ನೇತಾರರ ಆಸ್ತಿ  ಮೇಲೂ ಐಟಿ ಕಣ್ಣು


Team Udayavani, Sep 12, 2017, 6:55 AM IST

tax.jpg

ಹೊಸದಿಲ್ಲಿ: ಜನಪ್ರತಿನಿಧಿಗಳೇ ಹುಷಾರಾಗಿರಿ. ಐಟಿ ಅಧಿಕಾರಿಗಳು ಯಾವುದೇ ಕ್ಷಣದಲ್ಲಿ ನಿಮ್ಮ ಮನೆ ಬಾಗಿಲು ತಟ್ಟಬಹುದು!

ಒಂದು ಚುನಾವಣೆಯಿಂದ ಮತ್ತೂಂದು ಚುನಾವಣೆಗೆ ಜನಪ್ರತಿನಿಧಿಗಳ ಆಸ್ತಿಯಲ್ಲಿ  ಬೆರಗು ಮೂಡಿಸುವಷ್ಟು ಹೆಚ್ಚಳ ಕಂಡುಬರುತ್ತಿರುವ ಬಗ್ಗೆ ಕೇಂದ್ರ ಸರಕಾರವನ್ನು ಸುಪ್ರೀಂಕೋರ್ಟ್‌ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಇಂಥ ಕುಬೇರರ ಮೇಲೆ ಐಟಿ ಇಲಾಖೆ ಕಣ್ಣು ನೆಟ್ಟಿದೆ. ಪರಿಣಾಮ, ಮ್ಯಾಜಿಕ್‌ ಮಾಡಿದಂತೆ ಆಸ್ತಿಪಾಸ್ತಿಯನ್ನು ಐದೈದು ಪಟ್ಟು ಹೆಚ್ಚಳ ಮಾಡಿಕೊಂಡಿರುವ ನೇತಾರರಿಗೆ ಈಗ ಬಿಸಿ ಮುಟ್ಟತೊಡಗಿದೆ.

ವಿಧಾನಸಭೆ, ಲೋಕಸಭೆ ಚುನಾವಣೆಗಳ ಬಳಿಕ ಯಾರ್ಯಾರ ಆಸ್ತಿಯಲ್ಲಿ ದಿಢೀರ್‌ ಏರಿಕೆ ಕಂಡು ಬಂದಿದೆಯೋ ಅಂಥವರ ವ್ಯವಹಾರಗಳನ್ನು ಪರಿಶೀಲಿಸುವುದಾಗಿ ಕೇಂದ್ರ ಸರಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿದವಿತ್‌ನಲ್ಲಿ ತಿಳಿಸಿದೆ. ಕಳೆದ ವಾರವಷ್ಟೇ ಈ ವಿಚಾರ ವಾಗಿ ಸರಕಾರವನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತಲ್ಲದೆ, ಸೆ.12ರೊಳಗೆ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿತ್ತು.

“7 ಸಂಸದರು ಮತ್ತು 98 ಶಾಸಕರ ಆಸ್ತಿಪಾಸ್ತಿ ಹೆಚ್ಚಳದ ಕುರಿತು ಪರಿಶೀಲನೆ ನಡೆಸುತ್ತೇವೆ. ಮೇಲ್ನೋಟಕ್ಕೆ ಈ ಜನಪ್ರತಿನಿಧಿಗಳ ವಿರುದ್ಧ ಆದಾಯ ತೆರಿಗೆ ಇಲಾಖೆಗೂ ಕೆಲವೊಂದು ಸಾಕ್ಷ್ಯಗಳು ದೊರೆತಿವೆ. ಇನ್ನೂ 42 ಮಂದಿ ಶಾಸಕರು, ಲೋಕಸಭೆಯ 9, ರಾಜ್ಯಸಭೆಯ 11 ಸಂಸದರ ಆಸ್ತಿಯ ಕುರಿತು ಪ್ರಾಥಮಿಕ ತನಿಖೆ ನಡೆಸಲಾಗಿದೆ. ಈ ಸಚಿವರ ಹೆಸರುಗಳನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸು ತ್ತೇವೆ’ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ತಿಳಿಸಿದೆ.

