J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
ಅವಾಮಿ ಇತ್ತೆಹಾದ್ ಪಕ್ಷ ಬಿಜೆಪಿಯ ಬಿ ಟೀಮ್ ಎಂದ ನ್ಯಾಷನಲ್ ಕಾನ್ಫರೆನ್ಸ್
Team Udayavani, Sep 16, 2024, 8:10 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ ಕಾವೇರಿದ್ದು ಕೊನೆ ಕ್ಷಣದ ಪಕ್ಷಾಂತರ ಪರ್ವವೂ ಜೋರಾಗಿದೆ.
ಪಕ್ಷೇತರರಾಗಿ ಗೆದ್ದಿದ್ದ ಸಂಸದ ಇಂಜಿನಿಯರ್ ರಶೀದ್ ರ ಅವಾಮಿ ಇತ್ತೆಹಾದ್ ಪಕ್ಷದ (AIP) ಪುಲ್ವಾಮಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮೊಹಮ್ಮದ್ ಇಕ್ಬಾಲ್ ಸೋಫಿ ಅವರು ಸೋಮವಾರ(ಸೆ16) ಪಕ್ಷಕ್ಕೆ ಕೈಕೊಟ್ಟು ನ್ಯಾಷನಲ್ ಕಾನ್ಫರೆನ್ಸ್ ಸೇರ್ಪಡೆಯಾಗಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಒಮರ್ ಅಬ್ದುಲ್ಲಾ ಅವರ ಸಮ್ಮುಖದಲ್ಲಿ ಪಕ್ಷಾಂತರ ಮಾಡಿದ್ದು ಬೆಳವಣಿಗೆ ಇಂಜಿನಿಯರ್ ರಶೀದ್ ರನ್ನು ಕೆರಳಿಸಿದೆ. ಸೆಪ್ಟೆಂಬರ್ 18 ರಂದು ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.
ಮೊಹಮ್ಮದ್ ಇಕ್ಬಾಲ್ ಸೋಫಿ ಪ್ರತಿಕ್ರಿಯಿಸಿ ‘ನಾನು ಪುಲ್ವಾಮಾದಿಂದ ಎಐಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಎಐಪಿ ಜಮಾತ್-ಎ-ಇಸ್ಲಾಮಿ (ಜೆಇಐ) ಜತೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂಬ ಮಾಹಿತಿ ನಿನ್ನೆ ನನಗೆ ಬಂತು. ನಮಗೆ ಈ ಸಂದೇಶವು ಹಠಾತ್ತಾಗಿ ಬಂದಿದೆ. ಎನ್ಸಿ ಎಲ್ಲ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ನಾನು ನಂಬುತ್ತೇನೆ.ನನ್ನ ಉಮೇದುವಾರಿಕೆಯನ್ನು ನಾನು ಹಿಂಪಡೆಯಲು ಸಾಧ್ಯವಿಲ್ಲ ಹಾಗಾಗಿ ಎಲ್ಲರೂ ಎನ್ಸಿ-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ವಿನಂತಿಸುತ್ತೇನೆ” ಎಂದರು.
ಉಗ್ರ ನೆರವು ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಇಂಜಿನಿಯರ್ ರಶೀದ್ ಜೈಲಿನಿಂದಲೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಒಮರ್ ಅಬ್ದುಲ್ಲಾ ಅವರ ವಿರುದ್ಧ ಜಯ ಸಾಧಿಸಿದ್ದರು. ಜೈಲಿನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ರಶೀದ್ ನೇತೃತ್ವದ ಎಐಪಿ ಹಲವು ರಣತಂತ್ರಗಳನ್ನೂ ನಡೆಸಿ ಎನ್ ಸಿ-ಕಾಂಗ್ರೆಸ್ ಮೈತ್ರಿಕೂಟ, ಪಿಡಿಪಿಯ ನಿದ್ದೆ ಕೆಡಿಸಿದೆ.
ರಶೀದ್ ರ ಅವಾಮಿ ಇತ್ತೆಹಾದ್ ಪಾರ್ಟಿ ಬಿಜೆಪಿಯ ‘ಬಿ’ ಟೀಮ್ ಎಂದು ಎನ್ಸಿ ಹೇಳಿಕೊಂಡಿದೆ. ಏತನ್ಮಧ್ಯೆ, ಎಐಪಿ ವಿಧಾನಸಭಾ ಚುನಾವಣೆಗಾಗಿ ನಿಷೇಧಿತ ಜಮಾತ್-ಎ-ಇಸ್ಲಾಮಿ (ಜೆಐ) ಜತೆ ಮೈತ್ರಿ ಮಾಡಿಕೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 90 ವಿಧಾನಸಭಾ ಸ್ಥಾನಗಳಿವೆ ಮತ್ತು ಬಹುಮತದ ಗುರುತು 46 ಆಗಿದೆ.
#WATCH | Srinagar, J&K | Awami Ittehad Party (AIP) candidate from Pulwama Assembly seat, Mohammad Iqbal Sofi joins National Conference in the presence of National Conference chief, Omar Abdullah. pic.twitter.com/XxylWXWcPl
— ANI (@ANI) September 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.