IT; ಕಾಂಗ್ರೆಸ್‌ಗೆ 2,500 ಕೋ.ರೂ. ಆದಾಯ ತೆರಿಗೆ ಸಂಕಷ್ಟ?

ಗೊತ್ತಿದ್ದರೂ ಕಾಂಗ್ರೆಸ್‌ನಿಂದ ಪಾವತಿ ವಿಳಂಬ, ಅದಕ್ಕೇ ನೋಟಿಸ್‌: ಐಟಿ ಮೂಲಗಳು

Team Udayavani, Mar 31, 2024, 7:00 AM IST

congress

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಕಾವು ಏರುತ್ತಿರುವಂತೆಯೇ ಕಾಂಗ್ರೆಸ್‌ ಪಕ್ಷವು ಸವಾಲುಗಳ ಮೇಲೆ ಸವಾಲು ಎದುರಿಸುತ್ತಿದೆ. ಈಗಾಗಲೇ 1,823 ಕೋಟಿ ರೂ. ಆದಾಯ ತೆರಿಗೆ ಬಾಕಿ ನೋಟಿಸ್‌ ಪಡೆದಿರುವ ಕಾಂಗ್ರೆಸ್‌ಗೆ ಶುಕ್ರವಾರ ರಾತ್ರಿ ಇನ್ನೆರಡು ನೋಟಿಸ್‌ ಬಂದಿವೆ. ಈ ಹಿನ್ನೆಲೆಯಲ್ಲಿ ಒಟ್ಟು 2,500 ಕೋಟಿ ರೂ. ತೆರಿಗೆ ಪಾವತಿ ಮಾಡಬೇಕಾದ ಸಂದಿಗ್ಧಕ್ಕೆ ಒಳಗಾಗುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.
ಕಾಂಗ್ರೆಸ್‌ಗೆ ಐಟಿ ದಾಳಿ ನಡೆಯಲಿರುವುದು ಗೊತ್ತಿತ್ತು. ವಿಚಾರಣ ಪ್ರಕ್ರಿಯೆಗಳು ನಡೆಯುವ ಬಗ್ಗೆ ಮಾಹಿತಿಯಿತ್ತು. ಪ್ರತಿಕ್ರಿಯಿಸಲು ಬೇಕಾದಷ್ಟು ಸಮಯ ವನ್ನೂ ನೀಡಲಾಗಿತ್ತು. ದಿಲ್ಲಿ ಉಚ್ಚ ನ್ಯಾಯಾಲಯದಲ್ಲೂ ಈ ಬಗ್ಗೆ ತಿಳಿಸಲಾಗಿತ್ತು. ಅವಕ್ಕೆಲ್ಲ ಪ್ರತಿಕ್ರಿಯಿಸದೆ ವಿಳಂಬ ಮಾಡಿದ್ದರಿಂದಲೇ ಈ ನೋಟಿಸ್‌ ನೀಡಲಾಗಿದೆ ಎಂದು ಐಟಿ ಮೂಲಗಳು ಹೇಳಿವೆ.

2019ರಲ್ಲೇ ದಾಳಿ
2019ರ ಎಪ್ರಿಲ್‌ನಲ್ಲಿ ಐಟಿ ಇಲಾಖೆಯು ಅಂದಿನ ಮಧ್ಯಪ್ರದೇಶ ಸಿಎಂ ಕಮಲ್‌ನಾಥ್‌ ಅವರ ಸಹವರ್ತಿಗಳ ಮನೆಗಳ ಮೇಲೆ ದಾಳಿ ನಡೆಸಿತ್ತು. ಆಗ ಕಮಲ್‌ನಾಥ್‌ ಅವರ ನಿಕಟವರ್ತಿ ಎನ್ನಲಾಗಿದ್ದವರಿಗೆ ಸೇರಿದ ಕಂಪೆನಿ ಮತ್ತು ಮೇಘಾ ಎಂಜಿನಿಯರಿಂಗ್‌ನಿಂದ ಕಾಂಗ್ರೆಸ್‌ ನಗದು ಪಡೆದಿರುವುದು ರಶೀದಿಗಳಿಂದ ಗೊತ್ತಾಗಿತ್ತು. 2013-14ರಿಂದ 2019ರ ಎಪ್ರಿಲ್‌ ವರೆಗಿನ ಅವಧಿಯಲ್ಲಿ ಈ ರೀತಿ 626 ಕೋಟಿ ರೂ.ವರೆಗೆ ಹಣ ಕಾಂಗ್ರೆಸ್‌ಗೆ ಸಂದಾಯವಾಗಿತ್ತು. ಈ ಎಲ್ಲ ದಾಖಲೆಗಳಿದ್ದೇ ಐಟಿ ಇಲಾಖೆಯು ಸರಣಿ ನೋಟಿಸ್‌ ನೀಡಿದೆ.

