Jammu-Kashmir polls: ವಿಧಾನಸಭೆ ಚುನಾವಣೆಗೆ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
Team Udayavani, Aug 27, 2024, 5:16 PM IST
ಹೊಸದಿಲ್ಲಿ: ಜಮ್ಮು ಕಾಶ್ಮೀರ ಚುನಾವಣೆಗೆ (Jammu-Kashmir polls) ಸೋಮವಾರ ಅಭ್ಯರ್ಥಿಗಳ ಪಟ್ಟಿಯನ್ನೊಮ್ಮೆ ಬಿಡುಗಡೆ ಮಾಡಿ ಮತ್ತೆ ಹಿಂಪಡೆದು ತುಸು ಸಮಯದ ಬಳಿಕ ಮತ್ತೊಂದು ಪಟ್ಟಿ ಬಿಡುಗಡೆ ಮಾಡಿದ್ದ ಭಾರತೀಯ ಜನತಾ ಪಕ್ಷವು (BJP) ಮಂಗಳವಾರ (ಆ.27) ಎರಡನೇ ಪಟ್ಟಿ ರಿಲೀಸ್ ಮಾಡಿದೆ.
ಸೋಮವಾರ ಪರಿಷ್ಕೃತ ಪಟ್ಟಿಯಲ್ಲಿ 15 ಮಂದಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಇದೀಗ ಮತ್ತೆ 29 ಮಂದಿ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗಿದೆ. ಹೀಗಾಗಿ 90 ವಿಧಾನಸಭೆ ಕ್ಷೇತ್ರಗಳ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ 44 ಹೆಸರು ಅಂತಿಮಗೊಳಿಸಿದೆ.
ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯು ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿದೆ. ಮತಗಳ ಎಣಿಕೆಯನ್ನು ಅಕ್ಟೋಬರ್ 4 ರಂದು ನಿಗದಿಪಡಿಸಲಾಗಿದೆ.
ಎರಡನೇ ಹಂತದ ಮತದಾನ ನಡೆಯುವ 10 ಕ್ಷೇತ್ರಗಳ ಅಭ್ಯರ್ಥಿಗಳು ಮತ್ತು ಮೂರನೇ ಹಂತದಲ್ಲಿ ಮತದಾನ ನಡೆಯುವ 19 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಮಾಡಲಾಗಿದೆ.
भाजपा की केन्द्रीय चुनाव समिति ने आगामी जम्मू व कश्मीर विधानसभा चुनाव 2024 के लिए अपनी तीसरी सूची में निम्नलिखित नामों पर स्वीकृति प्रदान की है। pic.twitter.com/YcZT9DJBmG
— BJP (@BJP4India) August 27, 2024
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವಿನ ಚುನಾವಣಾ ಪೂರ್ವ ಮೈತ್ರಿಯು ತಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಜತೆಗಿನ ಮೈತ್ರಿಯ ಬಳಿಕ ಕಾಂಗ್ರೆಸ್ ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸೋಮವಾರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು 18 ಮಂದಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ
Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.