Kashmir; ಈಗ ಲೆ| ಗವರ್ನರ್‌ಗೆ ಹೆಚ್ಚಿನ ಅಧಿಕಾರ!: ವಿಪಕ್ಷಗಳ ಆಕ್ರೋಶ

ಜಮ್ಮು-ಕಾಶ್ಮೀರ ಮರುವಿಂಗಡನೆ ಕಾಯ್ದೆ 2019ಕ್ಕೆ ಕೇಂದ್ರದಿಂದ ಮಹತ್ವದ ತಿದ್ದುಪಡಿ... ಸಿಎಂ ಅಧಿಕಾರಕ್ಕೆ ಕಡಿವಾಣ ಹಾಕುವ ಯತ್ನ?

Team Udayavani, Jul 14, 2024, 6:13 AM IST

1-a-kashmir

ಹೊಸದಿಲ್ಲಿ: ಮಹತ್ವದ ಬೆಳವಣಿಗೆ ಎಂಬಂತೆ, ಜಮ್ಮು-ಕಾಶ್ಮೀರ ಮರುವಿಂಗಡನೆ ಕಾಯ್ದೆ-2019ಕ್ಕೆ ಕೇಂದ್ರ ಗೃಹ ಸಚಿವಾಲಯ ತಿದ್ದುಪಡಿ ತಂದಿದ್ದು, ಅದರಂತೆ ಇನ್ನು ಮುಂದೆ ಮುಖ್ಯಮಂತ್ರಿಗಿಂತ ಹೆಚ್ಚಿನ ಅಧಿಕಾರ ಲೆ| ಗವರ್ನರ್‌ಗೆ ಇರಲಿದೆ.

ಕಣಿವೆ ರಾಜ್ಯವು ಶೀಘ್ರದಲ್ಲೇ ಚುನಾವಣೆ ಎದುರಿಸಲಿರುವಂತೆಯೇ ಈ ಬೆಳವಣಿಗೆ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಸರಕಾರದ ಈ ನಿರ್ಧಾರದ ವಿರುದ್ಧ ಕಾಂಗ್ರೆಸ್‌, ಪಿಡಿಪಿ, ಎನ್‌ಸಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬಣ್ಣಿಸಿವೆ. ಈ ತಿದ್ದುಪಡಿಗೆ ರಾಷ್ಟ್ರಪತಿ ಮುರ್ಮು ಅವರು ಅಂಕಿತ ಹಾಕುವುದರೊಂದಿಗೆ ಜು.12ರಿಂದಲೇ ಇದು ಜಾರಿಯಾದಂತಾಗಿದೆ.

ಸಂಪೂರ್ಣ ಸ್ವಾಯುತ್ತ ರಾಜ್ಯವಾಗಿದ್ದ ಜಮ್ಮು- ಕಾಶ್ಮೀರ, 2019ರ ಮರುವಿಂಗಡನೆ ಕಾಯ್ದೆಯ ಮೂಲಕ ಕೇಂದ್ರಾಡಳಿತ ಪ್ರದೇಶವಾಗಿ ಬದಲಾಗಿತ್ತು. ಈಗ ಅಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಂತಿಮ ಅಧಿಕಾರವನ್ನು ಎಲ್‌ಜಿಗೆ ನೀಡಲಾಗಿದೆ.

ಲೆ|ಗವರ್ನರ್‌ಗೆ ಏನೇನು ಅಧಿಕಾರ?: ಹೊಸ ತಿದ್ದುಪಡಿಯ ಪ್ರಕಾರ, ಪೊಲೀಸ್‌, ಸಾರ್ವಜನಿಕ ಆದೇಶ, ಅಖೀಲ ಭಾರತ ಸೇವೆ, ಭ್ರಷ್ಟಾಚಾರ ನಿಗ್ರಹ ಬ್ಯೂರೋಗೆ ಸಂಬಂಧಿಸಿದ ಎಲ್ಲ ರೀತಿಯ ಪ್ರಸ್ತಾವನೆಗಳಿಗೆ ಇನ್ನು ಮುಂದೆ ಹಣಕಾಸು ಇಲಾಖೆಯ ಅನುಮೋದನೆಗೂ ಮೊದಲು ಲೆ| ಗವರ್ನರ್‌ರ ಅನುಮತಿ ಪಡೆಯುವುದು ಕಡ್ಡಾಯ. ಪೊಲೀಸ್‌ ಇಲಾಖೆ, ಐಎಎಸ್‌, ಐಪಿಎಸ್‌ನಂತಹ ಅಖೀಲ ಭಾರತೀಯ ಸೇವೆಗೆ ಸೇರಿದ ಅಧಿಕಾರಿಗಳ ನೇಮಕ, ವರ್ಗಾವಣೆ ಪ್ರಸ್ತಾವನೆಯೂ ಮೊದಲು ಲೆ| ಗವರ್ನರ್‌ ಬಳಿಗೆ ಬರಬೇಕು. ವಿವಿಧ ಪ್ರಕರಣಗಳಲ್ಲಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದು ಲೆ| ಗವರ್ನರ್‌ ಅಂತಿಮ ನಿರ್ಧಾರಕ್ಕೆ ಒಳಪಟ್ಟಿರಬೇಕಾಗುತ್ತದೆ.

