ಇಸ್ರೋ ಸಾಧನೆಗೆ ಸಲಾಂ;16 ನಿಮಿಷದಲ್ಲಿ ಕಕ್ಷೆಗೆ ,48 ದಿನದ ಬಳಿಕ ಚಂದ್ರನ ಅಂಗಳ ಪ್ರವೇಶ


Team Udayavani, Jul 22, 2019, 3:36 PM IST

K-Sivan

ಆಂಧ್ರಪ್ರದೇಶ:ಚಂದ್ರಯಾನ 2 ರಾಕೆಟ್ ಅನ್ನು ಜಿಎಸ್ ಎಲ್ ವಿ ಎಂಕೆIII-ಎಂ1 ಯಶಸ್ವಿಯಾಗಿ ನಭಕ್ಕೆ ಹೊತ್ತೊಯ್ದಿದ್ದು, ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಇಸ್ರೋ ಅಧ್ಯಕ್ಷ ಕೆ.ಶಿವನ್ ತಿಳಿಸಿದ್ದಾರೆ.

ಚಂದ್ರನ ಮೇಲ್ಮೈಯನ್ನು ಅಧ್ಯಯನ ನಡೆಸುವ ಭಾರತದ ಐತಿಹಾಸಿಕ ಸಾಧನೆಗೆ ಮೊದಲ ಹಂತದ ಜಯ ಸಿಕ್ಕಂತಾಗಿದೆ. ವಿಜ್ಞಾನಿಗಳ ತಂಡ ತಮ್ಮ ವೈಯಕ್ತಿಕ ಸಮಯ ಬದಿಗಿಟ್ಟು ಚಂದ್ರಯಾನ 2 ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ವಿಜ್ಞಾನಿಗಳ ಶ್ರಮ ದೇಶ ಹೆಮ್ಮೆ ಪಡುವಂತಾದ್ದು ಎಂದು ಚಂದ್ರಯಾನ 2 ಉಡ್ಡಯನದ ಯಶಸ್ವಿ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಚಂದ್ರಯಾನ 2ರ ಮೊದಲ ಹಂತ ಯಶಸ್ವಿಯಾಗಿದ್ದು, ರಾಕೆಟ್ ಭೂಕಕ್ಷೆಯನ್ನು ಸೇರಿದ್ದು, 48 ದಿನಗಳ ಬಳಿಕ ರಾಕೆಟ್ ಚಂದ್ರನ ಅಂಗಳ ಪ್ರವೇಶಿಸಲಿದೆ ಎಂದು ವಿವರಿಸಿದರು.

ಜಿಎಸ್ ಎಲ್ ವಿ ಎಂಕೆIII-ಎಂ1 ರಾಕೆಟ್ ಮೂರು ಹಂತವನ್ನು ಒಳಗೊಂಡಿದ್ದು, ಒಟ್ಟು 43.3 ಮೀಟರ್ ನಷ್ಟು ಎತ್ತರವಾಗಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಮೋಡ ಮುಸುಕಿದ ಆಕಾಶದತ್ತ ಮುಖಮಾಡಿದ್ದ “ಬಾಹುಬಲಿ ರಾಕೆಟ್ 2.43ಕ್ಕೆ ನಭಕ್ಕೆ ಚಿಮ್ಮಿತ್ತು. 3850 ಕೆಜಿ ತೂಕದ ಚಂದ್ರಯಾನ 2 ರಾಕೆಟ್ 16 ನಿಮಿಷಗಳಲ್ಲಿ ವ್ಯೂಮನೌಕೆ ಭೂ ಕಕ್ಷೆ ಸೇರಿತ್ತು ಎಂದು ಶಿವನ್ ಮಾಹಿತಿ ನೀಡಿದರು.

ಆಧುನಿಕ ವೈಜ್ಞಾನಿಕ ಸಂಶೋಧನೆಗೆ ಸಹಕಾರಿಯಾಗಲಿರುವ ಚಂದ್ರಯಾನ 2 ಯಶಸ್ವಿ ಉಡ್ಡಯನದಿಂದ ಚಂದ್ರನ ಮೇಲ್ಮೈ ಅಧ್ಯಯನ ನಡೆಸಲಿದೆ. ಬಾಹುಬಲಿ ರಾಕೆಟ್ ಸೆಪ್ಟೆಂಬರ್ 6ರಂದು ಚಂದ್ರನ ಅಂಗಳ ತಲುಪಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.