ಕೇರಳ; ಪಾದ್ರಿ ಸೇರಿ 50 ಕ್ರಿಶ್ಚಿಯನ್ ಕುಟುಂಬಗಳು ಕಮಲ ಪಕ್ಷ ಸೇರ್ಪಡೆ
Team Udayavani, Jan 1, 2024, 2:22 AM IST
ತಿರುವನಂತಪುರ: ಕೇರಳದಲ್ಲಿ ಕ್ರಿಶ್ಚಿಯನ್ನರ ವಿಶ್ವಾಸ ಗಳಿಸಲು ಬಿಜೆಪಿ ಸ್ನೇಹಯಾತ್ರೆ ಕಾರ್ಯಕ್ರಮ ಆಯೋಜಿಸಿರುವಂತೆಯೇ ಓರ್ವ ಪಾದ್ರಿ ಸಹಿತ 50 ಕ್ರಿಶ್ಚಿಯನ್ ಕುಟುಂಬಗಳು ರವಿವಾರ ಬಿಜೆಪಿಗೆ ಸೇರ್ಪಡೆ ಗೊಂಡಿರುವುದು ವರದಿಯಾಗಿದೆ.
ಈ ಸಂಬಂಧಿಸಿದಂತೆ ಬಿಜೆಪಿ ಕೇರಳ ಘಟಕವು ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ಆ ಪ್ರಕಾರ ಕೇಂದ್ರ ಖಾತೆ ಸಹಾ ಯಕ ಸಚಿವರಾದ ವಿ.ಮುರಳೀಧರನ್ ಅವರ ನೇತೃತ್ವದಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆ ನೀಲಕ್ಕಲ್ ಭದ್ರಾಸನಂನ ಆರ್ಥೊಡಾಕ್ಸ್ ಚರ್ಚ್ ಕಾರ್ಯದರ್ಶಿ ಫಾದರ್ ಶೈಜು ಕುರಿಯನ್ ಹಾಗೂ 50 ಕ್ರಿಶ್ಚಿಯನ್ ಕುಟುಂಬಗಳು ಬಿಜೆಪಿ ಸೇರ್ಪಡೆ ಗೊಂಡಿವೆ ಎಂದು ತಿಳಿಸಲಾಗಿದೆ.
ಇದೇ ವೇಳೆ ಬಿಜೆಪಿ ಸೇರ್ಪಡೆಗೊಂಡ ಕ್ರಿಶ್ಚಿಯನ್ನರಿಗೆ ಜಾಲತಾಣದಲ್ಲಿ ಕಾಂಗ್ರೆಸ್ ಹಾಗೂ ಸಿಪಿಎಂ ಬೆಂಬಲಿಗರು ಕಾಮೆಂಟ್ಗಳಲ್ಲಿ ಬೆದರಿಕೆ ಹಾಕಿದ್ದಾರೆಂದೂ ಬಿಜೆಪಿ ಆರೋಪಿಸಿದ್ದು, ಹೀಗೇ ಮುಂದುವರಿದರೆ ತಕ್ಕ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.