![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 25, 2019, 11:37 PM IST
ಭೋಪಾಲ: ಮೈಕ್ರೋ ಬ್ಲಾಗಿಂಗ್ ಜಾಲತಾಣ ಟ್ವಿಟರ್ನಲ್ಲಿ ಜಾಲಾಡುವವರಿಗೆ ಕೇಂದ್ರದ ಮಾಜಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಖಾತೆ ಪರಿಚಿತವೇ. ಆದರೆ ಅವರು ತಮ್ಮ ಪ್ರೊಫೈಲ್ ವಿವರಣೆಯಲ್ಲಿ ಬದಲು ಮಾಡಿಕೊಂಡದ್ದು ಸೋಮವಾರ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು. ಈಗ ಅವರ ಪ್ರೊಫೈಲ್ನಲ್ಲಿ ಸಾರ್ವಜನಿಕ ಸೇವಕ, ಕ್ರಿಕೆಟ್ ಪ್ರೇಮಿ ಎಂಬ ವಿವರಣೆ ಮಾತ್ರವಿದೆ. ಈ ಹಿಂದೆ ಗುಣಾ ಕ್ಷೇತ್ರದ ಮಾಜಿ ಸಂಸದ (2002-2019), ಇಂಧನ ಖಾತೆ ಮಾಜಿ ಸಚಿವ, ವಾಣಿಜ್ಯ ಮತ್ತು ಕೈಗಾರಿಕೆ, ಸಂಪರ್ಕ, ಮಾಹಿತಿ ತಂತ್ರಜ್ಞಾನ ಮತ್ತು ಅಂಚೆ ಖಾತೆ ಮಾಜಿ ಸಹಾಯಕ ಸಚಿವ ಎಂಬ ವಿವರಣೆ ಇತ್ತು.
ಕಾಂಗ್ರೆಸ್ನ ಪ್ರಮುಖ ನೇತಾರರೂ ಆಗಿರುವ ಅವರು, ‘ಕಾಂಗ್ರೆಸ್ ನಾಯಕ’ ಎನ್ನುವುದನ್ನೂ ಬದಲು ಮಾಡಿದ್ದು ಕುತೂಹಲ ಹಾಗೂ ಊಹಾಪೋಪಗಳಿಗೆ ಕಾರಣವಾಗಿದೆ. ಅವರು ಕಾಂಗ್ರೆಸ್ನಿಂದ ದೂರ ಸರಿಯುತ್ತಿದ್ದಾರೆಯೇ ಎಂಬ ಪ್ರಶ್ನೆಯೂ ಮೂಡಿದೆ. ರಾಜಕೀಯ ವ್ಯಕ್ತಿಗಳ ಪ್ರೊಫೈಲ್ ವಿವರಣೆಯಲ್ಲಿ ಬದಲಾದರೆ, ಅದು ಚರ್ಚೆಗೆ ಗ್ರಾಸವಾಗುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ.
ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ ಸಿಂಧಿಯಾ ‘ಒಂದು ತಿಂಗಳ ಹಿಂದೆಯೇ ಈ ಬದಲಾವಣೆ ಮಾಡಿಕೊಂಡಿದ್ದೇನೆ. ಅದರಲ್ಲೇನೂ ವಿಶೇಷವಿಲ್ಲ. ಏಕೆಂದರೆ ನನಗೆ ಹಲವು ವಿಚಾರಗಳ ಬಗ್ಗೆ ಸಲಹೆ, ದೂರುಗಳು ಬರುತ್ತಿದ್ದವು. ಸದ್ಯ ಅದರ ಬಗೆಗಿನ ಚರ್ಚೆ ಏಕಾಗುತ್ತಿದೆ ಎಂದು ಗೊತ್ತಾಗುತ್ತಿಲ್ಲ’ ಎಂದಿದ್ದಾರೆ. ಸಂವಿಧಾನದ 370ನೇ ವಿಧಿ ರದ್ದು ಮಾಡಿದ್ದ ಕೇಂದ್ರದ ನಿರ್ಧಾರಕ್ಕೆ ಅವರು ಈ ಹಿಂದೆ ಬೆಂಬಲ ವ್ಯಕ್ತಪಡಿಸಿದ್ದರು ಮತ್ತು ಮಧ್ಯಪ್ರದೇಶದ ಕಾಂಗ್ರೆಸ್ ಸರಕಾರದ ವಿರುದ್ಧವೇ ಟೀಕಾ ಪ್ರಹಾರ ನಡೆಸಿದ್ದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.