![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Dec 25, 2023, 10:40 AM IST
ಲಕ್ನೋ: ಮಸೀದಿಯ ಗೋಡೆ ಮೇಲೆ ʼಜೈ ಶ್ರೀರಾಮ್ʼ ಘೋಷಣೆಯನ್ನು ಬರೆದು, ಹಾನಿ ಮಾಡಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶನಿವಾರ (ಡಿ.23 ರಂದು) ಉತ್ತರ ಪ್ರದೇಶದ ಅಲಿಗಢ್ನ ದೆಹಲಿ ಗೇಟ್ ಮಸೀದಿಯೊಂದರ ʼಜೈ ಶ್ರೀರಾಮ್ʼ ಎನ್ನುವ ಬರಹವನ್ನು ಬರೆಯಲಾಗಿದೆ. ಆ ಬಳಿಕ ಗೋಡೆಯನ್ನು ಧ್ವಂಸ ಮಾಡಲಾಗಿದೆ. ಈ ಘಟನೆಯ ವಿಡಿಯೋ ಕ್ಯಾಮಾರದಲ್ಲಿ ಸೆರೆಯಾಗಿದೆ.
ಘಟನೆ ನಂತರ ಸಮಾಜವಾದಿ ಪಕ್ಷದ (ಎಸ್ಪಿ) ನಿಯೋಗವು ಪೊಲೀಸರನ್ನು ಭೇಟಿ ಮಾಡಿ, ಈ ಬಗ್ಗೆ ಔಪಚಾರಿಕ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಮೃಗಾಂಕ್ ಶೇಖರ್ ಪಾಠಕ್ ತಿಳಿಸಿದ್ದಾರೆ.
ಇದನ್ನೂ ಓದಿ: ತನ್ನ ಜಮೀನಿನಿಂದ ಹೂಕೋಸು ಕಿತ್ತು ತಂದಿದ್ದಕ್ಕೆ ತಾಯಿಯನ್ನೇ ಕಂಬಕ್ಕೆ ಕಟ್ಟಿ ಥಳಿಸಿದ ಮಗ
ಕೆಲವು ಸಮಾಜ ವಿರೋಧಿಗಳು ಇಂತಹ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ನಗರದ ವಾತಾವರಣವನ್ನು ಹಾಳು ಮಾಡಿದ್ದಾರೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ನಿಯೋಗದಲ್ಲಿದ್ದ ಸಮಾಜವಾದಿ ಪಕ್ಷದ ಸಚಿವ ಮನೋಜ್ ಯಾದವ್ ಎಚ್ಚರಿಸಿದ್ದಾರೆ.
ಶೀಘ್ರದಲ್ಲಿ ಈ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಪೊಲೀಸರು ಹೇಳಿದ್ದಾರೆ.
अलीगढ़ में दंगा भड़काने की कोशिश, एक मस्जिद पर शर्पसंदों द्वारा जय श्रीराम लिखा गया, पुलिस ने मौके पर पहुंचकर धार्मिक नारे को रंग पुतवा कर मीटवाया, आपसी समझौते के बाद शांति बहाल। pic.twitter.com/VNKDLHjel2
— Millat Times (@Millat_Times) December 24, 2023
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.