Jharkhand; ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯಲ್ಲಿ 12 ಸಾವು; ಮುಳುವಾಯಿತಾ ಬದಲಾದ ನಿಯಮ


Team Udayavani, Sep 8, 2024, 10:39 AM IST

Jharkhand; ಕಾನ್ಸ್‌ಟೇಬಲ್‌ ನೇಮಕಾತಿ ಪರೀಕ್ಷೆಯಲ್ಲಿ 12 ಸಾವು; ಮುಳುವಾಯಿತಾ ಬದಲಾದ ನಿಯಮ

ರಾಂಚಿ: ಜಾರ್ಖಂಡ್ ನಲ್ಲಿ ಈ ವರ್ಷದ ಅಬಕಾರಿ ಕಾನ್ಸ್‌ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಗಾಗಿ (Excise Constable Recruitment Exam) ನೇಮಕಾತಿ ದೈಹಿಕ ಪರೀಕ್ಷೆಯ ಸಮಯದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.

ಈ ಬಾರಿ ಅಬಕಾರಿ ಕಾನ್ಸ್‌ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಯ ಮೌಲ್ಯಮಾಪನದಲ್ಲಿ ಬದಲಾವಣೆ ಮಾಡಲಾಗಿದೆ. ಅಭ್ಯರ್ಥಿಗಳು 1.6 ಕಿಮೀ ಬದಲಿಗೆ 10 ಕಿಮೀ ಓಡಬೇಕು, ಫಿಟ್‌ನೆಸ್ ಮಟ್ಟವನ್ನು ಮೌಲ್ಯಮಾಪನ ಮಾಡದಿರುವುದು, ಅತಿಯಾದ ಆರ್ದ್ರತೆ ಮತ್ತು ಲಿಖಿತ ಪರೀಕ್ಷೆಯ ಮೊದಲು ದೈಹಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರದಿಂದ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಉನ್ನತ ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

ಪರೀಕ್ಷೆಗೆ ಕಡ್ಡಾಯವಾಗಿರುವ 10 ಕಿಮೀ ಓಟವನ್ನು ಓಡುವಾಗ 12 ಮಂದಿ ಸಾವನ್ನಪ್ಪಿದ್ದಾರೆ. ಆಗಸ್ಟ್ 22 ರಿಂದ ಜಾರ್ಖಂಡ್ ಪೊಲೀಸರು ಮೇಲ್ವಿಚಾರಣೆಯಲ್ಲಿ ದೈಹಿಕ ಪರೀಕ್ಷೆಗಳು ನೇಮಕಾತಿ ಡ್ರೈವ್‌ ನ ಮೊದಲ ಹಂತ ನಡೆಯುತ್ತಿದೆ. 60 ನಿಮಿಷಗಳಲ್ಲಿ ಓಟವನ್ನು ಪೂರ್ಣಗೊಳಿಸುವ ಅರ್ಹ ಅಭ್ಯರ್ಥಿಗಳು ನಂತರ ಲಿಖಿತ ಪರೀಕ್ಷೆ ಮತ್ತು ಅಂತಿಮ ವೈದ್ಯಕೀಯ ಪರೀಕ್ಷೆಗೆ ಒಳಗಾಗುತ್ತಾರೆ.

ಮೃತರನ್ನು 19 ರಿಂದ 31 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಪಲಾಮು ಮೂಲದ ಅಮರೇಶ್ ಕುಮಾರ್, ಪ್ರದೀಪ್ ಕುಮಾರ್, ಅಜಯ್ ಮಹತೋ, ಅರುಣ್ ಕುಮಾರ್ ಮತ್ತು ದೀಪಕ್ ಕುಮಾರ್ ಪಾಂಡು; ಹಜಾರಿಬಾಗ್‌ ನ ಮನೋಜ್ ಕುಮಾರ್ ಮತ್ತು ಸೂರಜ್ ಕುಮಾರ್ ವರ್ಮಾ; ಸಾಹಿಬ್‌ಗಂಜ್‌ ನ ವಿಕಾಸ್ ಲಿಂಡಾ ಮತ್ತು ಗಿರಿದಿಹ್‌ ನ ಸುಮಿತ್ ಯಾದವ್. ಇನ್ನು ಮೂವರ ವಿವರಗಳನ್ನು ಇದುವರೆಗೂ ಬಹಿರಂಗಪಡಿಸಿಲ್ಲ. ಸೆಪ್ಟೆಂಬರ್ 2ರವರೆಗೆ ಒಟ್ಟು 1.87 ಲಕ್ಷ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 1.17 ಲಕ್ಷ ಮಂದಿ ಮುಂದಿನ ಸುತ್ತಿಗೆ ಅರ್ಹತೆ ಪಡೆದಿದ್ದಾರೆ.

ಸರ್ಕಾರಿ ಮೂಲಗಳ ಪ್ರಕಾರ, ಜಾರ್ಖಂಡ್ ರಾಜ್ಯವು 2000 ರಲ್ಲಿ ರಚನೆಯಾದ ನಂತರ ಇದೇ ಮೊದಲ ಬಾರಿಗೆ ನೇಮಕಾತಿ ಅಭಿಯಾನವನ್ನು ನಡೆಸಲಾಗಿದೆ. 2008 ಮತ್ತು 2019 ರಲ್ಲಿ ಪ್ರಾರಂಭಿಸಲಾಯಿತಾದರೂ ಅದು ಪೂರ್ಣಗೊಂಡಿರಲಿಲ್ಲ.

ಟಾಪ್ ನ್ಯೂಸ್

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

1-reasas

Americaದಲ್ಲಿ ಬಿಡುವಿನ ದಿನಗಳನ್ನು ಕಳೆಯುತ್ತಿರುವ ಧೋನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.