JDU ರಾಷ್ಟ್ರೀಯ ವಕ್ತಾರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಕೆ.ಸಿ.ತ್ಯಾಗಿ:ಡ್ಯಾಮೇಜ್ ಕಂಟ್ರೋಲ್?
ಬಿಜೆಪಿಗೆ ಸರಿ ಹೊಂದದ ಹೇಳಿಕೆಗಳು...
Team Udayavani, Sep 1, 2024, 7:01 PM IST
ಹೊಸದಿಲ್ಲಿ: ಜೆಡಿಯು(JDU) ನಾಯಕ ಕೆ.ಸಿ.ತ್ಯಾಗಿ ಅವರು ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತತ್ ಕ್ಷಣವೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತ್ಯಾಗಿ ಅವರ ಸ್ಥಾನಕ್ಕೆ ರಾಜೀವ್ ರಂಜನ್ ಪ್ರಸಾದ್ ಅವರನ್ನು ನೇಮಕ ಮಾಡಿದ್ದಾರೆ.
ವೈಯಕ್ತಿಕ ಕಾರಣಗಳಿಗಾಗಿ ತ್ಯಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಪಕ್ಷವು ಹೇಳಿದ್ದರೂ, ಪ್ರಮುಖ ವಿಷಯಗಳ ಕುರಿತು ತ್ಯಾಗಿ ಅವರ ಹೇಳಿಕೆಗಳು ಮಿತ್ರ ಪಕ್ಷ ಬಿಜೆಪಿ(BJP) ನಾಯಕತ್ವದೊಂದಿಗೆ ಸರಿಹೋಗದ ನಂತರ ಈ ಬೆಳವಣಿಗೆಯನ್ನು ಜೆಡಿಯುನ ಡ್ಯಾಮೇಜ್ ಕಂಟ್ರೋಲ್ ಎಂದು ಹೇಳಲಾಗುತ್ತಿದೆ.
”ನಾನು ಇನ್ನೂ ಪಕ್ಷದಲ್ಲಿದ್ದೇನೆ, ನಾನು ಪಕ್ಷದ ರಾಜಕೀಯ ಸಲಹೆಗಾರ, ನಿತೀಶ್ ಕುಮಾರ್ ಅವರೊಂದಿಗೆ ನನಗೆ ರಾಜಕೀಯ ಬದ್ಧತೆ ಇದೆ, ನಾನು ಅಸಮಾಧಾನಗೊಂಡಿಲ್ಲ, ನಿರಾಶೆಗೊಂಡಿಲ್ಲ, ನಾನು ಉಲ್ಲಾಸದಿಂದಿದ್ದೇನೆ, ನಾನು ಪಕ್ಷದ ವಕ್ತಾರ ಹುದ್ದೆಗೆ ರಾಜೀನಾಮೆ ನೀಡಿದ್ದೇನಷ್ಟೇ ” ಎಂದು ತ್ಯಾಗಿ ಹೇಳಿಕೆ ನೀಡಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆ, ಏಕರೂಪ ನಾಗರಿಕ ಸಂಹಿತೆ ಮತ್ತು ಇತ್ತೀಚೆಗೆ ಗಾಜಾದಲ್ಲಿನ ಯುದ್ಧದಂತಹ ಪ್ರಮುಖ ವಿಷಯಗಳ ಕುರಿತು ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ನೀಡಿದ ತ್ಯಾಗಿ ಅವರ ಹೇಳಿಕೆಗಳು ಬಿಜೆಪಿಯವರ ಕಣ್ಣು ಕೆಂಪಾಗುವಂತೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.