J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ
ಅಂತಂತ್ರ ವಿಧಾನಸಭೆ ಸಾಧ್ಯತೆ... ಬೆಳವಣಿಗೆ ದೊಡ್ಡ ವಿಚಾರ ಎಂದ ಫಾರೂಕ್ ಅಬ್ದುಲ್ಲಾ
Team Udayavani, Oct 6, 2024, 5:53 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಮುಗಿದ ಬಳಿಕ ಕೆಲವು ಸಮೀಕ್ಷೆಗಳು ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆಗಳು ಇವೆ ಎಂದಿರುವ ಬೆಲ್ಲಲ್ಲೇ ಮೆಹಬೂಬಾ ಮುಫ್ತಿ ನೇತೃತ್ವದ ಪಿಡಿಪಿ ಯು(PDP) ”ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದೊಂದಿಗೆ ಕೈಜೋಡಿಸಲು ಸಿದ್ದ” ಎಂದು ಹೇಳಿಕೆ ನೀಡಿದೆ.
ನಿಕಟ ಸ್ಪರ್ಧೆ ಇರುವ ಸೂಚನೆ ಬೆನ್ನಲ್ಲೇ , ಲಾಲ್ ಚೌಕ್ನ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಅಭ್ಯರ್ಥಿ ಜುಹೈಬ್ ಯೂಸುಫ್ ಮಿರ್ ಮಾತನಾಡಿ, ಬಿಜೆಪಿಯನ್ನು(BJP) ಅಧಿಕಾರಕ್ಕೇರುವುದರಿಂದ ತಡೆಯಲು ನಮ್ಮ ಪಕ್ಷ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ (NC-Congress) ಮೈತ್ರಿಯನ್ನು ಬೆಂಬಲಿಸಬಹುದು. ಕಾಶ್ಮೀರದ ವಿಶಿಷ್ಟ ಗುರುತನ್ನು ಕಾಪಾಡಲು ಯಾವುದೇ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಪಕ್ಷ ಸಿದ್ಧವಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಜಾತ್ಯತೀತ ಸರ್ಕಾರವನ್ನು ರಚಿಸುವಲ್ಲಿ ಪಿಡಿಪಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ ಎಂದು ವಿಶ್ವಾಸವಿದೆ’ ಎಂದು ಹೇಳಿದರು.
This Is A Great Thing.. ಎಂದ ಫಾರೂಕ್ ಅಬ್ದುಲ್ಲಾ
ಪಿಡಿಪಿ ನಾಯಕನ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ NC ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ”ಪಿಡಿಪಿ ನಮ್ಮೊಂದಿಗೆ ಸೇರಲು ಸಿದ್ಧವಾಗಿರುವುದು “ದೊಡ್ಡ ವಿಷಯ” ಎಂದು ಭಾನುವಾರ ಹೇಳಿದ್ದಾರೆ.
ಪಿಡಿಪಿ ಅವರಿಗೆ ಅಭಿನಂದನೆಗಳು, ಇದು ದೊಡ್ಡ ವಿಷಯ, ನಾವೆಲ್ಲರೂ ಒಂದೇ ಹಾದಿಯಲ್ಲಿದ್ದೇವೆ, ನಾವು ದ್ವೇಷವನ್ನು ಕೊನೆಗೊಳಿಸಬೇಕು ಮತ್ತು ಜಮ್ಮು ಮತ್ತು ಕಾಶ್ಮೀರವನ್ನು ಒಗ್ಗೂಡಿಸಬೇಕಾಗಿದೆ” ಎಂದರು.
ಸಮೀಕ್ಷೆಯಲ್ಲೇನಿದೆ?
ಈ ಬಾರಿ ಕಾಂಗ್ರೆಸ್- ಎನ್ಸಿ ಮೈತ್ರಿಯಲ್ಲಿ ಸ್ಪರ್ಧಿಸಿದ್ದರೆ, ಬಿಜೆಪಿ ಹಾಗೂ ಪಿಡಿಪಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು. ಕಾಂಗ್ರೆಸ್ಗೆ ಸಿ ವೋಟರ್ (40-48), ಪೀಪಲ್ಸ್ ಪಲ್ಸ್ (46-50) ಬಹುಮತ ಸಿಗಬಹುದು ಎಂದಿವೆ. ಉಳಿದಂತೆ ದೈನಿಕ್ ಭಾಸ್ಕರ್ 35-40, ಗಲಿಸ್ಥಾನ್ ನ್ಯೂಸ್ 31-36, ಆ್ಯಕ್ಸಿಸ್ ಮೈ ಇಂಡಿಯಾ 35-45 ಸ್ಥಾನಗಳಲ್ಲಿ ಗೆಲ್ಲಬಹುದು ಎಂದಿವೆ. ಬಿಜೆಪಿ ಸಿ ವೋಟರ್ ಪ್ರಕಾರ 27-32, ದೈನಿಕ್ ಭಾಸ್ಕರ್ ಪ್ರಕಾರ 22-26, ಗಲಿಸ್ಥಾನ್ ನ್ಯೂಸ್ 28-30, ಪೀಪಲ್ಸ್ ಪಲ್ಸ್ 23-27 ಮತ್ತು ಆ್ಯಕ್ಸಿಸ್ ಮೈ ಇಂಡಿಯಾ ಪ್ರಕಾರ 23-27 ಸ್ಥಾನ ದೊರೆಯಬಹುದು ಎನ್ನಲಾಗಿದೆ.
ನಿಜವಾಗಿದ್ದ 2014ರ ಸಮೀಕ್ಷೆ
2014ರಲ್ಲಿ ಪ್ರಕಟವಾಗಿದ್ದ ಚುನಾವಣೋತ್ತರ ಸಮೀಕ್ಷೆಗಳು ನಿಜವಾಗಿದ್ದವು. ಪಿಡಿಪಿ ಅಧಿಕಾರ ಹಿಡಿಯಲಿದೆ ಎಂದು ಬಹಳಷ್ಟು ಸಮೀಕ್ಷೆಗಳು ಹೇಳಿದ್ದವು. ಆ ಚುನಾವಣೆಯಲ್ಲಿ ಪಿಡಿಪಿ 28, ಬಿಜೆಪಿ 25, ಎನ್ಸಿ 15, ಕಾಂಗ್ರೆಸ್ 12ರಲ್ಲಿ ಜಯ ಗಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ
Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Punjab; ಆಮ್ ಆದ್ಮಿ ನಾಯಕನಿಗೆ ಗುಂಡೇಟು ಹೊಡೆದ ಅಕಾಲಿ ದಳ ಮುಖಂಡ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.