![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 5, 2023, 4:20 PM IST
ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕಪಿಲ್ ಮಿಶ್ರಾ ಅವರನ್ನು ದೆಹಲಿ ಬಿಜೆಪಿ ಉಪಾಧ್ಯಕ್ಷರಾಗಿ ಶನಿವಾರ ನೇಮಿಸಲಾಗಿದೆ.
“ಬಿಜೆಪಿ ದೆಹಲಿ ಅಧ್ಯಕ್ಷ ವೀರೇಂದ್ರ ಸಚ್ದೇವ್ ಅವರ ಆದೇಶದ ಮೇರೆಗೆ, ಕಪಿಲ್ ಮಿಶ್ರಾ ಅವರನ್ನು ದೆಹಲಿ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ನೇಮಕಾತಿ ತಕ್ಷಣವೇ ಜಾರಿಗೆ ಬರಲಿದೆ ಎಂದು ಪಕ್ಷ ಹೇಳಿದೆ.
ದೆಹಲಿಯ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು 2019 ರಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರಾಗಿ ಅನರ್ಹಗೊಂಡ ನಂತರ ಬಿಜೆಪಿ ಸೇರಿದ್ದರು.
ಈ ತಿಂಗಳ ಆರಂಭದಲ್ಲಿ, ಬಿಜೆಪಿ ನಾಲ್ಕು ಚುನಾವಣೆಗೆ ಒಳಪಟ್ಟ ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು ಘೋಷಿಸಿತು. ರಾಜಸ್ಥಾನ, ಛತ್ತೀಸ್ಗಢ. ತೆಲಂಗಾಣ ಮತ್ತು ಮಧ್ಯಪ್ರದೇಶ.
ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಬಿಜೆಪಿಯ ರಾಜಸ್ಥಾನ ಚುನಾವಣಾ ಉಸ್ತುವಾರಿಯಾಗಿ ನೇಮಿಸಿದರೆ, ಗುಜರಾತ್ನ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಬಿಜೆಪಿ ನಾಯಕ ಕುಲದೀಪ್ ಬಿಷ್ಣೋಯ್ ಅವರನ್ನು ಸಹ-ಪ್ರಭಾರಿಗಳಾಗಿ ನೇಮಿಸಲಾಗಿದೆ.
ಇದಲ್ಲದೆ, ಓಂ ಪ್ರಕಾಶ್ ಮಾಥುರ್ ಅವರನ್ನು ಬಿಜೆಪಿಯ ಛತ್ತೀಸ್ಗಢ ಚುನಾವಣಾ ಉಸ್ತುವಾರಿಯಾಗಿ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಸಹ-ಪ್ರಭಾರಿಯಾಗಿ ನೇಮಿಸಿದ್ದಾರೆ.
ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಮಧ್ಯಪ್ರದೇಶ ಚುನಾವಣಾ ಉಸ್ತುವಾರಿಯಾಗಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಹ-ಪ್ರಭಾರಿಗಳಾಗಿದ್ದಾರೆ.
ಅಲ್ಲದೆ, ಬಿಜೆಪಿ ಸಂಸದ ಪ್ರಕಾಶ್ ಜಾವಡೇಕರ್ ಅವರನ್ನು ತೆಲಂಗಾಣ ಚುನಾವಣಾ ಉಸ್ತುವಾರಿಯಾಗಿ ಮತ್ತು ಸುನೀಲ್ ಬನ್ಸಾಲ್ ಅವರನ್ನು ಸಹ ಉಸ್ತುವಾರಿಯಾಗಿ ನೇಮಿಸಲಾಗಿದೆ.
ಈ ವರ್ಷಾಂತ್ಯದಲ್ಲಿ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಜ್ಜಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.