Jammu Kashmir; ಇಂಡಿಯಾ ಗೆದ್ದಾಯ್ತು, ಕಾಶ್ಮೀರದಲ್ಲಿ ಮುಂದೇನು?
ಪಾಕಿಸ್ತಾನ ಜತೆ ಮಾತುಕತೆ ಬೇಡಿಕೆಗೆ ಬಲ ಬರಬಹುದು | ಕಾಶ್ಮೀರಕ್ಕೆ ಹೆಚ್ಚಿನ ಅಧಿಕಾರ, ಅನುದಾನಕ್ಕೆ ಒತ್ತಾಯ?
Team Udayavani, Oct 9, 2024, 6:24 AM IST
ಹೊಸದಿಲ್ಲಿ: ಜಮ್ಮು- ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿಕೂಟವು ಎಲ್ಲ ನಿರೀಕ್ಷೆ ಮೀರಿ ಗೆಲುವು ಸಾಧಿಸಿದ್ದು, 10 ವರ್ಷಗಳ ಬಳಿಕ ಸರ್ಕಾರ ರಚಿಸಲಿದೆ. ಇತ್ತ, ಸಾಕಷ್ಟು ಗೆಲುವಿನ ನಿರೀಕ್ಷೆಯನ್ನು ಹೊಂದಿದ್ದ ಬಿಜೆಪಿ, ಜಮ್ಮು ಪ್ರದೇಶದಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆಯಾದರೂ ಸರ್ಕಾರ ರಚಿಸಲು ಬೇಕಾಗುವಷ್ಟು(46) ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾಗಿದೆ. ಈಗ ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಏರಿರುವುದರಿಂದ ಕಾಶ್ಮೀರದಲ್ಲಿ ಮೇಲಾಗುವ ಪರಿಣಾಮಗಳ ಬಗ್ಗೆ ಚರ್ಚೆಯಾಗುತ್ತಿದೆ.
1 ರಾಜ್ಯ ಸ್ಥಾನಮಾನ ಬೇಡಿಕೆ: ಎನ್ಸಿ-ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದರಿಂದಕಾಶ್ಮೀರಕ್ಕೆ ರಾಜ್ಯಸ್ಥಾನಮಾನ ಬೇಡಿಕೆಗೆ ಹೆಚ್ಚು ಬಲಬರಲಿದೆ. ಕಾಂಗ್ರೆಸ್ ಮೈತ್ರಿ ಕೂಟ ಚುನಾವಣೆಯಲ್ಲಿ ಈ ಭರವಸೆಯನ್ನೂ ನೀಡಿತ್ತು.
2 ಪಾಕಿಸ್ತಾನ ಜತೆ ಮಾತುಕತೆ: ನ್ಯಾಷನಲ್ ಕಾನ್ಫರೆನ್ಸ್ ಮೊದಲಿ ನಿಂದಲೂ ಪಾಕಿಸ್ತಾನ ಜತೆ ಮಾತು ಕತೆ ನಡೆಸಬೇಕು ಎಂದು ಒತ್ತಾಯಿ ಸುತ್ತಿದೆ. ಈಗ ಈ ಬೇಡಿಕೆಗೆ ಇನ್ನಷ್ಟು ಬಲ ಬರಬಹುದು. ಕೇಂದ್ರದ ಮೇಲೆ ಒತ್ತಡ ಹೇರಬಹುದು.
3 ಪ್ರತ್ಯೇಕತಾವಾದಿಗಳು: ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಪ್ರತ್ಯೇಕತಾವಾದಿಗಳು ಚಿಗುರಿಕೊಳ್ಳಲಾರರು. ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಿ ರುವು ದರಿಂದ ಗಂಭೀರ ಕಾನೂನು ಸುವ್ಯ ವಸ್ಥೆ ಮೇಲೆ ಕೇಂದ್ರ ಪ್ರಭಾವ ಸಹಜ.
4 ಪ್ರವಾಸೋದ್ಯಮಕ್ಕೆ ಬಲ: ಕಾಶ್ಮೀರದಲ್ಲಿ ಪ್ರವಾ ಸೋದ್ಯ ಮಕ್ಕೆ ಸಾಕಷ್ಟು ಅವಕಾಶಗಳಿವೆ. ಕೇಂದ್ರ ಸರ್ಕಾರವು ಸಾಕಷ್ಟು ಹೂಡಿಕೆ ಮಾಡುತ್ತಿರುವುದರಿಂದ ಈ ನಿಟ್ಟಿನಲ್ಲಿ ಇನ್ನಷ್ಟು ಚಟುವಟಿ ಕೆಗಳು ಹೆಚ್ಚಾಗಬಹುದು.
5 ಉಗ್ರ ನಿಗ್ರಹ: ಭಯೋತ್ಪಾದನೆ ನಿಗ್ರಹವೂ ಎಂದಿನಂತೆ ಮುಂದುವರಿಯಲಿದೆ. ಈ ವಿಷ ಯದಲ್ಲಿ ಯಾವುದೇ ಪಕ್ಷ ರಾಜಿ ಮಾಡಿಕೊಳ್ಳಲು ತಯಾರಿಲ್ಲ. ಈ ವಿಷಯದಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎನ್ನುತ್ತಾರೆ ತಜ್ಞರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Power…; ವಿನೇಶ್ ಫೋಗಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!
Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ
National Film Award: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ
Haryana-JK Election: ಎರಡೂ ರಾಜ್ಯಗಳಲ್ಲಿ ಎಕ್ಸಿಟ್ ಪೋಲ್ ಫೇಲ್!
Haryana: ಕಾಂಗ್ರೆಸ್ ಒಳಬೇಗುದಿ ಬಿಸಿಗೆ ಅರಳಿದ ಕಮಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Power…; ವಿನೇಶ್ ಫೋಗಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!
Navratri special: ಹೆಣ್ಣು ಅಬಲೆಯೇ? ಹಾಗೆಂದು ನಿರ್ಧರಿಸಿದ್ಯಾರು? ಹೆಣ್ಣಾ ಅಥವಾ..
Famous Godesess Temple: ಹಿಂದೂ ನವರತ್ನ ದೇವಾಲಯ ದಕ್ಷಿಣೇಶ್ವರ ಕಾಳಿ ಮಂದಿರ
Cast Census: ಕಾಯ್ದೆ ಪ್ರಕಾರ ಸರಕಾರ ಜಾತಿಗಣತಿ ವರದಿ ಒಪ್ಪಬೇಕು
Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.