ್ಲಿ ಭಾರತದ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಮಾನವ ಸಹಿತ ಗಗನಯಾನ ಕೈಗೊಳ್ಳುವುದು ಇಸ್ರೋ ಗುರಿಯಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮಾನವ ರಹಿತ ಗಗನ ಯಾನದಲ್ಲಿ ಮಹಿಳಾ ರೋಬೋಟನ್ನು ಇಸ್ರೋ ಬಾಹ್ಯಾಕಾಶಕ್ಕೆ ಕಳುಹಿಸಲಿದೆ.

ತನ್ನ ಮಹತ್ವಾಕಾಂಕ್ಷೆಯ ಈ ಯೋಜನೆಯ ಪೂರ್ವತಯಾರಿಯಲ್ಲಿ ಇಸ್ರೋ ವಿಜ್ಞಾನಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು ಇದರ ಒಂದು ಭಾಗವಾಗಿ ಮಾನವ ರಹಿತ ಗಗನಯಾನ ನೌಕೆಯಲ್ಲಿ ಪ್ರಯಾಣಿಸಲಿರುವ ಮಾನವ ಪ್ರತಿರೂಪದ ರೋಬೋಟ್ ಚಿತ್ರವನ್ನು ಇಸ್ರೋ ಇಂದು ಬಿಡುಗಡೆಗೊಳಿಸಿದೆ. ಈ ರೀತಿ ಮಾನವ ರಹಿತ ಗಗನ ಯಾನ ಕೈಗೊಳ್ಳಲಿರುವ ಅದೃಷ್ಟ ಮಹಿಳಾ ರೋಬೋಟ್ ಗೆ ಸಿಕ್ಕಿರುವುದು ಇನ್ನೊಂದು ವಿಶೇಷ. ಮಾನವ ರೂಪವನ್ನು ಹೋಲುವ ಈ ರೋಬೋಟ್ ಗೆ ಇಸ್ರೋ ವಿಜ್ಞಾನಿಗಳು ಇಟ್ಟಿರುವ ಹೆಸರು ‘ವ್ಯೋಮ್ ಮಿತ್ರ’.

ಇಸ್ರೋದ ಮಾನವ ಸಹಿತ ಗಗನಯಾನ ಯೋಜನೆಗೂ ಮೊದಲು ಈ ಮಹಿಳಾ ರೋಬೋಟ್ ಪ್ರಾಯೋಗಿಕವಾಗಿ ಗಗನಕ್ಕೆ ಹಾರಲಿದೆ. ಮನುಷ್ಯರ ದೇಹದ ಹಲವಾರು ಕಾರ್ಯಗಳನ್ನು ಈ ರೋಬೋಟ್ ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದ್ದು ತನ್ನ ವ್ಯೋಮಯಾನದ ವೇಳೆಯಲ್ಲಿ ಅವುಗಳನ್ನೆಲ್ಲಾ ಇಸ್ರೋಗೆ ವರದಿ ಮಾಡುತ್ತಲೇ ಇರಲಿದೆ.


ತನ್ನ ಐತಿಹಾಸಿಕ ಮಾನವ ಸಹಿತ ಗಗನಯಾನಕ್ಕೆ ಈಗಾಗಲೇ ನಾಲ್ಕು ಜನರನ್ನು ಆಯ್ಕೆ ಮಾಡಿರುವುದಾಗಿ ಇಸ್ರೋ ಈ ಮೊದಲೇ ಘೋಷಣೆ ಮಾಡಿತ್ತು. ಮತ್ತು ಈ ನಾಲ್ಕೂ ಜನರು ಪುರುಷರಾಗಿದ್ದು ಅವರ ಗುರುತನ್ನು ಬಹಿರಂಗಪಡಿಸಲು ಇಸ್ರೋ ನಿರಾಕರಿಸಿದೆ.

ಈ ವ್ಯೋಮಯಾನಕ್ಕೆ ಆಯ್ಕೆಯಾಗಿರುವ ನಾಲ್ಕು ಜನರು ರಷ್ಯಾದಲ್ಲಿ 11 ತಿಂಗಳ ತರಬೇತಿಗೆ ಒಳಪಡಲಿದ್ದಾರೆ. ಬಳಿಕ ಅವರೆಲ್ಲರೂ ಭಾರತದಲ್ಲಿ ಗಗನ ನೌಕೆಯ ಚಾಲನೆ ಮತ್ತು ಅದರಲ್ಲಿರುವ ವ್ಯವಸ್ಥೆಗಳ ಕುರಿತಾದ ಮಾಹಿತಿಯನ್ನು ಪಡೆದುಕೊಳ್ಳುವ ತರಬೇತಿಯನ್ನು ಹೊಂದಲಿದ್ದಾರೆ.

ಭಾರತದ ತೂಕಭರಿತ ಉಡ್ಡಯನ ನೌಕೆ ‘ಬಾಹುಬಲಿ’ ಈ ಗಗನಯಾನಿಗಳನ್ನು ಹೊತ್ತು ಆಕಾಶಕ್ಕೆ ಜಿಗಿಯಲಿದೆ. ಮಾನವ ಸಹಿತ ಗಗನಯಾನ ಇಸ್ರೋದ ಮೊದಲ ಆದ್ಯತೆಯ ಪಟ್ಟಿಯಲ್ಲಿದೆ ಎಂದು ಈ ವರ್ಷದ ಪ್ರಾರಂಭದಲ್ಲಿ ಇಸ್ರೋ ಅಧ್ಯಕ್ಷರು ಹೇಳಿಕೆ ನೀಡಿದ್ದರು. ಈ ಯೋಜನೆಗಾಗಿ ಕೇಂದ್ರ ಸರಕಾರ 10 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿದೆ.

1984ರಲ್ಲಿ ಬಾಹ್ಯಾಕಾಶ ಯಾನ ಮಾಡಿದ ಪ್ರಪ್ರಥಮ ಭಾರತೀಯ ರಾಕೇಶ್ ಶರ್ಮಾ ಅವರಾಗಿದ್ದರೂ ಅಂದು ಅವರು ಯಾನ ಮಾಡಿದ್ದ ವ್ಯೋಮ ನೌಕೆ ಭಾರತದ್ದಾಗಿರಲಿಲ್ಲ. ಹಾಗಾಗಿ ಇದು ‘ಮೇಕ್ ಇನ್ ಇಂಡಿಯಾ’ ಯೋಜನೆಯಡಿಯಲ್ಲಿ ಇಸ್ರೋ ಖುದ್ದು ಕೈಗೆತ್ತಿಕೊಂಡಿರುವ ಯೋಜನೆಯಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.