ಫೆ.26ರಂದು ಹರಿಯಾಣದಲ್ಲಿ ಜಾಟರಿಂದ ಕಪ್ಪು ದಿನ ಆಚರಣೆ


Team Udayavani, Feb 25, 2017, 7:24 PM IST

Jat-Agitation700.jpg

ಚಂಡೀಗಢ : ಹರಿಯಾಣದಲ್ಲಿ ಕಳೆದ 28 ದಿನಗಳಿಂದ ಮೀಸಲಾತಿಯನ್ನು ಆಗ್ರಹಿಸಿ ಆಂದೋಲನ ನಡೆಸುತ್ತಿರುವ ಜಾಟರು ನಾಳೆ ಫೆ.26ರ ಭಾನುವಾರ ರಾಜ್ಯದಲ್ಲಿ ಕಪ್ಪು ದಿನವನ್ನು ಆಚರಿಸಲಿದ್ದಾರೆ.

ಸರಕಾರದ ನೀತಿಯನ್ನು ವಿರೋಧಿಸಲು ನಾಳೆ ಫೆ.26ರ ಭಾನುವಾರ ರಾಜ್ಯಾದ್ಯಂತ ಜಾಟ್‌ ಸಮುದಾಯದ ಸದಸ್ಯರು ಕಪ್ಪು ಮುಂಡಾಸು, ಕಪ್ಪು ಟೋಪಿ, ಕಪ್ಪು ರಿಬ್ಬನ್‌ ಹಾಗೂ ಕೈಗೆ ಕಪ್ಪು ಪಟ್ಟಿಯನ್ನು ಧರಿಸಬೇಕು ಎಂದು ಆಂದೋಲನದ ನೇತೃತ್ವ ವಹಿಸಿರುವ ಅಖೀಲ ಭಾರತ ಜಾಟ್‌ ಆರಕ್ಷಣ ಸಂಘರ್ಷ ಸಮಿತಿಯ ಅಧ್ಯಕ್ಷ ಯಶ್‌ಪಾಲ್‌ ಮಲಿಕ್‌ ಹೇಳಿದ್ದಾರೆ. 

ಮಾರ್ಚ್‌ 1ರಿಂದ ಪ್ರತಿಭಟನಕಾರರು ಸರಕಾರದೊಂದಿಗೆ ಸಹಕರಿಸುವುದಿಲ್ಲ. ಯಾರೊಬ್ಬರು ನೀರು, ವಿದ್ಯುತ್‌ ಬಿಲ್‌ ಪಾವತಿಸುವುದಿಲ್ಲ; ಸರಕಾರಕ್ಕೆ ಬಾಕಿ ಇರುವ ಸಾಲದ ಕಂತು ಕಟ್ಟುವುದಿಲ್ಲ ಎಂದು ಮಲಿಕ್‌ ಹೇಳಿದರು.

ಸಂಸತ್ತಿಗೂ ಮುತ್ತಿಗೆ ಹಾಕುವ ಯೋಜನೆ ಇದ್ದು ಅದರ ದಿನಾಂಕವನ್ನು ಮಾರ್ಚ್‌ 2ರಂದು ಪ್ರಕಟಿಸಲಾಗುವುದು. ಅಂದು ದಿಲ್ಲಿ ಮತ್ತು ಉತ್ತರ ಪ್ರದೇಶದಲ್ಲಿನ ಜಾಟರು ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮೀಸಲು ವಿಷಯದಲ್ಲಿ ಮನವಿಯನ್ನು ಸಲ್ಲಿಸುವರು ಎಂದು ಮಲಿಕ್‌ ಹೇಳಿದರು. 