ಸುಪ್ರೀಂ ಕೋರ್ಟ್‌ ಏನು ಹೇಳಿತ್ತು?: ಒಂದು ಕಡೆ ನೀವು ಚುನಾವಣಾ ಸುಧಾರಣೆ ಬಗ್ಗೆ ಮಾತ ನಾಡುತ್ತೀರಿ. ಆದರೆ ಒಂದು ಚುನಾವಣೆಯಿಂದ ಮತ್ತೂಂದು ಚುನಾವಣೆ ಬರುವುದರ ನಡುವೆ ದೇಶದ ಅನೇಕ ಶಾಸಕರು ಹಾಗೂ ಸಂಸದರ ಆಸ್ತಿಗಳು ದುಪ್ಪಟ್ಟಾಗುವುದು ಹೇಗೆ? ಅದರ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ನ್ಯಾ| ಚಲಮೇಶ್ವರ ನೇತೃತ್ವದ ಪೀಠ ಕೇಂದ್ರ ಸರಕಾರವನ್ನು ಪ್ರಶ್ನಿಸಿತ್ತು. ಬರೀ ಮಾತುಗಳನ್ನು ಆಡುವ ಬದಲು, ಅಗತ್ಯ ಮಾಹಿತಿಗಳನ್ನು ಒಪ್ಪಿಸಿ ಎಂದು ನ್ಯಾಯಪೀಠ ನಿರ್ದೇಶಿಸಿತ್ತು.

ಒಂದೇ ಅವಧಿಯಲ್ಲಿ ಆಸ್ತಿ ಶೇ.40,000ದಷ್ಟು ಹೆಚ್ಚಳ
5 ವರ್ಷಗಳಲ್ಲಿ  ಕೆಲವು ಜನಪ್ರತಿನಿಧಿ ಗಳ ಆಸ್ತಿಯ ಪ್ರಮಾಣವು ಶೇ.40 ಸಾವಿರ ದಷ್ಟು ಹೆಚ್ಚಳವಾಗಿದೆ. ಆ ಪೈಕಿ ಕೇರಳ ಕಾಂಗ್ರೆಸ್‌ ಶಾಸಕ ವಿಷ್ಣುನಾಥ್‌ ಪ್ರಮುಖರು. 2008ರಲ್ಲಿ ಇವರಲ್ಲಿದ್ದದ್ದು ಕೇವಲ 5,632 ರೂ. ಮೊತ್ತದ ಆಸ್ತಿ. ಆದರೆ, 2013ರಲ್ಲಿ ಇದು 25.02 ಲಕ್ಷ ರೂ.ಗೆ ತಲುಪಿದೆ. ಅಂದರೆ, ಇವರ ಆಸ್ತಿಯ ಪ್ರಮಾಣದಲ್ಲಿ ಶೇ.44,325ರಷ್ಟು ಹೆಚ್ಚಳವಾಗಿದೆ ಎಂದು ಕಳೆದ ಫೆಬ್ರವರಿಯಲ್ಲಿ ಡಿಎನ್‌ಎ ವರದಿ ಮಾಡಿತ್ತು. ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದ್ದ ಅಫಿದವಿತ್‌ಗಳು ಹಾಗೂ ಮಾಹಿತಿ ಹಕ್ಕು ಕಾಯ್ದೆಯನ್ವಯ ಪಡೆದ ಮಾಹಿತಿಗಳನ್ನು ಆಧರಿಸಿ ಈ ವರದಿಯನ್ನು ನೀಡಲಾಗಿತ್ತು. ಜತೆಗೆ, 2009-14ರ ಅವಧಿ ಯಲ್ಲಿ ನಾಲ್ವರು ಲೋಕಸಭೆ ಸಂಸದರ ಆಸ್ತಿ ಶೇ. 1,200ರಷ್ಟು  ಏರಿಕೆಯಾಗಿದೆ. ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಎಸ್ಪಿ ನಾಯಕ ಮುಲಾಯಂ ಸಿಂಗ್‌ ಯಾದವ್‌, ಸಚಿವ ಅರ್ಜುನ್‌ ರಾಂ ಮೇಘವಾಲ್‌ ಅವರ ಆಸ್ತಿ ಶೇ.500ರಷ್ಟು  ಹೆಚ್ಚಳವಾಗಿದೆ ಎಂದೂ ವರದಿ ಹೇಳಿತ್ತು.

ಟಾಪ್‌ 5 ಸಂಸದರು 
– ಕಮಲೇಶ್‌ ಪಾಸ್ವಾನ್‌ (ಬಿಜೆಪಿ) – ಶೇ.5,649
– ಇ.ಟಿ.ಮೊಹಮ್ಮದ್‌ ಬಶೀರ್‌(ಮುಸ್ಲಿಂ ಲೀಗ್‌) – ಶೇ.2,081
– ಸಿಸಿರ್‌ ಕುಮಾರ್‌ ಅಧಿಕಾರಿ (ಟಿಎಂಸಿ) – ಶೇ.1,700
– ಡಾ|  ಪಿ.ವೇಣುಗೋಪಾಲ್‌(ಎಐಎಡಿಎಂಕೆ) – ಶೇ.1,281
– ಡಾ| ರಾಮಶಂಕರ್‌ ಕಥೇರಿಯಾ (ಬಿಜೆಪಿ) – ಶೇ.869

(ಡಿಎನ್‌ಎ ವರದಿ)

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.