ಉಗ್ರರು ಭ್ರಷ್ಟ ರಾಜಕಾರಣಿಗಳನ್ನು ಗುಂಡಿಟ್ಟು ಕೊಲ್ಲಬೇಕು;ಜಮ್ಮು-ಕಾಶ್ಮೀರ್ ರಾಜ್ಯಪಾಲ
Team Udayavani, Jul 22, 2019, 11:18 AM IST
ಶ್ರೀನಗರ್:ಅಮಾಯಕ ಜನರು ಮತ್ತು ಯೋಧರನ್ನು ಹೊರತುಪಡಿಸಿ ರಾಜ್ಯವನ್ನು ಲೂಟಿ ಮಾಡುತ್ತಿರುವ ಭ್ರಷ್ಟ ರಾಜಕಾರಣಿಗಳನ್ನು ಭಯೋತ್ಪಾದಕರು ಕೊಂದು ಬಿಡಬೇಕು ಎಂಬ ಜಮ್ಮು-ಕಾಶ್ಮೀರ ರಾಜ್ಯಪಾಲರಾಗಿರುವ ಸತ್ಯಪಾಲ್ ಮಲಿಕ್ ನೀಡಿರುವ ಹೇಳಿಕೆ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
“ತಮ್ಮ ಕೈಗೆ ಬಂದೂಕನ್ನು ಎತ್ತಿಕೊಂಡಿರುವ ಈ ಹುಡುಗರು (ಉಗ್ರರು) ತಮ್ಮದೇ ಜನರನ್ನು ಕೊಲ್ಲುತ್ತಿದ್ದಾರೆ. ಭದ್ರತಾ ಅಧಿಕಾರಿಗಳನ್ನು, ವಿಶೇಷ ಪೊಲೀಸ್ ಅಧಿಕಾರಿಗಳನ್ನು ಹತ್ಯೆಗೈಯುತ್ತಿದ್ದಾರೆ. ನೀವು ಯಾಕೆ ಅವರನ್ನು ಕೊಲ್ಲುತ್ತಿದ್ದೀರಿ? ಯಾರು ಕಾಶ್ಮೀರದ ಸಂಪತ್ತನ್ನು ಲೂಟಿ ಹೊಡೆಯುತ್ತಿದ್ದಾರೋ ಅವರನ್ನು ಕೊಂದು ಬಿಡಿ ಎಂದು ಮಲಿಕ್ ಸಾರ್ವಜನಿಕ ಸಭೆಯಲ್ಲಿ ಬಹಿರಂಗವಾಗಿ ಹೇಳಿಕೆ ನೀಡಿದ್ದರು!
ಈ ಹೇಳಿಕೆ ಭಾರೀ ವಿವಾದ ಸೃಷ್ಟಿಸುತ್ತಿದ್ದಂತೆಯೇ ಸೋಮವಾರ ಸ್ಪಷ್ಟನೆ ನೀಡಿದ ರಾಜ್ಯಪಾಲ ಮಲಿಕ್ ಅವರು, ರಾಜಕಾರಣಿಗಳ ಭ್ರಷ್ಟಾಚಾರಕ್ಕೆ ರೋಸಿ ಹೋಗಿ ಆಕ್ರೋಶ ಮತ್ತು ಒತ್ತಡಕ್ಕೊಳಗಾಗಿ ನಾನು ಆ ರೀತಿ ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.
Jammu&Kashmir Governor,SP Malik to ANI on his statement over corruption in Kashmir & asking terrorists to gun down those who looted their state& country rather than attacking the security forces: Whatever I said was in a fit of anger and frustration due to rampant corruption here pic.twitter.com/ZCvLu9x12p
— ANI (@ANI) July 22, 2019
ಒಬ್ಬ ರಾಜ್ಯಪಾಲರಾಗಿ ನಾನು ಅಂತಹ ಹೇಳಿಕೆಯನ್ನು ನೀಡಬಾರದು. ಆದರೆ ನನ್ನ ವೈಯಕ್ತಿಕ ಅಭಿಪ್ರಾಯ ಅದೇ ಆಗಿದೆ. ಹಲವಾರು ರಾಜಕೀಯ ಮುಖಂಡರು, ದೊಡ್ಡ, ದೊಡ್ಡ ಅಧಿಕಾರಿಗಳು ಇಲ್ಲಿ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದ್ದಾರೆ ಎಂದು ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.