ಮಾನನಷ್ಟ ಮೊಕದ್ದಮೆ ಪ್ರಕರಣ : ಪತ್ರಕರ್ತೆ ಪ್ರಿಯಾ ಖುಲಾಸೆ..!

"ದಶಕಗಳ ನಂತರವೂ ತನ್ನ ಸಮಸ್ಯೆಯನ್ನು ತಿಳಿಸುವ ಹಕ್ಕು ಮಹಿಳೆಗೆ ಇದೆ" : ದೆಹಲಿ ನ್ಯಾಯಾಲಯ

Team Udayavani, Feb 17, 2021, 6:52 PM IST

Journalist Priya Ramani acquitted in MJ Akbar criminal defamation case

ನವ ದೆಹಲಿ :  ಮಾಜಿ ಕೇಂದ್ರ ಸಚಿವ ಎಂ.ಜೆ.ಅಕ್ಬರ್ ಅವರು ದಾಖಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಪತ್ರಕರ್ತೆ ಪ್ರಿಯಾ ರಮಣಿಯನ್ನು ಖುಲಾಸೆಗೊಳಿಸಿದೆ.

ರಮಣಿ ವಿರುದ್ಧ ಯಾವುದೇ ಮಾನಹಾನಿ ದೂರು ಸಾಬೀತಾಗಿಲ್ಲ ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಹೇಳಿದರು.

ಓದಿ : ಮಗುವನ್ನು ದತ್ತು ನೀಡಲು ನಿರಾಕರಿಸಿದ ಪತ್ನಿಗೆ ಕಿರುಕುಳ: ಪತಿ ಸೇರಿ 6 ಮಂದಿಯ ವಿರುದ್ಧ FIR

“ದಶಕಗಳ ನಂತರವೂ ತನ್ನ ಸಮಸ್ಯೆಯನ್ನು ತಿಳಿಸುವ ಹಕ್ಕು ಮಹಿಳೆಗೆ ಇದೆ”  “ಮಾನಹಾನಿಯ ದೂರಿನ ನೆಪದಲ್ಲಿ ಲೈಂಗಿಕ ಕಿರುಕುಳದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಮಹಿಳೆಯರಿಗೆ ಶಿಕ್ಷೆಯಾಗಲು ಸಾಧ್ಯವಿಲ್ಲ. ಮಹಿಳೆಗೆ ತನಗಾದ ಸಮಸ್ಯೆಯನ್ನು ತನ್ನ ಆಯ್ಕೆಯ ಯಾವುದೇ ವೇದಿಕೆಯಲ್ಲಿ ಮತ್ತು ದಶಕಗಳ ನಂತರವೂ ದಾಖಲಿಸುವ ಹಕ್ಕಿದೆ.” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಿಯಾ ರಮಣಿ ಅವರು 2017 ರಲ್ಲಿ ಬರೆದ ಲೇಖನವೊಂದರಲ್ಲಿ ಮತ್ತು 2018 ರಲ್ಲಿ ಟ್ವೀಟ್‌ ಮಾಡಿದ ಪೋಸ್ಟ್ ನಲ್ಲಿ ಲೈಂಗಿಕ ಕಿರುಕುಳದ ಆರೋಪ ಹೊರಿಸುವುದರ ಮೂಲಕ ತಮ್ಮ “ಖ್ಯಾತಿಗೆ” ಹಾನಿ ಮಾಡಿದ್ದಾರೆ ಎಂದು ಎಂ.ಜೆ.ಅಕ್ಬರ್ ತಮ್ಮ ಮಾನಹಾನಿ ಮೊಕದ್ದಮೆಯಲ್ಲಿ ಹೇಳಿಕೊಂಡಿದ್ದರು.

ರಮಣಿ, ಅಕ್ಬರ್‌ಗೆ ಪ್ರತಿರೋಧ ನೀಡುವುದರ ಮೂಲಕ, “ಸತ್ಯ ನನ್ನ ರಕ್ಷಣೆ” ಎಂದು ಹೇಳಿದರು. ಕೆಲಸದ ಸ್ಥಳದಲ್ಲಿ ಆದ ಲೈಂಗಿಕ ಕಿರುಕುಳದ ವಿರುದ್ಧ ಮಾತನಾಡಿದ ಎಲ್ಲ ಮಹಿಳೆಯರ ಪರವಾಗಿ ನನ್ನ ಸಮರ್ಥನೆ ಇದೆ  ಎಂದು ಹೇಳಿದರು.

ಓದಿ : ವಾಟ್ಸ್ಯಾಪ್ ನಲ್ಲಿ ಅತಿ ಶೀಘ್ರದಲ್ಲಿ ಬರಲಿದೆ “ಲಾಗ್ ಔಟ್” ಆಪ್ಶನ್..!

ನಿಮ್ಮ ಸತ್ಯವನ್ನು ನ್ಯಾಯಾಲಯದ ಮುಂದೆ ಮೌಲ್ಯೀಕರಿಸುವುದು ಬಹಳ ಸಂತೋಷವಾಗುತ್ತದೆ ಎಂದು ತನ್ನ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಅಕ್ಬರ್ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಪಾಂಡೆ ಅವರ ತೀರ್ಪಿನ ಬಗ್ಗೆ ರಮಣಿ ಪ್ರತಿಕ್ರಿಯಿಸಿದರು.

ತೀರ್ಪಿನ ಬಗ್ಗೆ ನಾನು ನ್ಯಾಯಾಲಯಕ್ಕೆ ಧನ್ಯವಾದ ಹೇಳುತ್ತೇನೆ ಮತ್ತು ನನ್ನ ವಕೀಲ ರೆಬೆಕಾ ಜಾನ್ ಅವರಿಗೆ ಮತ್ತು ನನ್ನ ಮೇಲೆ ಅಪಾರ ನಂಬಿಕೆ ಇಟ್ಟ ನನ್ನ ಅದ್ಭುತ ತಂಡಕ್ಕೆ  ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು  ಪ್ರಿಯಾ ರಮಣಿ ಹೇಳಿದ್ದಾರೆ.

2018ರಲ್ಲಿ  #MeToo ಆಂದೋಲನದಲ್ಲಿ ರಮಣಿ, ಅಕ್ಬರ್ ವಿರುದ್ಧ ಲೈಂಗಿಕ ದುರುಪಯೋಗದ ಆರೋಪವನ್ನು ಹೊರಿಸಿದ್ದರು. ಅಕ್ಬರ್ ಅವರು, ದಶಕಗಳ ಹಿಂದೆ ಲೈಂಗಿಕ ದುರುಪಯೋಗವಾಗಿದೆ ಎಂದು ಆರೋಪ ಹೊರಿಸಿದ್ದ ರಮಣಿ ವಿರುದ್ಧ ಅಕ್ಟೋಬರ್ 15, 2018 ರಂದು ದೂರು ದಾಖಲಿಸಿದ್ದರು.

ಓದಿ : ಒಂದು ವೇಳೆ ರಾಹುಲ್ ದಲಿತ ಯುವತಿಯನ್ನು ವಿವಾಹವಾದ್ರೆ…ಸಚಿವ ಅಠಾವಳೆ ಆಫರ್!

 

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.