ಪರಿ ಣಾ ಮವಾಗಿ ಕಾಂಗ್ರೆಸ್‌ ಬರೋ ಬ್ಬ ರಿ 2,500 ಕೋಟಿ ರೂ.ವರೆಗೆ ತೆರಿಗೆ ಪಾವತಿಸಬೇಕಾಗಬಹುದು ಎಂದು ಮೂಲಗಳು ತಿಳಿಸಿವೆ. ಕಮಲ್‌ನಾಥ್‌ ಅವರ ಅಧಿಕೃತ ಕಚೇರಿಯ ಮೂಲಕ ಎಐಸಿಸಿಗೆ 20 ಕೋಟಿ ರೂ. ಸಂದಾ ಯ ವಾದ ಸಾಕ್ಷ್ಯ ಕೂಡ ಐಟಿ ಇಲಾಖೆ ಬಳಿ ಇದೆ ಎನ್ನಲಾಗಿದೆ.

ಗುತ್ತಿಗೆಗೆ ಪ್ರತಿಯಾಗಿ ನಗದು
ಮೇಘಾ ಎಂಜಿನಿಯರಿಂಗ್‌ಗೆ ಗುತ್ತಿಗೆ ನೀಡಿದ್ದಕ್ಕೆ ಪ್ರತಿಯಾಗಿ ನಗದನ್ನು ನೀಡಲಾಗಿದೆ. ಕಮಲನಾಥ್‌ ಅವರ ಸಹವರ್ತಿಗಳಿಂದ ಬಂದ ನಗದು ಮಧ್ಯಪ್ರದೇಶದಲ್ಲಿ ನಡೆಸಲಾದ ದೊಡ್ಡ ಭ್ರಷ್ಟಾಚಾರದ ಹಣ. ಈ ಹಗರಣದಲ್ಲಿ ಹಿರಿಯ ಅಧಿಕಾರಿಗಳು, ಸಚಿವರು, ಉದ್ಯಮಿಗಳ ಸಹಿತ ಹಲವರಿಂದ ಲಂಚ ಪಡೆಯಲಾಗಿದೆ. ದಾಳಿ ವೇಳೆ ದೊರೆತ ದಾಖಲೆಗಳು, ವಾಟ್ಸ್‌ಆ್ಯಪ್‌ ಸಂದೇಶಗಳು ಮತ್ತು ದಾಖಲಿಸಿಕೊಳ್ಳಲಾದ ಹೇಳಿಕೆಗಳು ನಗದು ಪಡೆದಿದ್ದನ್ನು ಸಾಬೀತುಪಡಿಸುತ್ತವೆ ಎಂದು ಮೂಲಗಳು ತಿಳಿಸಿವೆ. ಆದಾಯ ತೆರಿಗೆ ಇಲಾಖೆ ಕಾಯ್ದೆಯ 13ಎ ಸೆಕ್ಷನ್‌ ಪ್ರಕಾರ ರಾಜಕೀಯ ಪಕ್ಷವು 2 ಸಾವಿರ ರೂ.ಗಳಿಗಿಂತ ಹೆಚ್ಚು ಮೊತ್ತದ ದೇಣಿಗೆಯನ್ನು ನಗದು ರೂಪದಲ್ಲಿ ಪಡೆಯುವುದರ ಸಹಿತ ಅನೇಕ ಷರತ್ತುಗಳನ್ನು ಪಾಲಿ ಸದೆ ಇದ್ದರೆ ತೆರಿಗೆ ವಿನಾಯಿತಿ ದೊರೆಯುವುದಿಲ್ಲ. ಆಗ ಪಕ್ಷವು ಪಡೆದು ಅಷ್ಟೂ ಹಣಕ್ಕೆ ತೆರಿಗೆ ಪಾವತಿಸಬೇಕಾಗುತ್ತದೆ. ಕಾಂಗ್ರೆಸ್‌ ವಿಷಯದಲ್ಲೂ ಈ ಅಂಶವೇ ಉರುಳಾಗಿದೆ.

