Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ
ಸಿಎಂ ಹೇಮಂತ್ ಸೊರೇನ್ ಅತ್ತಿಗೆ ವಿರುದ್ಧ ಹೇಳಿಕೆ, ಆಯೋಗಕ್ಕೆ ದೂರು ಸಲ್ಲಿಸಿದ ಬಿಜೆಪಿ... ಬುಡಕಟ್ಟು ಮಹಿಳೆಗೆ ಅಗೌರವ
Team Udayavani, Oct 26, 2024, 6:40 PM IST
ರಾಂಚಿ: ಜಾರ್ಖಂಡ್ ನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ಕಾವೇರಿದ್ದು, ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಅವರು ಬಿಜೆಪಿ ನಾಯಕಿ ಸೀತಾ ಸೊರೇನ್ ವಿರುದ್ಧ (ಅಕ್ಟೋಬರ್ 25 )ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಿವಾದವನ್ನು ಎಬ್ಬಿಸಿದ್ದಾರೆ.
ಸೀತಾ ಸೊರೇನ್ ಹೆಸರನ್ನು ಉಲ್ಲೇಖಿಸದೆ ಅವಹೇಳನಕಾರಿ ಭಾಷೆಯನ್ನು ಬಳಸಿದ್ದು, “ತಿರಸ್ಕರಿಸಿದ ಸರಕು” ಎಂದು ಹೇಳಿಕೆ ನೀಡಿದ್ದಾರೆ. ಆಕ್ರೋಶ ಹೊರ ಹಾಕಿರುವ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ನಾಮಪತ್ರ ಸಲ್ಲಿಸಿದ ನಂತರ, ಅನ್ಸಾರಿ ಅವರು ಸೀತಾ ಅವರನ್ನು ಅವಹೇಳನಕಾರಿ ಪದಗಳಲ್ಲಿ ಉಲ್ಲೇಖಿಸಿದ್ದಾರೆ. ಈ ಹೇಳಿಕೆ ವಿರುದ್ಧ ಕ್ರಮಕ್ಕೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಅನ್ಸಾರಿಯವರ ಹೇಳಿಕೆಗಳು ಬುಡಕಟ್ಟು ಮಹಿಳೆಯರ ಗೌರವದ ಬಗ್ಗೆ ಕಳವಳ ಹೆಚ್ಚಿಸುತ್ತವೆ, ಬುಡಕಟ್ಟು ಮಹಿಳೆಯರ ಬಗ್ಗೆ ಇಂಡಿಯಾ ಮೈತ್ರಿಕೂಟದ,ಕಾಂಗ್ರೆಸ್ ಪಕ್ಷದ, ಜೆಎಂಎಂ ಪಕ್ಷದ ನಿಲುವನ್ನು ಪ್ರತಿಧ್ವನಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
ಜಮ್ತಾರಾದಿಂದ ಕಣಕ್ಕಿಳಿದಿರುವ ಸೀತಾ ಸೊರೇನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅವರ ಅತ್ತಿಗೆ. ಈ ವರ್ಷದ ಮೇ ತಿಂಗಳಲ್ಲಿ “ಪಕ್ಷ ವಿರೋಧಿ ಚಟುವಟಿಕೆ” ಗಾಗಿ ಜೆಎಂಎಂನಿಂದ ಉಚ್ಚಾಟಿಸಲಾಗಿತ್ತು. ಮೂರು ಬಾರಿ ಶಾಸಕಿಯಾಗಿರುವ ಸೀತಾ ಸೊರೇನ್ ಅವರ ಪತಿ ದುರ್ಗಾ ಸೊರೇನ್ 2009 ರಲ್ಲಿ ನಿಧನ ಹೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್
ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ
ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ
Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.