Piracy: ‘ರಾಯನ್’ ಚಿತ್ರದ ಪೈರಸಿ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ತಮಿಳು ರಾಕರ್ಸ್ ಅಡ್ಮಿನ್


Team Udayavani, Jul 29, 2024, 9:03 AM IST

1

ಕೊಚ್ಚಿ: ಥಿಯೇಟರ್‌ ನಲ್ಲಿ ಸಿನಿಮಾವನ್ನು ರಹಸ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಡುತ್ತಿದ್ದ ಕುಖ್ಯಾತ ತಮಿಳು ರಾಕರ್ಸ್‌ (Tamil Rockers) ಗುಂಪಿನ ಅಡ್ಮಿನ್‌ ನೊಬ್ಬನನನ್ನು ಕೊಚ್ಚಿಯ ಸೈಬರ್‌ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಮಧುರೈ ಮೂಲದ ಜೆಬ್‌ ಸ್ಟೀಫನ್‌ ರಾಜ್(33)‌ ಬಂಧಿತ. ಈತ ತಿರುವನಂತಪುರಂ ಥಿಯೇಟರ್‌ನಲ್ಲಿ ಇತ್ತೀಚೆಗೆ ತೆರೆಕಂಡ ಧನುಷ್‌ ಅವರ “ರಾಯನ್” ಸಿನಿಮಾವನ್ನು ಮೊಬೈಲ್‌ ನಲ್ಲಿ ಚಿತ್ರೀಕರಿಸುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸಿಕ್ಕಿಬಿದ್ದದ್ದು ಹೇಗೆ?:  ಇತ್ತೀಚೆಗೆ ಪೃಥ್ವಿರಾಜ್‌ ಸುಕುಮಾರನ್ ಅವರ ʼಗುರುವಾಯೂರ್‌ ಅಂಬಲನಡಾಯಿಲ್‌ʼ ಸಿನಿಮಾ ರಿಲೀಸ್‌ ಆದ ಒಂದೇ ದಿನದಲ್ಲಿ ಅದರ ಕಾಪಿಯನ್ನು ಪೈರಸಿ (Piracy) ಮಾಡಲಾಗಿತ್ತು. ಇದರ ಬಗ್ಗೆ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಸುಪ್ರಿಯಾ ಮೆನನ್ ಅವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು. ಇದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದರು.

ಶುಕ್ರವಾರ (ಜು.26ರಂದು) ಆರೋಪಿಯನ್ನು ವಶಕ್ಕೆ ಪಡೆದು, ಶನಿವಾರ ವಿಚಾರಣೆ ನಡೆಸಿದ್ದಾರೆ. “ಕಲ್ಕಿ” ಮತ್ತು “ಮಹಾರಾಜ”ನಂತಃ ಸಿನಿಮಾಗಳನ್ನು ಈತ ಪೈರಸಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಯ ಮೊಬೈಲ್‌ ಪರಿಶೀಲಿಸಿದಾಗ, ಆತನ ಮೊಬೈಲ್‌ ನಲ್ಲಿ ಹೆಚ್‌ ಡಿ ಕ್ವಾಲಿಟಿಯ ಅನೇಕ ಸಿನಿಮಾಗಳಿದ್ದವು. ಸ್ಟೀಫನ್ ರಾಜ್ ಯಾರಿಗೂ ತಿಳಿಯದಂತೆ ಥಿಯೇಟರ್‌ ಸೀಟ್‌ ನಲ್ಲಿನ ಕಪ್‌ ಹೋಲ್ಡರ್‌ ನಲ್ಲಿ ಮೊಬೈಲ್‌ ಇಟ್ಟು ಸಿನಿಮಾವನ್ನು ರಹಸ್ಯವಾಗಿ ಚಿತ್ರೀಕರಿಸುತ್ತಿದ್ದ ಎಂದು ವಿಚಾರಣೆ ವೇಳೆ ಗೊತ್ತಾಗಿದೆ.

ಒಂದೂವರೆ ವರ್ಷದಿಂದ ತಿರುವನಂತಪುರಂನ ಹೊಟೇಲ್‌ ನಲ್ಲಿ ಕೆಲಸ ಮಾಡುತ್ತಿದ್ದ ಈತ ಪೈರಸಿ ಗ್ಯಾಂಗ್‌ ನೊಂದಿಗೆ ನಂಟು ಹೊಂದಿದ್ದ. ಪೈರಸಿ ಮಾಡುವ ಚಿತ್ರಗಳ ಬುಕಿಂಗ್ ನ್ನು ಮುಂಚಿತವಾಗಿ ಮಾಡುತಿದ್ದ ಜೆಬ್, ಅದನ್ನು ತನ್ನ ದುಬಾರಿ ಫೋನಿನಲ್ಲಿ ಚಿತ್ರೀಕರಿಸಿ, ಆ ಬಳಿಕ ವಾಟ್ಸಾಪ್ ಮೂಲಕ ಇತರೆ ಅಡ್ಮಿನ್ ಗಳಿಗೆ ಹೇಳುತ್ತಿದ್ದ.

ರೆಕಾರ್ಡ್ ಮಾಡಿದ ಚಿತ್ರಗಳನ್ನು ಅಪ್ ಲೋಡ್ ಮಾಡಲು ತಮಿಳು ರಾಕರ್ಸ್ ಅಡ್ಮಿನ್ ಗಳಿಂದ 5000 ರೂ ಪಡೆಯುತ್ತಿದ್ದ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

ಸಂಸದ ಜಗದೀಶ್ ಶೆಟ್ಟರ್

Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ‌: ಶೆಟ್ಟರ್

15-ankola

Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

1-joshi

Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ

16-flipkart

Flipkart Big Billion Day ಸೆ. 27 ರಿಂದ ಆರಂಭ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.