ಭಾರಿ ಚಳಿಯ ನಡುವೆಯೂ ಜಮ್ಮುವಿನಲ್ಲಿ ಭಾರತ್ ಜೋಡೋ ಯಾತ್ರೆ ; ಸಂಜಯ್ ರಾವತ್ ಭಾಗಿ
ದೇಶದ ವಾತಾವರಣವು ವೇಗವಾಗಿ ಬದಲಾಗುತ್ತಿದೆ ; ಶಿವಸೇನೆ (ಯುಬಿಟಿ) ನಾಯಕ
Team Udayavani, Jan 20, 2023, 2:19 PM IST
ಕಥುವಾ: ಮೈ ಕೊರೆವ ಚಳಿ, ಹಿಮ ಮಳೆಯನ್ನು ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆಯ ಹತ್ಲಿ ಮೋರ್ನಿಂದ ಭಾರತ್ ಜೋಡೋ ಯಾತ್ರೆಯನ್ನು ಪ್ರಾರಂಭಿಸಿದರು, ಶಿವಸೇನಾ (ಯುಬಿಟಿ) ಸಂಜಯ್ ರಾವತ್ ಸೇರಿದಂತೆ ಹಲವಾರು ಪ್ರಮುಖ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಂಡರು.
ಗಾಂಧಿ ಬಿಳಿ ಟೀ ಶರ್ಟ್ ಮೇಲೆ ಕಪ್ಪು ರೇನ್ ಕೋಟ್ ಧರಿಸಿದ್ದರು. ಯಾತ್ರೆಯು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಬೇಕಿತ್ತು ಆದರೆ ಹವಾಮಾನ ವೈಪರೀತ್ಯದಿಂದಾಗಿ ಒಂದು ಗಂಟೆ ಹದಿನೈದು ನಿಮಿಷ ತಡವಾಯಿತು. ಸೆ.7ರಂದು ಕನ್ಯಾಕುಮಾರಿಯಿಂದ ಆರಂಭವಾದ ಪಾದಯಾತ್ರೆ ಗುರುವಾರ ಸಂಜೆ ಪಂಜಾಬ್ ನಿಂದ ಜಮ್ಮು-ಕಾಶ್ಮೀರ ಪ್ರವೇಶಿಸಿದ್ದು, ಜನವರಿ 30ರಂದು ಶ್ರೀನಗರದಲ್ಲಿ ಅಂತ್ಯಗೊಳ್ಳಲಿದೆ.
ಪಕ್ಷದ ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷ ವಿಕಾರ್ ರಸೂಲ್ ವಾನಿ ಮತ್ತು ಅವರ ಹಿಂದಿನ ಜಿ.ಎ.ಮಿರ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾರತ್ ಜೋಡೋ ಯಾತ್ರೆಯ ಅಂತಿಮ ಹಂತದಲ್ಲಿ ಗಾಂಧಿಯವರ ಜೊತೆಗಿದ್ದರು.
ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಮಾತನಾಡಿ ”ನಾನು ನನ್ನ ಪಕ್ಷದ ಪರವಾಗಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ. ದೇಶದ ವಾತಾವರಣವು ವೇಗವಾಗಿ ಬದಲಾಗುತ್ತಿದೆ ಮತ್ತು ನಾನು ಗಾಂಧಿಯನ್ನು ನೈಜ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ನಾಯಕನಾಗಿ ನೋಡುತ್ತಿದ್ದೇನೆ. “ಜನರು ಈ ಯಾತ್ರೆಯೊಂದಿಗೆ ಸಂಪರ್ಕ ಸಾಧಿಸುತ್ತಿರುವ ರೀತಿ ಹೃದಯಸ್ಪರ್ಶಿಯಾಗಿದೆ. ಅವರು ನಾಯಕ ಮತ್ತು ಅದಕ್ಕಾಗಿಯೇ ಅವರು ರಸ್ತೆಯಲ್ಲಿದ್ದಾರೆ. ಯಾರು ಅವರ ನಾಯಕ ಎಂದುಜನರು ಆಯ್ಕೆ ಮಾಡುತ್ತಾರೆ ಎಂದರು.
ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದ ಧ್ವಜ ಹಸ್ತಾಂತರ ಸಮಾರಂಭದ ನಂತರ ಮೆರವಣಿಗೆ ಗುರುವಾರ ಲಖನ್ಪುರ ಮೂಲಕ ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸಿತು ಮತ್ತು ರಾತ್ರಿ ಅಲ್ಲಿಯೇ ಸ್ಥಗಿತಗೊಂಡಿತು.
ಶುಕ್ರವಾರ ಮುಂಜಾನೆಯಿಂದ ಜಮ್ಮು ಮತ್ತು ಕಾಶ್ಮೀರದ ವ್ಯಾಪಕ ಭಾಗಗಳಲ್ಲಿ ಹಿಮ ಮಳೆ ಸುರಿಯುತ್ತಿದ್ದರೂ ಸಹ ಗಾಂಧಿ ಅವರು ತಮ್ಮ ಬೆಂಬಲಿಗರೊಂದಿಗೆ ನಡೆಯಲು ಪ್ರಾರಂಭಿಸಿದಾಗ ಪೊಲೀಸರು ಮತ್ತು ಸಿಆರ್ಪಿಎಫ್ ಸಿಬಂದಿಗಳನ್ನು ಒಳಗೊಂಡ ಬಿಗಿ ಭದ್ರತಾ ರಿಂಗ್ ಗಾಂಧಿ ಅವರ ಸುತ್ತಲೂ ನಿರ್ಮಾಣಮಾಡಲಾಯಿತು. ರಾತ್ರಿ ಕಥುವಾ ಜಿಲ್ಲೆಯ ಚಡ್ವಾಲ್ನಲ್ಲಿ 25 ಕಿ.ಮೀ ಕ್ರಮಿಸುವ ಮೊದಲು ಯಾತ್ರೆ ಪ್ರಾರಂಭವಾಗುವ ಎರಡು ಗಂಟೆಗಳ ಮೊದಲು ಅನೇಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ತ್ರಿವರ್ಣ ಧ್ವಜಗಳನ್ನು ಹಿಡಿದುಕೊಂಡರು. ಶನಿವಾರ ಯಾವುದೇ ಮೆರವಣಿಗೆ ಇರುವುದಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.
ಯಾತ್ರೆ ಸಾಗಲಿರುವ ಜಮ್ಮು-ಪಠಾಣ್ಕೋಟ್ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ವಿವಿಧ ಸ್ಥಳಗಳಲ್ಲಿ ಯುವಕರು ಭಿತ್ತಿಪತ್ರಗಳು ಮತ್ತು ಹೂಮಾಲೆಗಳನ್ನು ಹಿಡಿದು ಕಾಯುತ್ತಿರುವುದು ಕಂಡುಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.