ಅಡ್ವೊಕೇಟ್‌ ಜನರಲ್‌, ಇತರ ಕಾನೂನು ಅಧಿಕಾರಿ ಗಳ ನೇಮಕ, ಭ್ರಷ್ಟಾಚಾರ ನಿಗ್ರಹ ಮಂಡಳಿಗೆ ಸಂಬಂಧಿಸಿದ ನಿರ್ಧಾರಗಳನ್ನೂ ಲೆ| ಗವರ್ನರ್‌ ಅವರೇ ತೆಗೆದುಕೊಳ್ಳಲಿದ್ದಾರೆ. ಈ ಬಗ್ಗೆ ಯಾವುದೇ ನಿರ್ಧಾರವನ್ನು ಪ್ರಾದೇಶಿಕ ಸರಕಾರ ಮಾಡಿದರೂ ಅದನ್ನು ಬದಲಿಸುವ, ತಿರಸ್ಕರಿಸುವ ಅಧಿಕಾರ ಲೆ| ಗವರ್ನರ್‌ಗಿರುತ್ತದೆ. ಹಾಗೆಯೇ ಕಾರಾಗೃಹಕ್ಕೆ ಸಂಬಂಧಿಸಿದ ವಿಚಾರಣ ಇಲಾಖೆಯಲ್ಲೂ ಲೆ| ಗವರ್ನರ್‌ರಿಗೇ ಅಂತಿಮ ಅಧಿಕಾರವಿರುತ್ತದೆ.

ರಾಜ್ಯ ಸ್ಥಾನಮಾನ ಸದ್ಯಕ್ಕಿಲ್ಲ ಎಂಬ ಸುಳಿವು: ಕಾಂಗ್ರೆಸ್‌
ಲೆ| ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡಿರುವ ಕೇಂದ್ರ ಸರಕಾರದ ನಿರ್ಧಾರವು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಾಂಗ್ರೆಸ್‌ ಬಣ್ಣಿಸಿದೆ. ಅಲ್ಲದೆ ಇದು ಜಮ್ಮು -ಕಾಶ್ಮೀರಕ್ಕೆ ಪೂರ್ಣ ಪ್ರಮಾಣದ ರಾಜ್ಯ ಸ್ಥಾನಮಾನ ಕನಸಾಗಿಯೇ ಉಳಿಯಲಿದೆ ಎಂಬ ಸುಳಿವನ್ನು ಇದು ನೀಡಿದೆ. ಸದ್ಯಕ್ಕಂತೂ ರಾಜ್ಯ ಸ್ಥಾನಮಾನ ಸಿಗುವುದಿಲ್ಲ ಎಂಬುದನ್ನು ಪರೋಕ್ಷವಾಗಿ ಕೇಂದ್ರ ಸರಕಾರ ಸ್ಪಷ್ಟಪಡಿಸಿದಂತಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಹೇಳಿದ್ದಾರೆ. ಕಾಂಗ್ರೆಸ್‌ ಮಾತ್ರವಲ್ಲದೆ ನ್ಯಾಶನಲ್‌ ಕಾನ್ಫರೆನ್ಸ್‌, ಅಪ್ನಿ ಪಾರ್ಟಿ, ಪಿಡಿಪಿ ಕೂಡ ಭಾರೀ ವಿರೋಧ ವ್ಯಕ್ತಪಡಿಸಿವೆ. ಇದು ಕಾಶ್ಮೀರದ ಜನರ ಸಂಪೂರ್ಣ ಅಧಿಕಾರವನ್ನು ಕಿತ್ತುಕೊಳ್ಳುತ್ತದೆ. ಈ ನಿರ್ಧಾರವನ್ನು ಎಲ್ಲ ಪಕ್ಷಗಳು ಒಗ್ಗೂಡಿ ವಿರೋಧಿಸಬೇಕೆಂದು ಅಪ್ನಿ ಪಾರ್ಟಿ ಹೇಳಿದೆ. ಇದು ಜಮ್ಮು-ಕಾಶ್ಮೀರದ ಚುನಾಯಿತ ಸರಕಾರದ ಅಧಿಕಾರವನ್ನು ಕಿತ್ತುಕೊಳ್ಳುವ ಹುನ್ನಾರ ಇದು ಎಂದು ಪಿಡಿಪಿ ಹೇಳಿದೆ.

ಗುಮಾಸ್ತನ ನೇಮಕಕ್ಕೂ ಸಿಎಂ ಭಿಕ್ಷೆ ಬೇಡಬೇಕಾದ ಸ್ಥಿತಿ: ಒಮರ್‌ ಅಬ್ದುಲ್ಲಾ
ಮಾಜಿ ಸಿಎಂ, ನ್ಯಾಶನಲ್‌ ಕಾನ್ಫರೆನ್ಸ್‌ ನಾಯಕ ಒಮರ್‌ ಅಬ್ದುಲ್ಲಾ ಅವರು ಪ್ರತಿಕ್ರಿಯಿಸಿ, “ಕಾಶ್ಮೀರದ ಜನರಿಗೆ ಇದಕ್ಕಿಂತ ಹೆಚ್ಚಿನದ್ದನ್ನು ಪಡೆಯುವ ಅರ್ಹತೆಯಿದೆ. ಒಬ್ಬ ಗುಮಾಸ್ತನ ನೇಮಕಕ್ಕೂ ಲೆಫ್ಟಿನೆಂಟ್‌ ಗವರ್ನರ್‌ರ ಮುಂದೆ ಭಿಕ್ಷೆ ಬೇಡಬೇ ಕಾದಂಥ ಅಧಿಕಾರರಹಿತ, ರಬ್ಬರ್‌ ಸ್ಟಾಂಪ್‌ ಮುಖ್ಯಮಂತ್ರಿ ಬೇಕಿಲ್ಲ’ ಎಂದು ಹೇಳಿದ್ದಾರೆ. ಅಲ್ಲದೆ ಕೇಂದ್ರದ ಈ ನಿರ್ಧಾರ ಜಮ್ಮು-ಕಾಶ್ಮೀರದಲ್ಲಿ ಸದ್ಯವೇ ಚುನಾವಣೆ ನಡೆಯುವ ಸುಳಿವನ್ನು ನೀಡಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.