ಈ ನಡುವೆ ಹರಿಯಾಣದಲ್ಲಿನ ಪ್ರಧಾನ ವಿರೋಧ ಪಕ್ಷವಾಗಿರುವ ಐಎನ್‌ಎಲ್‌ಡಿ ಈ ಬಾರಿ ಜಾಟ್‌ ಆಂದೋಲನಕ್ಕೆ ತನ್ನ ಬೆಂಬಲವನ್ನು ಪ್ರಕಟಿಸಿದ್ದು ಸರಕಾರ ಜಾಟರ ಬೇಡಿಕೆಗಳನ್ನು ಪೂರೈಸಬೇಕೆಂದು ಕೇಳಿಕೊಂಡಿದೆ.
 
ಜಾಟರ ಈ ಹೊಸ ಚಳವಳಿಗೆ ಮುನ್ನೆಚ್ಚರಿಕೆಯ ಕ್ರಮವಾಗಿ ಸೂಕ್ಷ್ಮ ಹಾಗೂ ಆಯಕಟ್ಟಿನ ಪ್ರದೇಶಗಳಲ್ಲಿ ಅರೆಸೈನಿಕ ಪಡೆಯನ್ನು ನಿಯೋಜಿಸಲಾಗಿದೆ; ರಾಜ್ಯ ಪೊಲೀಸರನ್ನು ಕಟ್ಟೆಚ್ಚರದಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

job for kannadigas

Editorial; ಕನ್ನಡಿಗರಿಗೆ ಉದ್ಯೋಗ: ಸರಕಾರ ಗಮನಹರಿಸಲಿ

ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್‌ ನಿಂಬಾಳ್ಕರ್‌ ಅಧಿಕಾರ ಸ್ವೀಕಾರ

ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್‌ ನಿಂಬಾಳ್ಕರ್‌ ಅಧಿಕಾರ ಸ್ವೀಕಾರ

T20 WC; The emotion of the moment is the reason for eating the pitch sand: Rohit

T20 WC; ಪಿಚ್ ಮಣ್ಣು ತಿನ್ನಲು ಆ ಕ್ಷಣದ ಭಾವನೆಗಳೇ ಕಾರಣ: ರೋಹಿತ್‌

Lok Sabha; Many parts of Rahul Gandhi’s speech deducted from file

Lok Sabha; ರಾಹುಲ್‌ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್‌!

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

ಸೇತುವೆ ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ

Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha; Many parts of Rahul Gandhi’s speech deducted from file

Lok Sabha; ರಾಹುಲ್‌ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್‌!

Fragment of rocks discovered by Pragyan at Moon Shivashakti Point!

Shivashakti: ಚಂದ್ರನ ಶಿವಶಕ್ತಿ ಪಾಯಿಂಟ್‌ನಲ್ಲಿ ಪ್ರಜ್ಞಾನ್‌ನಿಂದ ಶಿಲೆಗಳ ತುಣುಕು ಪತ್ತೆ!

Young couple who ready to fly Canada captured in delhi

ಕೆನಡಾಗೆ ಹೊರಟಿದ್ದ ಯುವ ದಂಪತಿ ಸೆರೆ!

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

job for kannadigas

Editorial; ಕನ್ನಡಿಗರಿಗೆ ಉದ್ಯೋಗ: ಸರಕಾರ ಗಮನಹರಿಸಲಿ

ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್‌ ನಿಂಬಾಳ್ಕರ್‌ ಅಧಿಕಾರ ಸ್ವೀಕಾರ

ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್‌ ನಿಂಬಾಳ್ಕರ್‌ ಅಧಿಕಾರ ಸ್ವೀಕಾರ

T20 WC; The emotion of the moment is the reason for eating the pitch sand: Rohit

T20 WC; ಪಿಚ್ ಮಣ್ಣು ತಿನ್ನಲು ಆ ಕ್ಷಣದ ಭಾವನೆಗಳೇ ಕಾರಣ: ರೋಹಿತ್‌

Lok Sabha; Many parts of Rahul Gandhi’s speech deducted from file

Lok Sabha; ರಾಹುಲ್‌ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್‌!

Road

Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.