ಎಲ್ಲ ಪಕ್ಷಗಳಿಗೂ ಎಚ್ಚರಿಕೆ: ಚಿದಂಬರಂ
ಕಾಂಗ್ರೆಸ್‌ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆಯು 130 ಕೋಟಿ ರೂ. ದಂಡ ವಿಧಿಸಿರುವುದು ಎಲ್ಲ ರಾಜಕೀಯ ಪಕ್ಷಗಳು ಮತ್ತು ಜನರಿಗೆ ನೀಡಿರುವ ಎಚ್ಚರಿಕೆಯ ಘಂಟೆಯಾಗಿದೆ ಎಂದು ಕಾಂಗ್ರೆಸ್‌ ನಾಯಕ ಪಿ. ಚಿದಂಬರಂ ಹೇಳಿದ್ದಾರೆ. ಬಿಜೆಪಿಯ ಅಜೆಂಡಾ ಒಂದು ರಾಷ್ಟ್ರ ಒಂದು ಚುನಾವಣೆ ಎಂದರೆ ಬೇರೆ ಏನೂ ಅಲ್ಲ; ಒಂದು ರಾಷ್ಟ್ರ, ಒಂದು ಪಕ್ಷವೇ ಆಗಿದೆ. ಇದು ಎಲ್ಲರಿಗೂ ಎಚ್ಚರಿಕೆಯ ಘಂಟೆ ಎಂದು ಅವರು ತಮಿಳುನಾಡಿನ ಪುದುಕೊಟ್ಟೈಯಲ್ಲಿ ತಿಳಿಸಿದ್ದಾರೆ.

ನೋಟಿಸ್‌ಗಳ ಹಿಂದೇನಿದೆ?
2019ರಲ್ಲಿ ಅಂದಿನ ಮಧ್ಯಪ್ರದೇಶ ಸಿಎಂ ಕಮಲನಾಥ್‌ ಸಹವರ್ತಿಗಳ ಮೇಲೆ ಐಟಿ ದಾಳಿ
ಮೇಘಾ ಎಂಜಿನಿಯರಿಂಗ್‌ ಮತ್ತಿತರ ಕಂಪೆನಿಗಳಿಂದ “ಕೈ’ಗೆ 626 ಕೋಟಿ ರೂ. ದೇಣಿಗೆ
ಕಮಲ್‌ನಾಥ್‌ ಅಧಿಕೃತ ಕಚೇರಿ ಯಿಂದಲೇ ಎಐಸಿಸಿಗೆ 20 ಕೋಟಿ ರೂ. ಸಂದಾಯ. ಈ ಬಗ್ಗೆ ಐಟಿ ಬಳಿಯಿದೆ ರಶೀದಿ, ಇತರ ಸಾಕ್ಷ್ಯ?
ಎಲ್ಲ ದಾಖಲೆಗಳನ್ನಿಟ್ಟು ಕೊಂಡೇ ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಸರಣಿ ನೋಟಿಸ್‌

1,823 ಕೋಟಿ ರೂ. ಪಾವತಿಗೆ ನೋಟಿಸ್‌ ಬಂದ ಬೆನ್ನಲ್ಲೇ ಐಟಿ ಇಲಾಖೆ ಮತ್ತೆರಡು ನೋಟಿಸ್‌ ನೀಡಿದೆ. ಕಾಂಗ್ರೆಸ್‌ ತೆರಿಗೆ ಭಯೋತ್ಪಾದನೆಗೆ ಗುರಿಯಾಗುತ್ತಿದೆ.
– ಜೈರಾಮ್‌ ರಮೇಶ್‌, ಕಾಂಗ್ರೆಸ್‌ ನಾಯಕ

ಟಾಪ್ ನ್ಯೂಸ್

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್‌ ಬಳಕೆಗೂ ನಿಷೇಧ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.