Anti-national activities ವಿರುದ್ಧ ಕ್ರಮಕ್ಕೆ ಸಿಎಂ ವಿಜಯನ್ ಮೌನ: ಕೇರಳ ರಾಜ್ಯಪಾಲ
ಗವರ್ನರ್ vs ಸರಕಾರ; ಮತ್ತೊಂದು ಸುತ್ತಿನ ಸಮರ ಆರಂಭ
Team Udayavani, Oct 9, 2024, 9:15 AM IST
ತಿರುವನಂತಪುರಂ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದಲ್ಲಿ ನಡೆಯುತ್ತಿರುವ ದೇಶವಿರೋಧಿ ಮತ್ತು ರಾಜ್ಯ ವಿರೋಧಿ ಚಟುವಟಿಕೆಗಳ ಬಗ್ಗೆ ಮಾಹಿತಿಗಾಗಿ ಮಾಡಿದ ಮನವಿಗೆ ಮೌನ, ನಿಷ್ಕ್ರಿಯತೆ ಮತ್ತು ಅತಿಯಾದ ವಿಳಂಬ ಧೋರಣೆ ತೋರುತ್ತಿದ್ದಾರೆ ಎಂದು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಮಂಗಳವಾರ(ಅ8 ) ಆರೋಪಿಸಿದ್ದಾರೆ.
ಚುನಾಯಿತ ಸರ್ಕಾರಕ್ಕೆ ತಿಳಿಸದೆ ರಾಜ್ಯಪಾಲರು ಅಧಿಕಾರಿಗಳನ್ನು ಕರೆಸುವಂತಿಲ್ಲ ಎಂದು ವಿಜಯನ್ ಅವರು ಖಾನ್ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಈ ಕಟುಆರೋಪ ಬಂದಿದೆ.
ರಾಜ್ಯಕ್ಕೆ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿದ್ದು ಅದರಿಂದ ಬರುವ ಹಣವನ್ನು ದೇಶವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ ಎಂದು ಇತ್ತೀಚೆಗೆ ವರದಿ ಮಾಡಿರುವ ಕುರಿತು ಮುಖ್ಯ ಕಾರ್ಯದರ್ಶಿ ಶಾರದಾ ಮುರಳೀಧರನ್ ಮತ್ತು ಡಿಜಿಪಿ ಶೇಕ್ ದರ್ವೇಶ್ ಸಾಹೇಬ್ ಅವರಿಂದ ಸಂಕ್ಷಿಪ್ತ ವಿವರಣೆಯನ್ನು ಕೋರಿ ಪತ್ರವನ್ನು ಬರೆಯಲಾಗಿತ್ತು. ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿರುವ ಫೋನ್ ಕದ್ದಾಲಿಕೆ ಆರೋಪಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನೂ ರಾಜ್ಯಪಾಲರು ಕೇಳಿದ್ದರು. ಪತ್ರ ಬರೆದ ಬಳಿಕ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಇಬ್ಬರೂ ರಾಜ್ಯಪಾಲರನ್ನು ಭೇಟಿ ಮಾಡಿರಲಿಲ್ಲ.
”ರಾಷ್ಟ್ರವಿರೋಧಿ ಚಟುವಟಿಕೆಗಳಂತಹ ಗಂಭೀರ ವಿಷಯಗಳ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡುವ ಮತ್ತು ರಾಜ್ಯಪಾಲರ ಮನವಿಯನ್ನು ವಾಡಿಕೆಯ ಆಡಳಿತಾತ್ಮಕ ವಿಷಯವಾಗಿ ಪರಿಗಣಿಸುವ ತನ್ನ ಸಾಂವಿಧಾನಿಕ ಕರ್ತವ್ಯದಿಂದ ಹಿಂದೆ ಸರಿಯುವ ಸರಕಾರವು ಸಾಂವಿಧಾನಿಕ ನಿಬಂಧನೆಗಳು ಮತ್ತು ಸಾಂವಿಧಾನಿಕ ನೈತಿಕತೆಗೆ ವಿರುದ್ಧವಾಗಿ ವರ್ತಿಸುವ ಅಪಾಯವನ್ನು ಎದುರಿಸುತ್ತಿದೆ” ಎಂದು ರಾಜ್ಯಪಾಲ ಆರಿಫ್ ಖಾನ್ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Federalism..; ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
Power…; ವಿನೇಶ್ ಫೋಗಾಟ್ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಬ್ರಜ್ ಭೂಷಣ್!
Haryana Election Result: ಹರಿಯಾಣದಲ್ಲಿ ಅಭಿವೃದ್ಧಿ ಗ್ಯಾರಂಟಿ ಗೆದ್ದಿದೆ: ಪ್ರಧಾನಿ ಮೋದಿ
National Film Award: ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪ್ರದಾನ
Haryana-JK Election: ಎರಡೂ ರಾಜ್ಯಗಳಲ್ಲಿ ಎಕ್ಸಿಟ್ ಪೋಲ್ ಫೇಲ್!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್ ಶಕ್ತಿಕಾಂತ್ ದಾಸ್
Haryana; ಬಿಜೆಪಿಗೆ ಸೆಡ್ದು ಹೊಡೆದು ಪಕ್ಷೇತರರಾಗಿ ಗೆದ್ದ ದೇಶದ ಶ್ರೀಮಂತ ಮಹಿಳೆ !
Ankola:ಸಂಭವನೀಯ ರೈಲು ಅಪಘಾತ ತಪ್ಪಿಸಿದ ಟ್ರ್ಯಾಕ್ಮ್ಯಾನ್ ಗೆ ರೈಲ್ವೆಅಧಿಕಾರಿಗಳಿಂದ ಸನ್ಮಾನ
High Court: ವಕೀಲರ ವಾಕ್ ಸ್ವಾತಂತ್ರ್ಯ ನಿರ್ಬಂಧಿಸುವ ಅಧಿಕಾರ ಬಾರ್ ಕೌನ್ಸಿಲ್ಗೆ ಇಲ್ಲ
Arrested: ತ.ನಾಡಿನಿಂದ ಬಂದು ಲ್ಯಾಪ್ಟಾಪ್ ಕಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.