![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jul 11, 2022, 7:53 PM IST
ತ್ರಿಶೂರು: ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅತ್ಯಂತ ಉದಾರ ನಡೆಯೊಂದರ ಮೂಲಕ ಮೇಲ್ಪಂಕ್ತಿಯೊಂದನ್ನು ಹಾಕಿಕೊಟ್ಟಿದ್ದಾರೆ.
ಜೀವಂತ ಉಳಿಯಬೇಕಾದರೆ ಕಿಡ್ನಿ ಮರುಜೋಡಣೆ ಮಾಡಿಸಿಕೊಳ್ಳಲೇಬೇಕಾದ ಸ್ಥಿತಿಯಲ್ಲಿದ್ದ ವ್ಯಕ್ತಿಯ ದುರ್ದೆಸೆಯನ್ನು ಗಮನಿಸಿದ ಅವರು; ತಮ್ಮ ಒಂದು ಬಂಗಾರದ ಬಳೆಯನ್ನೇ ಬಿಚ್ಚಿಕೊಟ್ಟಿದ್ದಾರೆ.
ಇದನ್ನೇ ವ್ಯಕ್ತಿಯ ನೆರವಿಗೆ ಮೊದಲ ದೇಣಿಗೆಯಾಗಿ ಸ್ವೀಕರಿಸಬೇಕೆಂದು ಕೇಳಿಕೊಂಡಿದ್ದಾರೆ. ಇದು ಭಾರೀ ಜನಮೆಚ್ಚುಗೆ ಪಡೆದಿದೆ.
ಈ ಘಟನೆ ನಡೆದಿದ್ದು ತ್ರಿಶೂರಿನ ಇರಿಂಜಾಲಕುಡದಲ್ಲಿ ಪ್ರದೇಶದಲ್ಲಿ. ಅಲ್ಲಿನ ವೈದ್ಯಕೀಯ ನೆರವು ಸಮಿತಿ ಕಿಡ್ನಿ ಮರುಜೋಡಣೆಗಾಗಿ ಒಂದು ಸಭೆ ನಡೆಸಿತ್ತು. ಅದರಲ್ಲಿ ಬಿಂದು ಅವರು ಪಾಲ್ಗೊಂಡಿದ್ದರು.
ಈ ವೇಳೆ 27 ವರ್ಷದ ವಿವೇಕ್ ಪ್ರಭಾಕರ್ ಅವರ ದುಸ್ಥಿತಿಯನ್ನು ಗಮನಿಸಿದ್ದಾರೆ. ಕೂಡಲೇ ಅವರು ತಮ್ಮ ಬಳೆಯನ್ನು ಬಿಚ್ಚಿ ನೀಡಿದ್ದಾರೆ. ಇದು ಬರೀ ಕೇರಳಕ್ಕೆ ಮಾತ್ರವಲ್ಲ, ದೇಶದ ಇತರೆ ಭಾಗದ ಜನತೆಗೂ ಮಾದರಿಯಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.