ಜೆಇಇ ಪರೀಕ್ಷೆ ಮುಂದೂಡಿಕೆ ಎ.16ರ ಬದಲು 21ಕ್ಕೆ ಆರಂಭ
Team Udayavani, Mar 14, 2022, 9:45 PM IST
ಹೊಸದಿಲ್ಲಿ: ಜಾಯಿಂಟ್ ಎಂಟ್ರಾನ್ಸ್ ಎಕ್ಸಾಮಿನೇಷನ್(ಜೆಇಇ)ನ ದಿನಾಂಕಗಳಲ್ಲಿ ಮತ್ತೊಮ್ಮೆ ಬದಲಾವಣೆ ಮಾಡಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ ಎ.21, 24, 25, 29, ಮೇ 1 ಹಾಗೂ 2ರಂದು ಪರೀಕ್ಷೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (ಎನ್ಟಿಎ) ಸೋಮವಾರ ತಿಳಿಸಿದೆ.
ವಿವಿಧ ರಾಜ್ಯಗಳ ಪದವಿ ಪೂರ್ವ ತರಗತಿಗಳ ಪರೀಕ್ಷೆಗಳೂ ಅದೇ ಸಂದರ್ಭದಲ್ಲಿ ನಡೆಯಲಿದೆ. ಹೀಗಾಗಿ, ದಿನಾಂಕಗಳಲ್ಲಿ ಬದಲಾವಣೆ ಮಾಡಬೇಕೆಂದು ಮನವಿ ಸಲ್ಲಿಕೆಯಾಗಿದ್ದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಎನ್ಟಿಎ ತಿಳಿಸಿದೆ.
ಈ ಹಿಂದೆ ಪ್ರಕಟವಾಗಿರುವ ವೇಳಾಪಟ್ಟಿ ಪ್ರಕಾರ ಜೆಇಇ -2022 ಸೆಷನ್ 1ರ ಪರೀಕ್ಷೆಗಳು ಎ.16ರಿಂದ 21ರ ವರೆಗೆ ನಡೆಯಬೇಕಾಗಿತ್ತು.
ಜೆಇಇ ವೇಳಾಪಟ್ಟಿಯ ಕಾರಣದಿಂದಾಗಿ ಕರ್ನಾಟಕದಲ್ಲಿ ಹಲವಾರು ಬಾರಿ ಪಿಯುಸಿ ಪರೀಕ್ಷಾ ದಿನಾಂಕಗಳನ್ನು ಬದಲಿಸಲಾಗಿದೆ. ಇತ್ತೀಚೆಗಷ್ಟೇ ಜೆಇಇ ಪರೀಕ್ಷೆ ಜತೆಗೆ ವೇಳಾಪಟ್ಟಿ ಸಂಘರ್ಷ ಬೇಡವೆಂದು ಪಿಯು ಮಂಡಳಿ ಪರೀಕ್ಷಾ ದಿನಾಂಕ ಬದಲಿಸಿತ್ತು. ಈಗ ಮತ್ತೆ ಕರ್ನಾಟಕದ ಪಿಯುಸಿ ಪರೀಕ್ಷೆ ವೇಳೆಯಲ್ಲೇ ಮತ್ತೆ ಜೆಇಇ ನಿಗದಿಯಾಗಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೂ ಕಾರಣವಾಗಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೆಇಇ ಮತ್ತು ದ್ವಿತೀಯ ಪರೀಕ್ಷಾ ವೇಳಾಪಟ್ಟಿಯನ್ನು ಮತ್ತೊಮ್ಮೆ ಪರಿಶೀಲನೆ ಮಾಡುತ್ತೇವೆ. ಒಂದು ವೇಳೆ ಅಗತ್ಯ ಎನಿಸಿದರೆ, ಬದಲಾವಣೆ ಮಾಡುತ್ತೇವೆ. ಇಲ್ಲವಾದಲ್ಲಿ ನಿಗದಿತ ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೆ ನಿಶ್ಚಿಂತೆಯಲ್ಲಿರಿ.
– ಆರ್. ರಾಮಚಂದ್ರನ್,
ಪಿಯು ಇಲಾಖೆ ನಿರ್ದೇಶಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.